Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರು | ಬೈಕ್ ಮತ್ತು ಕಾರು ಡಿಕ್ಕಿ, ಓರ್ವ ಸಾವು

Facebook
Twitter
Telegram
WhatsApp

ಸುದ್ದಿಒನ್, ಹಿರಿಯೂರು, ಜೂ.14 :ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ  ಬೈಕ್ ಸವಾರನ ಸಾವನ್ನಪ್ಪಿದ ಘಟನೆ ತಾಲೂಕಿನ ಬ್ಯಾಡರಹಳ್ಳಿ ಸಮೀಪದ ರಂಗಪ್ಪ ಡಾಬಾ ಬಳಿ ನಡೆದಿದೆ.

ಈ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಹಿಂಬದಿಯಲ್ಲಿ ಕುಳಿತ್ತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತನನ್ನು ಬೇತೂರು ಗ್ರಾಮದ ಬಿ.ಎಸ್. ಮಹಂತೇಶ್ ( 38) ಎಂದು ಗುರುತಿಸಲಾಗಿದೆ. ಗಾಯಾಳು ಜಯಲಕ್ಷ್ಮಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಬೇತೂರಿನ ಗ್ರಾಮದ ಬಿ.ಎಸ್. ಮಹಂತೇಶ್ ಮತ್ತು ಈತನ ಹೆಂಡತಿ ಜಯಲಕ್ಷ್ಮಿ ಬೈಕ್ ನಲ್ಲಿ ಹಿರಿಯೂರಿನ ಆಸ್ಪತ್ರೆಗೆ ಬಂದು ಚಿಕಿತ್ಸೆ ಮಾಡಿಸಿಕೊಂಡು ಮರಳಿ ಬೇತೂರು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಮಸ್ಕಲ್ ಮಾರ್ಗದ ಬ್ಯಾಡರಹಳ್ಳಿ ಗೇಟ್ ಬಳಿ ನಡೆದ ಅಪಘಾತದಲ್ಲಿ ಈ ದುರ್ಘಟನೆ ನಡೆದಿದೆ.

ಅಪರಿಚಿತ ಕಾರೊಂದು ಹೊಡೆದುಕೊಂಡು ಹೋಗಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡಿದ್ದ ಮಹಂತೇಶನನ್ನು ಮಾನವೀಯತೆಯಿಂದ ಸಾರ್ವನಿಕರು ಹಿರಿಯೂರಿನ ಆಸ್ಪತ್ರೆಗೆ ತರುವ ದಾರಿ ಮದ್ಯೆ ಅಸುನೀಗಿದ್ದಾನೆ ಎನ್ನಲಾಗಿದೆ. ಹಿಂಬದಿಯ ಗಾಯಾಳು ಜಯಲಕ್ಷ್ಮಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುಲಾಗಿದೆ.

ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೋಕಸಭೆಯಲ್ಲಿ ಅಸಾದುದ್ದೀನ್ ಓವೈಸಿ ಜೈ ಪ್ಯಾಲೆಸ್ತೀನ್ ವಿವಾದ : ಸದಸ್ಯತ್ವ ರದ್ದಾಗುತ್ತಾ ?

ಸುದ್ದಿಒನ್, ನವದೆಹಲಿ, ಜೂನ್.26 : ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕಾರದ ಸಂದರ್ಭದಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಅವರ ಹೇಳಿಕೆ ಇದೀಗ ದೇಶಾದ್ಯಂತ ಚರ್ಚೆಯ ವಿಷಯವಾಗಿದೆ.

ದರ್ಶನ್ ಅಭಿಮಾನಿಗಳಲ್ಲಿ ವಿಜಯಲಕ್ಷ್ಮೀ ಮನವಿ : ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದೇನು..?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಹದಿನೇಳು ಮಂದಿ ಜೈಲು ಪಾಲಾಗಿದ್ದಾರೆ. ಪವಿತ್ರಾ ಗೌಡ ಎ1 ಆರೋಪಿಯಾಗಿದ್ದರೆ ದರ್ಶನ್ ಎ2 ಆರೋಪಿಯಾಗಿದ್ದಾರೆ. ಗಂಡನನ್ನು ಬಿಡಿಸಲು ವಿಜಯಲಕ್ಷ್ಮೀ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಇದೀಗ ಸೋಷಿಯಲ್

ರೇಣುಕಾಸ್ವಾಮಿ ಕುಟುಂಬಕ್ಕೆ ಸಹಾಯ ಮಾಡಿದ ಧ್ರುವ ಸರ್ಜಾ ಫ್ಯಾನ್ಸ್..!

ಚಿತ್ರದುರ್ಗ: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಆರೋಪದ ಮೇಲೆ, ಚಿತ್ರದುರ್ಗದಿಂದ ಪ್ಲ್ಯಾನ್ ಮಾಡಿ, ಬೆಂಗಳೂರಿಗೆ ಎತ್ತಾಕಿಕೊಂಡು ಬಂದ ದರ್ಶನ್ ಗ್ಯಾಂಗ್, ಆತನನ್ನು ಸಾಯುವಂತೆ ಹೊಡೆದಿದ್ದಾರೆ. ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ. ಹೆಣ ಸುಮನಹಳ್ಳಿ

error: Content is protected !!