Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆಯಿಂದ 500 ಎಕರೆ ಭೂಮಿ

ಡಿಕೆ ಶಿವಕುಮಾರ್
---Advertisement---

 

 

ಬೆಂಗಳೂರು: ಎತ್ತಿನಹೊಳೆ ಯೋಜನೆ ಮಾಡಲು ಬಿರುಸಿನ ಕೆಲಸಗಳು ನಡೆಯುತ್ತಿವೆ. ಆದರೆ ಈ ಯೋಜನೆಗೆ 500ಎಕರೆ ಭೂಮಿಯ ಅವಶ್ಯಕತೆ ಇದ್ದು, ಇದೀಗ ಅರಣ್ಯ ಇಲಾಖೆ ಈ ಭೂಮಿಯನ್ನು ಕೊಡುವುದಕ್ಕೆ ತೀರ್ಮಾನ ಮಾಡಿದೆ. ಕೃಷ್ಣ ಭೈರೇಗೌಡ ಹಾಗೂ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಜೊತೆಗೆ ಸಮನ್ವಯ ಸಭೆ ನಡೆಸಿ, ಆ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದಾರೆ.

ಈ ಸಂಬಂಧ ಮಾತನಾಡಿರುವ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮರ್ ಅವರು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲು ಸಭೆ ಕರೆಯಲಾಗಿದೆ. ಈಗ ಅರಣ್ಯ ಇಲಾಖೆಯು ಭೂಮಿಯನ್ನು ನೀಡುವುದಕ್ಕೆ ಒಪ್ಪಿಗೆ ನೀಡಿದೆ. ಕಂದಾಯ ಇಲಾಖೆಗೆ ಪರ್ಯಾಯವಾಗಿ 500 ಎಕರೆಯನ್ನು ಬೇರೆ ಸ್ಥಳದಲ್ಲು ನೀಡಲಿದೆ. ನಾವೂ ಈ ಪ್ರಕ್ರಿಯೆಯನ್ನು ಕಾನೂನಿನ ಚೌಕಟ್ಟಿನ ಒಳಗೆಯೇ ಪೂರ್ಣಗೊಳಿಸುತ್ತೇವೆ‌ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆಯನ್ನು ಗಮನಿಸಿ ಗುರುತಿಸಿಕೊಳ್ಳಲಾಗಿದೆ. 60 ಕಿ.ಮೀ ವ್ಯಾಪ್ತಿಯಲ್ಲಿ ಕನಿಷ್ಠ 20 ಸಮಸ್ಯೆಗಳನ್ನು ಪರಿಹರಿಸಬೇಕು. ಕಂದಾಯ ಮತ್ತು ಜಲಸಂಪನ್ಮೂಲ ಇಲಾಖೆಗಳೊಂದಿಗೆ ಅರಣ್ಯ ಇಲಾಖೆ ಜಂಟು ಸಮೀಕ್ಷೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿರುವ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯ ಸರ್ಕಾರ ರೈತರಿಗೆ ಕೆಲವೆಡೆ 51 ಕೋಟಿ ರೂಪಾಯಿ ಪಾವತಿಸಬೇಕಿದ್ದು, ಅದರಲ್ಲಿ ಈಗಾಗಲೇ 10 ಕೋಟಿ ರೂಪಾಯಿ ಪಾವತಿಸಲಾಗಿದೆ. ಅರಣ್ಯ ಅಥವಾ ಕಂದಾಯ ಇಲಾಲಕೆಗೆ ಸೇರಿದ ಜಮೀನಿನ ಕುರಿತು ಕೆಲ ಗೊಂದಲಗಳಿದ್ದು, ಅವುಗಳನ್ನು ಸಚಿವ ಸಂಪುಟದ ಮುಂದೆ ಇಟ್ಟು ವಿಂಗಡಿಸಲಾಗುವುದು. ದೊಡ್ಡಬಳ್ಳಾಪುರದ ಲಕ್ಕೇನಹಳ್ಳಿ ಬಳಿ ಸಮತೋಲನ ಜಲಾನಯನ ಕಾಮಗಾರಿ ಇನ್ನಷ್ಟೇ ಆರಂಭವಾಗಬೇಕಿದ್ದು, ಕಾಮಗಾರಿ ಆರಂಭಿಸಲು ಸಿದ್ಧತೆ ನಡೆಸಲಾಗುವುದು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment