Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೋಕಸಭಾ ಚುನಾವಣೆ ಮುಗಿದಿದೆ.. ಸಿದ್ದರಾಮಯ್ಯ ಸರ್ಕಾರ ಬೀಳುತ್ತಾ..? ಕೋಡಿಮಠದ ಶ್ರೀಗಳು ಹೇಳಿದ್ದೇನು..?

Facebook
Twitter
Telegram
WhatsApp

ಕೋಡಿಮಠದ ಶ್ರೀ ಶಿವಯೋಗಿ ಶಿವಾನಂದ ಸ್ವಾಮೀಜಿ ಹೇಳಿರುವ ಭವಿಷ್ಯ ಸಾಕಷ್ಟು ನಿಜವಾಗಿದೆ. ಪ್ರಕೃತಿ ವಕೋಪಗಳ ಬಗ್ಗೆ, ರಾಜಕೀಯದ ಬಗ್ಗೆಯೂ ಸಾಕಷ್ಟು ಭವಿಷ್ಯ ನುಡಿಯುತ್ತಾರೆ. ಅದೆಲ್ಲವೂ ನಿಜ ಕೂಡ ಆಗಿದೆ. ಇದೀಗ ಸಿದ್ದರಾಮಯ್ಯ ಸರ್ಕಾರದ ಬಗ್ಗೆಯೂ ಭವಿಷ್ಯ ನುಡಿದಿದ್ದಾರೆ.

ಬಿಜೆಪಿ ನಾಯಕರು ಲೋಕಸಭಾ ಚುನಾವಣೆಯ ಬಳಿಕ ಖಂಡಿತ ಕಾಂಗ್ರೆಸ್ ಪಕ್ಷ ಬೀಳಲಿದೆ ಎಂಬ ಮಾತನ್ನೇ ಆಡುತ್ತಿದ್ದರು. ಇದೀಗ ಲೋಕಸಭಾ ಚುನಾವಣೆಯೂ ಮುಗಿದಿದೆ. ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಕೋಡಿ ಮಠದ ಶ್ರೀಗಳು ಒಳ್ಳೆಯ ಭವಿಷ್ಯವನ್ನೇ ನುಡಿದಿದ್ದಾರೆ. ‘ಗುರುಗಳು ಶಿಷ್ಯರಾಗುತ್ತಾರೆ. ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣು ಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇರುವುದಿಲ್ಲ. ಶ್ರಾವಣದಲ್ಲಿ ನಾನು ಮತ್ತೊಂದು ಸ್ಪೋಟಕ ಭವಿಷ್ಯ ನುಡಿಯುತ್ತೇನೆ. ದೇಶದಲ್ಲಿ ಕ್ರೋಧಿ ನಾಮ ಸಂವತ್ಸರವಿದೆ. ಶುಭಗಳಿಗೆಗಿಂತ ಅಶುಭಗಳೇ ಹೆಚ್ಚಾಗಿ ನಡೆಯುತ್ತವೆ. ದೇಶದಲ್ಲಿ ಜಲಕಂಟಕ, ವಾಯುಕಂಟಕ, ಅಗ್ನಿಕಂಟಕಗಳೇ ಹೆಚ್ಚಾಗಲಿವೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಠಿ ಸಾಧ್ಯತೆ ಇದೆ’ ಎಂದಿದ್ದಾರೆ.

ಕೇಂದ್ರ ಸರ್ಕಾರ ಭವಿಷ್ಯವನ್ನು ಶ್ರಾವಣದಲ್ಲಿ ಹೇಳುತ್ತಾರೆ ಎನ್ನಲಾಗಿದೆ. ಎನ್‌ಡಿಎ ಸರಳ ಮತಗಳ ಮೂಲಕ ತಮ್ಮ‌ ಸರ್ಕಾರವನ್ನು ಸ್ಥಾಪಿಸಿದೆ. ಕೇಂದ್ರ ಸರ್ಕಾರ ಹಾಗೂ ಮೋದಿ ಬಗ್ಗೆ ಶ್ರಾವಣದಲ್ಲಿ ಭವಿಷ್ಯ ನುಡಿಯುತ್ತೇನೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದ ಬಗ್ಗೆ ಭವಿಷ್ಯ ಕೇಳಲು ಎಲ್ಲರೂ ಉತ್ಸುಕರಾಗಿದ್ದಾರೆ. ಕೋಡಿ ಮಠದ ಸ್ವಾಮೀಜಿಗಳ ಭವಿಷ್ಯ ಸತ್ಯವಾಗುವ ಕಾರಣ, ಶ್ರಾವಣದಲ್ಲಿ ಯಾವ ರೀತಿಯ ಭವಿಷ್ಯವನ್ನು ಹೇಳಬಹುದು ಎಂಬ ಕುತೂಹಲವಿದೆ. ಇನ್ನು ರಾಜ್ಯ ಸರ್ಕಾರ ಸುಭದ್ರವಾಗಿರುತ್ತದೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಸರ್ಕಾರ ಸೇಫ್ ಎಂಬುದನ್ನು ತಿಳಿಸಿದ್ದಾರೆ‌.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!