Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರೈಲು ಅಪಘಾತ : ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಗೂಡ್ಸ್ ರೈಲು ಡಿಕ್ಕಿ : ಐವರು ಸಾವು, ಹಲವರಿಗೆ ಗಾಯ…!

---Advertisement---

ಸುದ್ದಿಒನ್ : ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ.  ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಬಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಸೋಮವಾರ ಬೆಳಗ್ಗೆ 8.30ಕ್ಕೆ ಉತ್ತರ ಗಡಿ ರೈಲ್ವೆ ವಲಯದ ವ್ಯಾಪ್ತಿಯ ನ್ಯೂ ಜಲ್ಪೈಗುರಿ ರೈಲು ನಿಲ್ದಾಣದಿಂದ 11 ಕಿ.ಮೀ ದೂರದಲ್ಲಿ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಬೋಗಿಗಳು ಚೆಲ್ಲಾಪಿಲ್ಲಿಯಾಗಿವೆ. ಕೆಲವು ಬೋಗಿಗಳನ್ನು ಒಂದರ ಮೇಲೊಂದರಂತೆ ನಿಂತಿವೆ. ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಗಾಯಗೊಂಡಿದ್ದಾರೆ. ರೈಲು ಅಪಘಾತದ ಬಗ್ಗೆ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ.

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಈ ದುರ್ಘಟನೆ ನಡೆದಿದೆ. ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ಡಾಗೆ ಹೋಗುತ್ತಿದ್ದಾಗ ನ್ಯೂ ಜಲ್ಪೈಗುರಿ ಮತ್ತು ರಂಗಪಾಣಿ ರೈಲು ನಿಲ್ದಾಣಗಳ ನಡುವೆ ಹಿಂಬದಿಯಿಂದ ಬಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಇದುವರೆಗೆ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ.
ಸುಮಾರು 50 ಮಂದಿ ಗಾಯಗೊಂಡಿರುವ ಸಾಧ್ಯತೆ ಇದೆ. ಹೆಚ್ಚಿನ ಸಂಖ್ಯೆಯ ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಸೀಲ್ಡಾ ಪೂರ್ವ ರೈಲ್ವೇ ಅಧಿಕಾರಿಗಳು ರಂಗಪಾಣಿ ರೈಲು ನಿಲ್ದಾಣದಲ್ಲಿ ಸಹಾಯವಾಣಿ ಡೆಸ್ಕ್ ಅನ್ನು ಸ್ಥಾಪಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ರೈಲು ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ ಎಂದು ಅವರು ತಿಳಿಸಿದ್ದಾರೆ. ಈ ರೈಲು ಅಪಘಾತ ಆಘಾತ ತಂದಿದೆ. ವೈದ್ಯರು, ಆಂಬ್ಯುಲೆನ್ಸ್‌ಗಳು ಮತ್ತು ರಕ್ಷಣಾ ತಂಡಗಳು ತಕ್ಷಣವೇ ಘಟನಾ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯನ್ನು ಯುದ್ಧಾಧಾರಿತವಾಗಿ ಆರಂಭಿಸಿವೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಪರಿಹಾರ ಕ್ರಮಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳುವಂತೆ ದೀದಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಆದರೆ ಒಂದೇ ಹಳಿಯಲ್ಲಿ ಎರಡು ರೈಲುಗಳು ಬಂದಿದ್ದರಿಂದ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಕಾಂಚನಜುಂಗಾ ಎಕ್ಸ್‌ಪ್ರೆಸ್‌ ಬರುವ ಮಾರ್ಗದಲ್ಲಿಯೇ ಬಂದ ಗೂಡ್ಸ್‌ ರೈಲು ಸಿಗ್ನಲ್‌ ಕಡೆ ಗಮನ ಹರಿಸದೆ ಮುಂದೆ ಹೋದಾಗ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ರೈಲ್ವೇ ಸಚಿವೆ ಅಶ್ವಿನಿ ವೈಷ್ಣವ್ ಇದೇ ವಿಷಯವನ್ನು ತಿಳಿಸಿದ್ದಾರೆ.

ಈ ಕಾಂಚನಜುಂಗಾ ಎಕ್ಸ್‌ಪ್ರೆಸ್ ಈಶಾನ್ಯ ನಗರಗಳಾದ ಸಿಲ್ಚಾರ್ ಮತ್ತು ಅಗರ್ತಲಾವನ್ನು ಬಂಗಾಳದೊಂದಿಗೆ ಸಂಪರ್ಕಿಸಲು ಪ್ರತಿನಿತ್ಯ ಪ್ರಯಾಣಿಸುತ್ತದೆ. ಚಿಕನ್ ನೆಕ್ ಕಾರಿಡಾರ್‌ನ ಭಾಗವಾಗಿರುವ ಈ ಮಾರ್ಗದಲ್ಲಿ ಇಂದು ಅಪಘಾತ ಸಂಭವಿಸಿದೆ. ಈಶಾನ್ಯ ಭಾರತವನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಈ ಮಾರ್ಗವನ್ನು ಚಿಕನ್ ನೆಕ್ ಎಂದು ಕರೆಯಲಾಗುತ್ತದೆ. ಅಪಘಾತದಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಡಾರ್ಜಿಲಿಂಗ್‌ಗೆ ಹೋಗುವ ಪ್ರವಾಸಿಗರು ಹೆಚ್ಚಾಗಿ ಈ ಕಾಂಚನಜುಂಗಾ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...