ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅಂಡ್ ಗ್ಯಾಂಗ್ ಜೈಲು ಪಾಲಾಗಿದೆ. ದಿನೇ ದಿನೇ ಕೇಸು ಸ್ಟ್ರಾಂಗ್ ಆಗ್ತಾ ಇದ್ದು, ಹೊರಗೆ ಬರುವುದು ಅನುಮಾನವೇ ಸರಿ. ಇದರ ನಡುವೆ ದರ್ಶನ್ ಫ್ಯಾನ್ಸ್ ಒಳ್ಳೆ ಹುಡುಗ ಪ್ರಥಮ್ ಅವರಿಗೆ ದರ್ಶನ್ ಫ್ಯಾನ್ಸ್ ಕೊಲೆ ಬೆದರಿಕೆ ಹಾಕಿದ್ದಾರಂತೆ. ಈ ಬಗ್ಗೆ ಒಳ್ಳೆ ಹುಡುಗ ಪ್ರಥಮ್ ಮಾತನಾಡಿದ್ದಾರೆ.
‘ಏಯ್ ನಿನ್ ತಲೆ ತೆಗಿತೀನಿ ಅಂತ ಎರಡೂವರೆ ರಾತ್ರಿಗೆ ಫೋನ್ ಮಾಡ್ತಾರೆ. ಮಲಗಿದ್ರು ಪರವಾಗಿಲ್ಲ. ಎದ್ದೇಳಿಸಿ ಅವರಿಗೆ ಫೋನ್ ಕೊಡಿ ಅಂತಾರೆ. ಆಫೀಸ್ ಫೋನ್ ಎಂದರೆ ಅವೆಲ್ಲಾ ಗೊತ್ತಿಲ್ಲ ಎದ್ದೇಳಿಸಿ ಪ್ರಥಮ್ ಗೆ ಫೋನ್ ಕೊಡಿ ಅಂತಾರೆ. ಎರಡೂವರೆ ರಾತ್ರಿಯಲ್ಲಿ ಪೆದ್ದನ ಥರ ಫೋನ್ ಮಾಡ್ತಾನೆ. ದರ್ಶನ್ ಅಭಿಮಾನಿಗಳಿಗೆ ಹೇಳೋದೇನು ಗೊತ್ತಾ. ಕಾನೂನು, ಕಾನೂನಿನ ರೀತಿಯಲ್ಲಿ ಕೆಲಸ ಮಾಡುತ್ತದೆ. ಪೊಲೀಸರು ಪೊಲೀಸರ ರೀತಿ ಕೆಲಸ ಮಾಡುತ್ತಾರೆ. ಲಾಯರ್ ಕೋರ್ಟ್ ನಲ್ಲಿ ಕೆಲಸ ಮಾಡುತ್ತಾರೆ. ಮಾಧ್ಯಮದವರು ಮೈಕ್ ಹಿಡಿದು ಕೆಲಸ ಮಾಡುತ್ತಾರೆ. ನೀವೂ ಆರಾಮವಾಗಿ ಇದ್ದುಕೊಂಡು, ಕೆಲಸ ಮಾಡಿ, ಅಪ್ಪ-ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದಿದ್ದಾರೆ.
ಅಂದಾಭಿಮಾನಿಗಳು ಅಲ್ಲಿ ಕೂತು ರೋಡ್ ಬ್ಲಾಕ್ ಮಾಡ್ತಾರೆ. ನಾಲ್ಕು ತದ್ಕಿ ಅಂದಾಭಿಮಾನಿಗಳನ್ನು ಕಳುಹಿಸಿ ಎಂದು ಹೇಳಿದೆ. ಆದರೆ ಇವರಿಗ್ಯಾಕೆ ಕೋಪ ಬರ್ತಾ ಇದೆ ಎಂಬುದು ಮಾತ್ರ ಗೊತ್ತಿಲ್ಲ ಎಂದು ಒಳ್ಳೆ ಹುಡುಗ ಪ್ರಥಮ್ ಕೂಗಾಡಿದ್ದಾರೆ. ದರ್ಶನ್ ಅವರ ಅಭಿಮಾನಿಗಳಿಗೆ ಕಿವಿ ಮಾತನ್ನು ಹೇಳಿದ್ದಾರೆ. ಸದ್ಯ ದರ್ಶನ್ ಅಂಡ್ ಗ್ಯಾಂಗ್ ಕಂಬಿ ಹಿಂದೆ ನಿಂತು ಎಣಿಕೆ ಕೆಲಸ ಮಾಡುತ್ತಿದ್ದಾರೆ.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್