Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಲ್ಲರ ಚಿತ್ತ ವಯನಾಡು ಮತ್ತು ರಾಯ್ ಬರೇಲಿ ಕ್ಷೇತ್ರಗಳತ್ತ : ಈ ಕ್ಷೇತ್ರಕ್ಕೆ ರಾಹುಲ್ ರಾಜೀನಾಮೆ…!

---Advertisement---

ಸುದ್ದಿಒನ್ : ಚುನಾವಣಾ ಫಲಿತಾಂಶ ಬಂದಾಯ್ತು. ಎನ್‌ಡಿಎ ಸರ್ಕಾರವೂ ಅಧಿಕಾರಕ್ಕೆ ಬಂದಾಯ್ತು. ಈ ಎಲ್ಲಾ ಬೆಳವಣಿಗೆಯ ನಂತರ ಇದೀಗ ಎಲ್ಲರ ಚಿತ್ತ ಕೇರಳದ ವಯನಾಡು ಮತ್ತು ಉತ್ತರಪ್ರದೇಶದ ರಾಯ್ ಬರೇಲಿ ಕ್ಷೇತ್ರಗಳತ್ತ ನೆಟ್ಟಿದೆ.

ಹಿಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ರಾಹುಲ್ ಗಾಂಧಿ ಆ ಎರಡು ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿ ಎರಡೂ ಕಡೆ ಗೆದ್ದಿದ್ದಾರೆ. ಇವೆರಡರಲ್ಲಿ ಯಾವುದಾದರೂ ಒಂದು ಕ್ಷೇತ್ರವನ್ನು ರಾಹುಲ್ ಗಾಂಧಿ ಬಿಟ್ಟುಕೊಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಎರಡು ಸ್ಥಾನಗಳಲ್ಲಿ ರಾಹುಲ್ ಯಾವ ಕ್ಷೇತ್ರವನ್ನು ಬಿಟ್ಟುಕೊಡುತ್ತಾರೆ ಎಂಬ ವಿಷಯ ಕೆಲ ದಿನಗಳಿಂದ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ರಾಯ್ ಬರೇಲಿ ಅಥವಾ ವಯನಾಡ್ ಯಾವ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಂಬುದೇ ಸದ್ಯದ ಬಹು ಚರ್ಚಿತ ವಿಷಯವಾಗಿದೆ. ಮೂಲಗಳ ಪ್ರಕಾರ ಅವರು ರಾಯ್ ಬರೇಲಿ ಕ್ಷೇತ್ರದ ಸಂಸದರಾಗಿ ಮುಂದುವರೆದು, ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡುತ್ತಾರೆಂಬ ಸುದ್ದಿ ಹರಿದಾಡುತ್ತಿದೆ.  ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮ ಮೂಲಗಳು ತಿಳಿಸಿವೆ.
ಉತ್ತರಪ್ರದೇಶ ಮತ್ತು ಕಾಂಗ್ರೆಸ್ ಪಕ್ಷದ ರಾಜಕೀಯ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ರಾಹುಲ್ ಗಾಂಧಿ ಈ ನಿರ್ಧಾರಕ್ಕೆ ಬಂದಿದ್ದಾರೆಂದು ತಿಳಿದು ಬಂದಿದೆ.

ರಾಯ್ ಬರೇಲಿ ಕ್ಷೇತ್ರವು ದಶಕಗಳಿಂದ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ಸೋನಿಯಾ ಗಾಂಧಿ 2004 ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಸೋನಿಯಾ ಗಾಂಧಿ ಅವರು 2004, 2009, 2014 ಮತ್ತು 2019 ರಲ್ಲಿ ಸತತ ನಾಲ್ಕು ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದರು.
2024ರ ಚುನಾವಣೆಯಿಂದ ದೂರ ಉಳಿಯಲು ಸೋನಿಯಾ ಗಾಂಧಿ ನಿರ್ಧರಿಸಿದ್ದರು.

ರಾಯ್ ಬರೇಲಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ವಾದ್ರಾ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂಬ ವದಂತಿಗಳೂ ಜೋರಾಗಿದ್ದವು. ಆದರೆ ತೀವ್ರ ಕಸರತ್ತಿನ ನಂತರ ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸುವ ನಿರ್ಧಾರವನ್ನು ಕಾಂಗ್ರೆಸ್ ನಾಯಕತ್ವ ತೆಗೆದುಕೊಂಡಿತ್ತು. ಆ ಮಟ್ಟಿಗೆ ಅಲ್ಲಿಂದಲೇ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಭಾರಿ ಬಹುಮತದಿಂದ ಗೆದ್ದಿದ್ದರು. ಈ ಹಿಂದೆ ಇಂದಿರಾ ಗಾಂಧಿ ಮತ್ತು ಫಿರೋಜ್ ಗಾಂಧಿ ಕೂಡ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ, ಅವರ ಸಹೋದರಿ ಪ್ರಿಯಾಂಕಾ ವಾದ್ರಾ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ವಯನಾಡ್ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ವಾದ್ರಾ ಅವರ ಹೆಸರನ್ನು ಅಂತಿಮಗೊಳಿಸುವುದು ಔಪಚಾರಿಕವಾಗಿದೆ ಎಂಬ ಅಭಿಪ್ರಾಯವಿದೆ. ಈ ಬೆಳವಣಿಗೆಗಳು ಕೇರಳ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment