Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾ ಸ್ವಾಮಿ ಮನೆಗೆ ಶಾಸಕ ವೀರೇಂದ್ರ ಭೇಟಿ : ಸರ್ಕಾರದಿಂದ ಸೂಕ್ತ ಪರಿಹಾರದ ಭರವಸೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜೂ.15 : ತಪ್ಪು ಯಾರೇ ಮಾಡಿದರು ರಕ್ಷಿಸುವ ಮಾತೇ ಇಲ್ಲ. ಈ ನೆಲದ ಕಾನೂನು ಎಲ್ಲರಿಗೂ ಸಮಾನವಾಗಿದೆ. ತನಿಖೆ ಉತ್ತಮವಾಗಿ ನಡೆಯುತ್ತಿದೆ. ಇದರ ಬಗ್ಗೆ ಯಾವುದೇ ಅನುಮಾನ ಬೇಡ’ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು.

ನಟ ದರ್ಶನ್ ಮತ್ತು ಆತನ ಗ್ಯಾಂಗ್‍ನಿಂದ ಹತ್ಯೆಯಾದ ರೇಣುಕಾಸ್ವಾಮಿ ವಿಆರ್‍ಎಸ್ ಬಡಾವಣೆಯ ನಿವಾಸಕ್ಕೆ ಶನಿವಾರ ಭೇಟಿ ಮಾಡಿದ ಶಾಸಕ ವಿರೇಂದ್ರ ಪಪ್ಪಿ ತಂದೆ, ತಾಯಿ, ಪತ್ನಿಗೆ ಸಾಂತ್ವನ ಹೇಳಿದ ನಮತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾ ಸ್ವಾಮಿಯ ಕೊಲೆಯ ಸಂಗತಿ ತಿಳಿದು ಮನಸ್ಸಿಗೆ ತುಂಬಾ ನೋವಾಯಿತು. ಕುಟುಂಬದವರಿಗೆ ಸಾಂತ್ವನ ಹೇಳಿ ವೈಯಕ್ತಿಕ ಸಹಾಯ ಮಾಡಿದ್ದೇನೆ. ಶಿವಗಣಾರಾಧನೆ ಕಾರ್ಯ ಮುಗಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುಟುಂಬಕ್ಕೆ ಭೇಟಿ ಮಾಡಿಸುವ ಕಾರ್ಯ ಮಾಡುತ್ತೇನೆ’ ಎಂದರು.

`ಸರ್ಕಾರದಿಂದ ಸೂಕ್ತ ಪರಿಹಾರ ಹಾಗೂ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವ ಕುರಿತು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜತೆ ಚರ್ಚೆ ನಡೆಸಲಾಗುವುದು. ಇಡೀ ಕುಟುಂಬದ ಜತೆ ನಾವಿದ್ದೇವೆ’ ಎಂದು ತಿಳಿಸಿದರು.

`ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನ ಜೀವ ತೆಗೆಯುವ ಮಟ್ಟಕ್ಕೆ ಹೋಗಬಾರದು. ಇಂತಹ ಪ್ರಯತ್ನ ಯಾರು ಮಾಡಬಾರದು. ಜನನಾಯಕರು, ಅಭಿಮಾನಿ ವರ್ಗ ಹೊಂದಿರುವವರು ಆದರ್ಶರಾಗಿರಬೇಕು. ಇಂತಹ ಹೀನ ಕೆಲಸ ಮಾಡಿದಾಗ ಬೇಲಿಯೇ ಎದ್ದು ಹೊಲ ಮೇದಂತೆ ಆಗುತ್ತದೆ’ ಎಂದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment