Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮದುವೆಯಾದ ಬಿಗ್ ಬಾಸ್ ಸಿರಿ : ‘ಬದುಕು’ ಧಾರಾವಾಹಿಯಲ್ಲಿ ನಟಿಸಿದ್ದ ನಟನನ್ನೇ ಮದುವೆಯಾದ ನಟಿ

Facebook
Twitter
Telegram
WhatsApp

ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾಗಿ ಬಂದಿದ್ದ ಸಿರಿ ಇದೀಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಕುಟುಂಬಸ್ಥರ ಸಮ್ಮುಖದಲ್ಲಿ ತಮ್ಮದೇ ಸೀರಿಯಲ್ ನಲ್ಲಿ ನಟಿಸಿದ್ದ ನಟನನ್ನು ವರಿಸಿದ್ದಾರೆ. ನಂದಿಬೆಟ್ಟದ ತಪ್ಪಲಿನ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಕುಟುಂಬಸ್ಥರು, ಆಪ್ತರಷ್ಟೇ ಈ ಮದುವೆ ಕಾರ್ಯದಲ್ಲಿ ಭಾಗಿಯಾಗಿದ್ದರು.

ಬಿಗ್ ಬಾಸ್ ನಲ್ಲಿ ಸ್ಪರ್ಧಿಯಾಗಿದ್ದ ಸಿರಿಗೆ ಮದುವೆ ವಿಚಾರ ಎದುರಾಗಿತ್ತು. ಅತಿಥಿಯಾಗಿ ತಾರಾ ಹೋಗಿದ್ದಾಗ ಮದುವೆ ಬಗ್ಗೆ ಅಭಿಪ್ರಾಯ ಕೇಳಿದ್ದರು. ಆಗಬಾರದು ಅಂತ ಏನಿಲ್ಲ, ಪರ್ಫೆಕ್ಟ್ ಆಗಿರುವ ಪಾಟ್ನರ್ ಬೇಕು. ನಾನಂತು ನನ್ನ ವೃತ್ತಿ ಬಿಡುವುದಿಲ್ಲ. ಅದಕ್ಕೆ ಬೆಂಬಲವಾಗಿ ನಿಲ್ಲುವಂತ ಹುಡುಗ ಬೇಕು ಎಂದಿದ್ದರು. ಆದಷ್ಟು ಬೇಗ ಆ ರೀತಿಯ ಹುಡುಗ ಸಿಗಲಿ, ಮದುವೆಯಾಗಲಿ ಎಂದೇ ಎಲ್ಲರೂ ಹಾರೈಸಿದ್ದರು. ಎಲ್ಲರ ಹಾರೈಕೆ ಫಲಿಸಿದೆ, ಸರಳವಾಗಿ ವೈವಾಹಿಕ ಜೀವನಕ್ಕೆ ಸಿರಿ ಕಾಲಿಟ್ಟಿದ್ದಾರೆ.

ಪ್ರಭಾಕರ್ ಬೋರೇಗೌಡ ಎಂಬುವವರನ್ನು ಸಿರಿ ಮದುವೆಯಾಗಿದ್ದಾರೆ. ಇವರು ನಟ ಮತ್ತು ಉದ್ಯಮಿಯಾಗಿದ್ದಾರೆ. ಮೂಲತಃ ಮಂಡ್ಯ ಮೂಲದವರಾಗಿದ್ದು, ಕುಟುಂಬದ ಜೊತೆಗೆ ಬೆಂಗಳೂರಿನಲ್ಲಿಯೇ ನೆಲೆಸಿದ್ದಾರೆ. ನಿನ್ನೆ ಬೆಳಗ್ಗೆ ನಂದಿ ಬೆಟ್ಟದ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಕುಟುಂಬಸ್ಥರು ಮಾತ್ರ ಭಾಗಿಯಾಗಿದ್ದರು.

ಕೆಲವೊಮಂದು ಮೂಲಗಳ ಪ್ರಕಾರ ಪ್ರಭಾಕರ್ ಈ ಹಿಂದೆ ಬದುಕು ಧಾರಾವಾಹಿಯಲ್ಲಿ ಜೊತೆಗೆ ಕೆಲಸ ಮಾಡಿದ್ದರು ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಸಿರಿ ಹೊಸ ಬದುಕಿಗೆ ಕಾಲಿಟ್ಟಿದ್ದು, ಅಭಿಮಾನಿಗಳಿಗೆ ಸಂತಸ ತಂದಿದೆ. ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಮತ್ತು ವಿಡಿಯೋ ವೈರಲ್ ಆಗುತ್ತಿದೆ. ಅಭಿಮಾನಿಗಳು ನೆಚ್ಚಿನ ನಟಿಯ ಮದುವೆಗೆ ಶುಭಕೋರುತ್ತಿದ್ದಾರೆ. ಸಾಂಸಾರಿಕ ಜೀವನ ಸುಖವಾಗಿರಲೆಂದು ಹಾರೈಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ

ಹಂಪಿ ಉತ್ಸವದಂತೆ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಐತಿಹಾಸಿಕ ಏಳು ಸುತ್ತಿನ ಕೋಟೆಯಿರುವ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ

ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅಮಾನತು

ಚಿತ್ರದುರ್ಗ. ಸೆ.27: ಪದೇ ಪದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗುವುದು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷö್ಯ ತೋರಿದ ಕಾರಣಕ್ಕಾಗಿ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ

error: Content is protected !!