Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇನ್ನೊಂದು ಧರ್ಮವನ್ನು ಪ್ರೀತಿಸಿದಾಗ ಮಾತ್ರ ರಾಷ್ಟ್ರ ಮತ್ತು ಸಮಾಜದ ಏಳಿಗೆ ಸಾಧ್ಯ : ಸಿಎಂ ಸಿದ್ದರಾಮಯ್ಯ

Facebook
Twitter
Telegram
WhatsApp

 

ಬೆಂಗಳೂರು: ಇಂದು ರಾಜ್ಯಾದ್ಯಂತ ಬಕ್ರೀದ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ತ್ಯಾಗ ಬಲಿದಾನದ ಪ್ರತೀಕವಾಗಿರುವ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ಮುಸ್ಲಿಂರೆಲ್ಲ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಒಬ್ಬರಿಗೊಬ್ಬರು ಶುಭಕೋರಿದ್ದಾರೆ. ಚಾಮರಾಜನಗರದ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕವಾಗಿ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಉಪಸ್ಥಿತರಿದ್ದರು.

ಈ ವೇಳೆ ಸಿದ್ದರಾಮಯ್ಯ ಮಾತನಾಡಿ, ಇಡೀ ಭಾರತದಲ್ಲಿ ಬಕ್ರೀದ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ನೀವೆಲ್ಲರೂ ಪ್ರಾರ್ಥನೆ ಮಾಡಿದ್ದೀರಿ ಸಮಾಜದಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರ ರೀತಿ ಬಾಳಬೇಕು. ಎಲ್ಲಾ ಭಾಷೆ, ಧರ್ಮಕ್ಕೆ ಸಮಾನತೆ ಕೊಡುವ ಬಹುತ್ವದ ದೇಶವಿದು. ನಾವೆಲ್ಲರೂ ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆಗಲೇ ರಾಷ್ಟ್ರ ಮತ್ತು ಸಮಾಜದ ಏಳ್ಗೆಯಾಗುವುದು. ನಾವೂ ಸಂವಿಧಾನದ ಮೇಲೆ ನಂಬಿಕೆ ಇಟ್ಟವರು, ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದರು.

 

ಎಲ್ಲೆಡೆ ಇಂದು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಮುಸ್ಲಿಂರೆಲ್ಲ ಸೇರಿ ಭಾವೈಕ್ಯತೆಯಿಂದ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಶಿವಮೊಗ್ಗ, ವಿಜಯನಗರದ ಹೊಸಪೇಟೆಯ ಅಂಬೇಡ್ಕರ್ ಸರ್ಕಲ್ ಬಳಿ ಇರುವ ಈದ್ಗಾ ಮೈದಾನ, ಬಳ್ಳಾರಿಯ ಈದ್ಗಾ ಮೈದಾನ, ಬೆಳಗಾವಿಯ ಅಂಜುಮನ್ ಮೈದಾನ, ಬಾಗಲಕೋಡರಯ ಮುಧೋಳ ನಗರ, ಮೈಸೂರು ಹಾಗೂ ಮಂಡ್ಯ ಸೇರಿದಂತೆ ರಾಜ್ಯದ ಎಲ್ಲಾ ಕಡೆಯೂ ಹಬ್ಬವನ್ನು ಆಚರಣೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ವೃಕ್ಷ ಅಭಿಯಾನ : ಪ್ರಸಕ್ತ ವರ್ಷದಲ್ಲಿ ಐವತ್ತು ಸಾವಿರ ಗಿಡಗಳನ್ನು ನೆಡಲಾಗುವುದು : ದೇನಾ ಭಗತ್ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಸುದ್ದಿಒನ್, ಚಳ್ಳಕೆರೆ:  ಕೋಟಿ ವೃಕ್ಷ ಅಭಿಯಾನದಡಿ ಔಷಧಿ ಹಾಗೂ ಪ್ರಾಣಿ ಪಕ್ಷಿಗಳಿಗೆ ಜಾನುವಾರುಗಳಿಗೆ ಉಪಯೋಗವಾಗುವಂತಹ ಗಿಡಗಳನ್ನು ಬೆಳೆಸಲಾಗುತ್ತದೆ.

ಬಿಟ್ಟಿ ಭಾಗ್ಯ ಕೊಡಲಿಕ್ಕೆ ವಾಲ್ಮೀಕಿ ನಿಗಮದ ದುಡ್ಡೇ ಬೇಕಿತ್ತಾ ? ಸಿಎಂ ವಿರುದ್ಧ ಮಾಜಿ ಶಾಸಕ ತಿಪ್ಪೇಸ್ವಾಮಿ ವಾಗ್ದಾಳಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಚಳ್ಳಕೆರೆ, ಜುಲೈ. 03 :  ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಬಿಟ್ಟಿಭಾಗ್ಯಗಳನ್ನು ಕೊಟ್ಟು ಖಜಾನೆ ಖಾಲಿ ಮಾಡಿಕೊಂಡಿದೆ. ಸಿದ್ದರಾಮಯ್ಯನವರೇ ಬಿಟ್ಟಿ

ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಜಾಗೃತಿ ಮೂಡಿಸಿ : ಪಿಡಿಒಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್

ಚಿತ್ರದುರ್ಗ. ಜುಲೈ.03:  ಮಳೆಗಾಲ ಆರಂಭವಾಗಿದ್ದು, ಕಲುಷಿತ ನೀರು ಸೇವನೆಯಿಂದ ಆರೋಗ್ಯದ ಮೇಲೆ ಗಂಭೀರ ಸ್ವರೂಪದ ಪರಿಣಾಮಗಳು ಬೀರುವ ಸಾಧ್ಯತೆಗಳಿರುವುದರಿಂದ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಜಾಗೃತಿ ಮೂಡಿಸುವ ಕೆಲಸ

error: Content is protected !!