ಸುದ್ದಿಒನ್, ಚಿತ್ರದುರ್ಗ, ಜೂ.17 : ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ನಿವಾಸಿ ಜಯಲಕ್ಷ್ಮಮ್ಮ (87 ವರ್ಷ) ಅನಾರೋಗ್ಯದ ಕಾರಣ ಇಂದು (ಸೋಮವಾರ) ಬೆಳಿಗ್ಗೆ ನಿಧನರಾದರು.
ಮೃತರು ಮೂವರು ಪುತ್ರರು, ಓರ್ವ ಪುತ್ರಿ, ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವನ್ನು ಸ್ವಗ್ರಾಮದ ಅವರ ಜಮೀನಿನಲ್ಲಿ ಸಂಜೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.














