Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲೇ ಉತ್ತಮ ಗುಣಮಟ್ಟದ ಬೋಧನೆ : ಬಿಇಒ ಎಸ್.ನಾಗಭೂಷಣ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 19  : ವಿಜ್ಞಾನ ಪರಿಕರಗಳನ್ನು ಬಳಕೆ ಮಾಡಿಕೊಂಡು ಪ್ರಾಯೋಗಿಕವಾಗಿ ಮಕ್ಕಳಿಗೆ ಬೋಧಿಸಿದಾಗ ವಿಜ್ಞಾನದ ಬಗ್ಗೆ ಒಲವು ಹೆಚ್ಚಾಗಿ ಸಂಶೋಧನೆಗೆ ನೆರವಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಶಿಕ್ಷಕರುಗಳಿಗೆ ಕರೆ ನೀಡಿದರು.

ಐ.ಎಲ್.ಪಿ. ಹಾಗೂ ಎಲುಷಿಯನ್ ಮತ್ತು ಸಿ.ಎಸ್.ಆರ್.ಪಾಲುದಾರಿಕೆಯಲ್ಲಿ ಸರ್ಕಾರಿ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿರುವ ಬಿ.ಆರ್.ಸಿ.ಕೇಂದ್ರದಲ್ಲಿ ತಾಲ್ಲೂಕಿನ ಇನ್ನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ವಿಜ್ಞಾನ ಶಿಕ್ಷಕರುಗಳಿಗೆ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ವಿಜ್ಞಾನ ಕಿಟ್‍ಗಳನ್ನು ವಿತರಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಹಾಗೂ ದಾಖಲಾತಿ ಕಡಿಮೆಯಿದೆ ಎನ್ನುವ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಸರ್ಕಾರಿ ಶಾಲೆಯ ಶಿಕ್ಷಕರುಗಳು ಮೂರು ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ನೇಮಕಗೊಳ್ಳುತ್ತಾರೆ. ಹಾಗಾಗಿ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಬೋಧನೆ ಮಕ್ಕಳಿಗೆ ಸಿಗುತ್ತಿದೆ. ಇದರ ಜೊತೆ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಂಡು ವಿಜ್ಞಾನವನ್ನು ಪ್ರಾಯೋಗಿಕವಾಗಿ ಮಕ್ಕಳಿಗೆ ಮನ ಮುಟ್ಟುವಂತೆ ಬೋಧಿಸಿದಾಗ ಹೆಚ್ಚು ಪರಿಣಾಮಕಾರಿಯಾಗುತ್ತದೆ ಎಂದು ಹೇಳಿದರು.

ವೈಜ್ಞಾನಿಕ ಮನೋಭಾವನೆ ಮಕ್ಕಳಲ್ಲಿ ಮೂಡಿಸುವ ಗುರುತರ ಜವಾಬ್ದಾರಿ ಶಿಕ್ಷಕರುಗಳ ಮೇಲಿದೆ. ವಿಜ್ಞಾನ ಪರಿಕರಗಳು ಉತ್ಕøಷ್ಠ ರೀತಿಯಲ್ಲಿ ಬಳಕೆಯಾಗಬೇಕು. ಇದರಿಂದ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಕಾರಿಯಾಗಲಿದೆ. ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳು ಇಸ್ರೋ, ಇಂಡಿಯನ್ ಇನ್ಸ್‍ಟಿಟ್ಯೂಟ್ ಆಫ್ ಸೈನ್ಸ್‍ನಲ್ಲಿ ವಿಜ್ಞಾನಿಗಳಾಗಬಹುದು. ಈ ನಿಟ್ಟಿನಲ್ಲಿ ಶಿಕ್ಷಕರುಗಳ ಪಾತ್ರ ದೊಡ್ಡದು ಎಂದು ತಿಳಿಸಿದರು.ಸರ್ಕಾರಿ ಶಾಲೆಗೆ ಸೇರುವ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ವಿಜ್ಞಾನವನ್ನು ಪರಿಣಾಮಕಾರಿಯಾಗಿ ಬೋಧಿಸಿದರೆ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡುತ್ತದೆ ಎಂದರು.

ಐ.ಎಲ್.ಪಿ. ಪ್ರಾಜೆಕ್ಟ್ ಮ್ಯಾನೇಜರ್ ಮಂಜುನಾಥ್ ಬೆಸ್ತರ್ ಮಾತನಾಡಿ ಗ್ರಾಮೀಣ ಭಾಗದ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹೆಚ್ಚಿಸಿ ಪ್ರಾಯೋಗಿಕ ಚಟುವಟಿಕೆಗಳಿಗೆ ವಿಜ್ಞಾನ ಕಿಟ್‍ಗಳು ಪ್ರಯೋಜನಕಾರಿಯಾಗಲಿದೆ. ಸರ್ಕಾರಿ ಶಾಲೆಗಳಲ್ಲಿನ ಮಕ್ಕಳಿಗೆ ಇಂತಹ ಸೌಲಭ್ಯಗಳು ಕಡಿಮೆಯಿರುವುದರಿಂದ ಐ.ಎಲ್.ಪಿ. ಮತ್ತು ಎಲುಷಿಯನ್ ಸಂಸ್ಥೆಗಳು ನೀಡುವ ವಿಜ್ಞಾನ ಕಿಟ್‍ಗಳನ್ನು ಬಳಸಿಕೊಂಡು 6 ರಿಂದ 10 ನೇ ತರಗತಿಯ ಮಕ್ಕಳಿಗೆ ಪಠ್ಯಪುಸ್ತಗಳಲ್ಲಿನ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಾಯೋಗಿಕವಾಗಿ ಬೋಧಿಸಬಹುದು ಎಂದು ತಿಳಿಸಿದರು.

ಬಿ.ಆರ್.ಸಿ. ಸಂಪತ್‍ಕುಮಾರ್, ಐ.ಎಲ್.ಪಿ. ಪ್ರೋಗ್ರಾಮ್ ಮ್ಯಾನೇಜರ್ ಹರೀಶ್ ಕೆ. ಎಲುಷಿಯಾನ ಹಿರಿಯ ವ್ಯವಸ್ಥಾಪಕ ಶರತ್‍ಕುಮಾರ್, ಎಲುಷಿಯಾನ ಮಾಹಿತಿ ತಂತ್ರಜ್ಞಾನ ನಿರ್ದೇಶಕ ದಿವಾಕರಗುಪ್ತ ವೇದಿಕೆಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment