Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಡಿಯೂರಪ್ಪ ಅವರಿಗೆ ಇಂದು ಜೈಲಾ..? ಬೇಲಾ..?

Facebook
Twitter
Telegram
WhatsApp

ಬೆಂಗಳೂರು: ಫೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಮಾಜಿ ಸಿಎಂ ಬಿಎದ್ ಯಡಿಯೂರಪ್ಪ ಅವರು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇಂದು ಅರ್ಜಿ ವಿಚಾರಣೆ ನಡೆಯಲಿದ್ದು, ಕೋರ್ಟ್ ನೀಡುವ ತೀರ್ಪಿನ ಮೇಲೆ ಯಡಿಯೂರಪ್ಪ ಅವರಿಗೆ ಜೇಲಾ..? ಬೇಲಾ ಎಂಬುದು ತೀರ್ಮಾನವಾಗಲಿದೆ.

ನಿನ್ನೆಯಷ್ಟೇ ಬೆಂಗಳೂರಿನ ನ್ಯಾಯಾಲಯ ಯಡಿಯೂರಪ್ಪ ಅವರ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಹೀಗಾಗಿ ಸಿಐಡಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆಯಲು ಕಾಯುತ್ತಿದ್ದಾರೆ. ಇಂದು ಕೋರ್ಟ್ ಏನಾದರೂ ಜಾಮೀನು ಅರ್ಜಿಯನ್ನು ತಿರಸ್ಕಾರ ಮಾಡಿದರೆ ಯಡಿಯೂರಪ್ಪ ಅವರ ಬಂಧನವಾಗುವುದು ಗ್ಯಾರಂಟಿ ಎನ್ನಲಾಗಿದೆ.

ಇನ್ನು ಈ ಫೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ಅವರ ಆಪ್ತರ ಮೇಲೆ ಸಾಕ್ಷ್ಯ ನಾಶ ಮಾಡಿದ ಆರೋಪವೂ ಇದೆ‌. ಅರುಣ್ ಹಾಗೂ ರುದ್ರೇಶ್ ಹಾಗೂ ಮರಿಸ್ವಾಮಿ ಎಂಬುವವರನ್ನೂ ಪ್ರಕರಣದ ಆರೋಪಿಗಳನ್ನಾಗಿ ತನಿಖಾ ತಂಡ ಗುರುತಿಸಿದೆ. ಸಾಕ್ಷಿಗಳನ್ನು ನಾಶ ಮಾಡಿರುವುದು, ಪ್ರಭಾವ ಬೀರಿದ ಹಿನ್ನಲೆಯಲ್ಲಿ ಅವರನ್ನು ಸಿಆರ್ಪಿಸಿ 41ರ ಅಡಿಯಲ್ಲಿ ಆರೋಪಿಗಳನ್ನಾಗಿ ಪರಿಗಣಿಸಿ ನೋಟೀಸ್ ಜಾರಿ ಮಾಡಲಾಗಿದೆ.

ಬಿಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಯ ತಾಯಿ ದೂರು ನೀಡಿದ್ದರು. ಪ್ರಕರಣ ದಾಖಲೊಸಿಕೊಂಡಿದ್ದ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಸಾಕಷ್ಟು ಬಾರಿ ನೋಟೀಸ್ ನೀಡಿದರು ವಿಚಾರಣೆಗೆ ಹಾಜರಾಗದ ಯಡಿಯೂರಪ್ಪ ವಿರುದ್ಧ ಸಿಐಡಿ ಪೊಲೀಸರು, ನ್ಯಾಯಲಯದ ಮೊರೆ ಹೋಗಿದ್ದರು. ನ್ಯಾಯಾಲಯದಿಂದ ಬಂಧನದ ವಾರೆಂಟ್ ಪಡೆದುಕೊಂಡಿದ್ದರು. ಬಳಿಕ ಯಡಿಯೂರಪ್ಪ ಅವರು ಎಚ್ಚೆತ್ತುಕೊಂಡು ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಜಾಮೀನು ಸಿಗದೆ ಹೋದಲ್ಲಿ ಯಡಿಯೂರಪ್ಪ ಅವರ ಬಂಧನವೂ ಆಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ

ಹಂಪಿ ಉತ್ಸವದಂತೆ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಐತಿಹಾಸಿಕ ಏಳು ಸುತ್ತಿನ ಕೋಟೆಯಿರುವ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ

ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅಮಾನತು

ಚಿತ್ರದುರ್ಗ. ಸೆ.27: ಪದೇ ಪದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗುವುದು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷö್ಯ ತೋರಿದ ಕಾರಣಕ್ಕಾಗಿ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ

error: Content is protected !!