Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರದ ಪ್ರೀ ಬಜೆಟ್ ನಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ..!

Facebook
Twitter
Telegram
WhatsApp

ಲೋಕಸಭಾ ಚುನಾವಣೆ ಮುಗಿದಿದೆ. ಕೇಂದ್ರ ಸರ್ಕಾರದ ಸಂಪುಟ ರಚನೆಯಾಗಿದೆ. ಮುಂದಿನ ತಿಂಗಳು ಜುಲೈನಲ್ಲಿ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಮೋದಿ ಸರ್ಕಾರದ 3.0 ಮೊದಲ ಬಜೆಟ್ ಇದಾಗಿರಲಿದೆ. ಮೂರನೇ ಬಾರಿಗೂ ಜನ ಮೋದಿಯವರನ್ನೇ ಆಯ್ಕೆ ಮಾಡಿದ್ದು, ಈ ಬಾರಿಯ ಬಜೆಟ್ ನಲ್ಲಿ ಬಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಪ್ರೀ ಬಜೆಟ್ ಸಭೆಯನ್ನು ನಡೆಸಲಾಗುತ್ತದೆ. ಈ ಸಭೆಗೆ ಕರ್ನಾಟಕದ ಸಿಎಮನ ಸಿದ್ದರಾಮಯ್ಯ ಅವರನ್ನು ಆಹ್ವಾನ ಮಾಡಲಾಗಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಈ ಬಜೆಟ್ ಮಂಡನೆ ಮಾಡಲಿದ್ದಾರೆ. ಜೂನ್ 22ಕ್ಕೆ ಪ್ರೀ ಬಜೆಟ್ ಸಭೆ ನಿಗಧಿಯಾಗಿದೆ. ಈ ಸಭೆಯಲ್ಲಿ ಭಾಗವಹಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೂ ನಿರ್ಮಲಾ ಸೀತರಾಮನ್ ಪತ್ರ ಬರೆದಿದ್ದಾರೆ. ಆ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಸಹ ನೀಡಿದ್ದಾರೆ. ‘ಜೂನ್ 22ಕ್ಕೆ ಪೂರ್ವ ನಿಯೋಜಿತ ಕಾರ್ಯಕ್ರಮ ನಿಗಧಿಯಾಗಿದೆ. ಈ ಕಾರಣದಿಂದ ಪ್ರೀ ಬಜೆಟ್ ಸಭೆಗೆ ಹಾಜರಾಗುವುದಕ್ಕೆ ಸಾಧ್ಯವಿಲ್ಲ. ಆದರೆ ನನ್ನ ಸಂಪುಟದಿಂದ ಸಚಿವ ಕೃಷ್ಣಭೈರೇಗೌಡ ಅವರು ಭಾಗಿಯಾಗುತ್ತಾರೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

ಈ ಪೂರ್ವ ನಿಯೋಜಿತ ಸಭೆಯಲ್ಲಿ ಸಾಕಷ್ಟು ಸಂಸ್ಥೆಗಳು ಸಹ ಭಾಗಿಯಾಗಲಿದೆ. ಗುರುವಾರ ಸಂಜೆ 4ರಿಂದ 6ರ ತನಕ ದೆಹಲಿ ನಾರ್ತ್ ಬ್ಲಾಕ್ ನಲ್ಲಿ ಸಭೆಯನ್ನು ಆಯೋಜನೆ ಮಾಡಲಾಗಿದ್ದು, ಭಾರತೀಯ ವಾಣಿಜ್ಯ ಮತಚತು ಉದ್ಯಮಗಳ ಒಕ್ಕೂಟ, ಭಾರತೀಯ ಕೈಗಾರಿಕ ಒಕ್ಕೂಟ, ಇಂಡಸ್ಟ್ರಿಸ್ ಆಫ್ ಇಂಡಿಯಾ ಸೇರಿದಂತೆ ಹಲವರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಜೆಟ್ ಮಂಡನೆ ಜನಸಾಮಾನ್ಯರು, ರೈತರಿಗೆ ಅನುಕೂಲವಾಗುವಂತೆ ಇರಲಿದೆ ಎಂಬ ನಂಬಿಕೆ ಜನರಲ್ಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು, ಶುಕ್ರವಾರ- ರಾಶಿ ಭವಿಷ್ಯ ಜುಲೈ-5,2024 ಸೂರ್ಯೋದಯ: 05:50, ಸೂರ್ಯಾಸ್ತ : 06:50 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

5 ತಿಂಗಳ ಜೈಲುವಾಸದ ನಂತರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಮೂರನೇ ಬಾರಿಗೆ ಪ್ರಮಾಣ ವಚನ

ಸುದ್ದಿಒನ್ : ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ ಮತ್ತೊಮ್ಮೆ ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಚಂಪೈ ಸೊರೆನ್ ಬುಧವಾರ ಸಿಎಂ

error: Content is protected !!