Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಂಬಿ ಪಾಟೀಲ್-ಕುಮಾರಸ್ವಾಮಿ ಭೇಟಿಗೆ ಡೇಟ್ ಫಿಕ್ಸ್ : ರಾಜ್ಯಕ್ಕೆ ಏನೆಲ್ಲಾ ಲಾಭವಾಗಬಹುದು..?

---Advertisement---

ಬೆಂಗಳೂರು : ಉದ್ಯೋಗ ಬಹಳ ಮುಖ್ಯವಾಗಿದೆ. ಎಷ್ಟೋ ಜನ ಉದ್ಯೋಗ ಸಿಗದೆ ಯುವಕರೇ ಸಂಕಷ್ಟಕ್ಕೆ ಈಡಾಗಿದ್ದಾರೆ. ಈ ಬಾರಿ ಉದ್ಯೋಗ ಸೃಷ್ಠಿಯ ನಿರೀಕ್ಷೆ ಇದೆ. ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಸಚಿವ ಎಂ.ಬಿ ಪಾಟೀಲ್ ಅವರು ಭೇಟಿ ಮಾಡುತ್ತಿದ್ದು, ಹೂಡಿಕೆದಾರರು, ಉದ್ಯೋಗದ ಸೃಷ್ಟಿ ಬಗ್ಗೆ ಚರ್ಚೆಯಾಗುವ ನಿರೀಕ್ಷೆ ಇದೆ.

ಕೇಂದ್ರ ಸರ್ಕಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಬೃಹತ್ ಕೈಗಾರಿಕಾ ಖಾತೆಯನ್ನು ವಹಿಸಿಕೊಂಡಿದ್ದಾರೆ. ಇತ್ತ ರಾಜ್ಯದಲ್ಲಿ ಎಂ.ಬಿ.ಪಾಟೀಲ್ ಅವರು ಕೈಗಾರಿಕ ಸಚಿವರಾಗಿದ್ದು ಶೀಘ್ರದಲ್ಲಿ ಇಬ್ಬರು ಭೇಟಿ ಮಾಡಿ ಚರ್ಚಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಎಂ.ಬಿ.ಪಾಟೀಲ್ ಅವರು, ಪ್ರಧಾನಿ ಮೋದಿ ಅವರ ತವರು ರಾಜ್ಯವಾದ ಗುಜರಾತಿನಲ್ಲಿ ನೆಲೆಯೂರಲಿರುವ ಅಮೆರಿಕಾದ ಮೈಕ್ರೋ ಸೆಮಿ ಕಂಡಕ್ಟರ್ ಕಂಪನಿಗೆ ಕೇಂದ್ರ ಸರ್ಕಾರ ಶೇಕಡ 50 ಮತ್ತು ಅಲ್ಲಿನ ರಾಜ್ಯ ಸರ್ಕಾರ ಶೇಕಡ 20ರಷ್ಟು ಪ್ರೋತ್ಸಾಹ ಧನ ನೀಡುತ್ತಿವೆ. ನಮಗೂ ಕೂಡ ಇದೇ ಮಾದರಿಯ ಉತ್ತೇಜನ ಬೇಕಾಗಿದೆ. ಹೀಗಾಗಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡುತ್ತಿದ್ದೇನೆ ಎಂದಿದ್ದಾರೆ.

ಸೆಮಿಕಂಡಕ್ಟರ್ ಕ್ಷೇತ್ರವೂ ಆಧುನಿಕ ಜಗತ್ತಿನಲ್ಲಿ ಪ್ರಮುಖ ಉದ್ಯಮವಾಗಿದೆ. ಕೇಂದ್ರ ಸರ್ಕಾರವೂ ಎಲ್ಲಾ ರಾಜ್ಯಗಳಿಗೂ ಸಮಾನ ಅವಕಾಶ ಮತ್ತು ಪ್ರೋತ್ಸಾಹ ನೀಡಬೇಕಾಗಿದೆ. ಇತ್ತಿಚೆಗೆ ಗುಜರಾತ್ ನಲ್ಲಿ ಕೈಗಾರಿಕೆಗೆ ಅತ್ಯಧಿಕ ಷೇರು ನೀಡಲು ಮುಂದಾಗಿದ್ದ ಕೇಂದ್ರದ ನಿಲುವನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಗ್ಯಕರ ರೀತಿಯಲ್ಲಿ ಆಕ್ಷೇಪಿಸಿದ್ದರು. ಅಂದರೆ ಒಂದು ರಾಜ್ಯದ‌ ಕೈಗಾರಿಕೆಗೆ ದೊಡ್ಡಮಟ್ಟದಲ್ಲಿ ಪ್ರೋತ್ಸಾಹ ನೀಡುವಂತೆ ಎಲ್ಲಾ ರಾಜ್ಯಗಳಿಗೂ ನೀಡಬೇಕಾಗುತ್ತದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment