Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಣುಕಾಸ್ವಾಮಿ ಕೊಲೆ : ಚಿತ್ರದುರ್ಗ ಅನಿಲ್ ಅರೆಸ್ಟ್..! ತಾಯಿಯ ಕಣ್ಣೀರು

Facebook
Twitter
Telegram
WhatsApp

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನೇ ದಿನೇ ಶಾಕಿಂಗ್ ಡೆವಲಪ್ಮೆಂಟ್ ಆಗುತ್ತಿವೆ. ಈ ಕೇಸಲ್ಲಿ ಅಭಿಮಾನಿಗಳು ಕೀಡ ತಗಲಾಕಿಕೊಳ್ಳುತ್ತಿದ್ದಾರೆ. ಈಗಾಗಲೇ ಹದಿನಾಲ್ಕು ಜನ ಈ ಕೇಸಲ್ಲಿ ಅರೆಸ್ಟ್ ಆಗಿದ್ರು, ಈಗ ಚಿತ್ರದುರ್ಗ ಮೂಲದ ಅನು ಕೂಡ ಅರೆಸ್ಟ್ ಆಗಿದ್ದಾನೆ.

ಅನು ಅಲಿಯಾಸ್ ಅನಿಲ್ ಕುಮಾರ್. ಈತ ಮೂಲತಃ ಚಿತ್ರದುರ್ಗದವನು. ಸಿಹಿ ನೀರು ಹೊಂಡದ ರಸ್ತೆಯಲ್ಲಿಯೇ ಈತನ ಮನೆಯಿದೆ. ಜಯಮ್ಮ ಹಾಗೂ ಚಂದ್ರಪ್ಪ ಎಂಬ ದಂಪತಿಯ ಮಗ. ಮೊದಲು ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ. ಮೂರು ವರ್ಷದಿಂದ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ತಾನಾಯ್ತು ತನ್ನ ಸಂಸಾರವಾಯ್ತು ಎಂಬ ಜವಾಬ್ದಾರಿಯುತ ಹುಡುಗನಾಗಿದ್ದ. ಆದರೆ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷನಾಗಿರುವ ರಾಘವೇಂದ್ರ ಮಾತು ಕೇಳಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಮನೆಗೆ ಇದ್ದ ಮಗ ಜೈಲು ಸೇರಿರುವುದಕ್ಕೆ ಅನು ಮನೆಯವರು ಕಣ್ಣೀರು ಹಾಕುತ್ತಾ ಕುಳಿತಿದ್ದಾರೆ. ಅದನ್ನು ಬಿಟ್ಟರೆ ಬೇರೆ ದಾರಿ ಕಾಣಿಸುತ್ತಿಲ್ಲ. ನನ್ನ ಮಗನಿಗೆ ಏನು ಗೊತ್ತಿಲ್ಲ. ಬಡವರ ಮಕ್ಕಳಿಗೆ ಅನ್ಯಾಯ ಮಾಡಿದ್ದಾರೆ. ನಟ ದರ್ಶನ್ ಭೇಟಿ ಮಾಡಿಸುವ ನೆಪವೊಡ್ಡಿ ಇಲ್ಲಿಂದ ಕರೆದುಕೊಂಡು ಹೋಗಿದ್ದರು. ಅನು ಮನೆಯ ಆಧಾರಸ್ತಂಭವಾಗಿದ್ದ ಎಂದು ತಾಯಿ ಜಯಮ್ಮ ಕಣ್ಣೀರು ಹಾಕಿದ್ದಾರೆ.

ಇನ್ನು ತಾಯಿ ಜಯಮ್ಮ ಕೂಡ ಮನೆಯ ಕೆಲಸ ಮಾಡುತ್ತಾ ಬದುಕಿಗೆ ಸಹಾಯವಾಗಿ ನಿಂತಿದ್ದರು. ಈಗ ಮನೆಯಲ್ಲಿ ನಾಲ್ಕೈದು ದಿನಗಳಿಂದ ಆತಂಕ ಶುರುವಾಗಿದೆ. ದೊಡ್ಡವರೆಲ್ಲಾ ಹೇಗೋ ಬಚಾವ್ ಆಗಿ ಬಿಡುತ್ತಾರೆ. ಆಟೋ ಚಾಲನೆ ಮಾಡಿ ಅಂದಿನ ಜೀವನಕ್ಕೆ ಹಣ ಒದಗಿಸಿಕೊಳ್ಳುತ್ತಿದ್ದ ಅನಿಲ್ ಏನು ಮಾಡುವುದಕ್ಕೆ ಸಾಧ್ಯ ಎಂಬ ಭಯ ಅವರ ಪೋಷಕರದ್ದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ

ಹಂಪಿ ಉತ್ಸವದಂತೆ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಐತಿಹಾಸಿಕ ಏಳು ಸುತ್ತಿನ ಕೋಟೆಯಿರುವ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ

ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅಮಾನತು

ಚಿತ್ರದುರ್ಗ. ಸೆ.27: ಪದೇ ಪದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗುವುದು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷö್ಯ ತೋರಿದ ಕಾರಣಕ್ಕಾಗಿ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ

error: Content is protected !!