Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೃದಯ ಸಂಬಂಧಿ ಕಾಯಿಲೆಗಳನ್ನು ಗ್ಯಾಸ್ಟ್ರಿಕ್ ಎಂದು ಉದಾಸೀನ ಮಾಡಬೇಡಿ : ಡಾ.ಬಿ.ಗುರುರಾಜ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂ.18 : ಹೃದಯ ಸಂಬಂಧಿ ಕಾಯಿಲೆಗಳನ್ನು ಗ್ಯಾಸ್ಟ್ರಿಕ್ ಸಮಸ್ಯೆಯೆಂದು ಉದಾಸೀನ ಮಾಡಬೇಡಿ. ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಿ ಎಂದು ದಾವಣಗೆರೆಯ ಎಸ್.ಎಸ್.ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಡಾ.ಬಿ.ಗುರುರಾಜ್ ಹೇಳಿದರು.

ಜಿಲ್ಲಾ ಸ್ವಾತಂತ್ರ್ಯ ಯೋಧರ ಸ್ಮಾರಕ ಸೇವಾ ಟ್ರಸ್ಟ್, ನೂತನ್ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿ ಸೊಸೈಟಿ ಸಹಯೋಗದೊಂದಿಗೆ ಸಿದ್ದಾಪುರದಲ್ಲಿರುವ ನೂತನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಗಾಟಿಸಿ ಮಾತನಾಡಿದರು.

ರಕ್ತದ ಒತ್ತಡದಿಂದ ಹೃದಯ ಖಾಯಿಲೆಗಳು ಬರುತ್ತವೆ. ಅಧಿಕ ಕೊಬ್ಬಿನಂಶ ಸೇವನೆ ಒಳ್ಳೆಯದಲ್ಲ. ಧೂಮಪಾನ, ಮದ್ಯಪಾನದಿಂದ ದೂರವಿರಬೇಕು. ವ್ಯಾಯಾಮ, ನಡಿಗೆಯಿಂದ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳನ್ನು ನಿಯಂತ್ರಿಸಿಕೊಳ್ಳಬಹುದೆಂದು ತಿಳಿಸಿದರು.

ಡಿಜಿಟಲ್ ವರ್ಲ್ಡ್ ನ ದಾದಾಪೀರ್ ಮಾತನಾಡಿ ಈಗಿನ ಆಹಾರ ಪದ್ದತಿ ಒತ್ತಡದ ಜೀವನದಿಂದ ಪ್ರತಿಯೊಬ್ಬರು ಒಂದಲ್ಲ ಒಂದು ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಹಿಂದಿನ ಕಾಲದಲ್ಲಿ ಕಠಿಣ ಪರಿಶ್ರಮ ಹಾಗೂ ದೇಹ ದಂಡನೆಯಿಂದ ಕಾಯಿಲೆಗಳು ಜಾಸ್ತಿ ಕಾಣಿಸಿಕೊಳ್ಳುತ್ತಿರಲಿಲ್ಲ. ಈಗಿನ ಪೀಳಿಗೆ ಎಲ್ಲದಕ್ಕೂ ಯಂತ್ರಗಳನ್ನು ಬಳಸುತ್ತಿರುವುದರಿಂದ ನಾನಾ ರೀತಿಯ ರೋಗಗಳು ಆವರಿಸಿಕೊಳ್ಳುತ್ತವೆ ಎಂದರು.

ನೂತನ್ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಥಾಪಕ ಡಾ.ಜಿ.ರಾಘವೇಂದ್ರ ಮಾತನಾಡಿ ಉಚಿತ ಆರೋಗ್ಯ ಶಿಬಿರಗಳಲ್ಲಿ ಎಲ್ಲರೂ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಹಳ್ಳಿಗಾಡಿನ ಜನ ದೂರದ ನಗರಗಳಿಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳುವುದು ಕಷ್ಟ ಎಂದು ಹೇಳಿದರು.

ಅನಂತಮೂರ್ತಿನಾಯ್ಕ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಎಸ್ಟಿ ವಿಭಾಗದ ಅಧ್ಯಕ್ಷ ಬಿ.ಮಂಜುನಾಥ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಮಂಜುನಾಥ್ ಲೋಕೋಪಯೋಗಿ ಸಚಿವ ಸತೀಶ್‍ಜಾರಕಿಹೊಳಿರವರ

ರಾಜಕೀಯದಲ್ಲಿ ಮುಸ್ಲಿಂ ಸಮಾಜಕ್ಕೆ ಅಧಿಕಾರವಿಲ್ಲ, ಆದ್ಯತೆಯಿಲ್ಲ, ಮುಸ್ಲಿಮರು ಕೇವಲ ಮತ ನೀಡುವುದಕ್ಕಷ್ಟೆ ಸೀಮಿತ : ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಶಿಕ್ಷಣದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮಾಡಿರುವವರನ್ನು ಗುರುತಿಸಿ ಸನ್ಮಾನಿಸಿದರೆ ಇತರೆಯವರಿಗೆ ಪ್ರೇರಣೆಯಾಗುತ್ತದೆಂದು

Kamala Harris: ಅಮೇರಿಕಾ ಅಧ್ಯಕ್ಷ ಸ್ಥಾನದ ಸನಿಹದಲ್ಲಿ ಭಾರತೀಯ ಮೂಲದ ಕಮಲಾ ಹ್ಯಾರಿಸ್..!

ಸುದ್ದಿಒನ್ : ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯ ಕಾವು ಜೋರಾಗಿದೆ. ಅಧ್ಯಕ್ಷೀಯ ರೇಸ್‌ಗೆ ಅಂತಿಮವಾಗಿ ಯಾರು ನಿಲ್ಲುತ್ತಾರೆ ಮತ್ತು ಯಾರು ಯಾರನ್ನು ಎದುರಿಸುತ್ತಾರೆ ಎಂಬ ವಿಷಯ ತೀವ್ರ ಕುತೂಹಲ ಮೂಡಿಸಿದೆ. ಪ್ರಸ್ತುತ ಡೆಮಾಕ್ರಟಿಕ್

error: Content is protected !!