Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚನ್ನಪಟ್ಟಣ ಬೈ ಎಲೆಕ್ಷನ್ : ಡಿಕೆ ಶಿವಕುಮಾರ್ ಸ್ಪರ್ಧೆ : ಜನತೆ ಬಳಿ ಹೇಳಿದ್ದೇನು..?

Facebook
Twitter
Telegram
WhatsApp

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ, ಈಗ ಕೇಂದ್ರ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಈಗ ತೆರವಾಗಿದೆ. ಶಾಸಕ ಸ್ಥಾನಕ್ಕೆ ಈಗ ಬೈ ಎಲೆಕ್ಷನ್ ನಡೆಯಲಿದೆ. ಈಗಾಗಲೇ ಬಿಜೆಪಿಯಿಂದ ಸಿಪಿವೈ ಯೋಗೀಶ್ವರ್ ಅವರು ಚನ್ನಪಟ್ಟಣ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದರೆ, ಮಗನ ರಾಜಕೀಯ ಭವಿಷ್ಯದ ಯಶಸ್ಸಿಗಾಗಿ ಕುಮಾರಸ್ವಾಮಿ ಯೋಚನೆ ಮಾಡುತ್ತಿದ್ದಾರೆ. ಚನ್ನಪಟ್ಟಣದಲ್ಲಿ ನಿಖಿಲ್ ಅವರನ್ನು ನಿಲ್ಲಿಸಿ, ಒಮ್ಮೆಯಾದರೂ ಗೆಲ್ಲಿಸಬೇಕೆಂದ ಆಸೆ ಇಟ್ಟುಕೊಂಡಿದ್ದಾರೆ. ಇದೀಗ ಕಾಂಗ್ರೆಸ್ ನಲ್ಲೂ ಚನ್ನಪಟ್ಟಣವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವ ಪ್ಲ್ಯಾನ್ ನಡೆಯುತ್ತಿದೆ. ಹೀಗಾಗಿ ನೇರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಕಣಕ್ಕೆ ಇಳಿದಿದ್ದಾರೆ.

ಇಂದು ಚನ್ನಪಟ್ಟಣಕ್ಕೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್ ಅವರು, ಚನ್ನಪಟ್ಟಣದ ಜನತೆ ಕುರಿತು ಮಾತನಾಡಿದ್ದಾರೆ. ಈ ಕ್ಷೇತ್ರದ ಜನರ ಋಣ ತೀರಿಸುವುದಕ್ಕೆ ನಾನು ಇಲ್ಲಿಗೆ ಬಂದಿದ್ದೇನೆ. ಚನ್ನಪಟ್ಟಣದಲ್ಲಿ ಬದಲಾವಣೆ ತರಬೇಕು ಅಂತ ನಾನು ಬಂದಿದ್ದೇನೆ. ಬೆಂಗಳೂರಿನ ರೀತಿಯಲ್ಲಿ ರಾಮನಗರ ಅಭಿವೃದ್ಧಿ ಆಗಬೇಕು. ಇಲ್ಲಿಂದಲೇ ನನ್ನ ರಾಜಕೀಯದ ಹೊಸ ಅಧ್ಯಾಯವನ್ನು ಆರಂಭಿಸುತ್ತೇನೆ ಎಂದು ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಇನ್ನು ಈ ಬಾರಿಯ ಲೋಕಸಭೆಯಲ್ಲಿ ಡಿಕೆ ಸುರೇಶ್ ಸೋಲು ಅನುಭವಿಸಿರುವುದು ಕಾಂಗ್ರೆಸ್ ಗೆ ಮುಜುಗತವಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಗೂ ಅದು ಬೇಸರ ತರಿಸಿದೆ. ಈಗ ಚನ್ನಪಟ್ಟಣಕ್ಕೆ ಮತ್ತೆ ನಿಲ್ಲಿಸಿದರೆ, ಸೋಲು ಕಂಡರೆ ಇನ್ನಷ್ಟು ಮುಖಭಂಗವಾಗಲಿದೆ. ಹೀಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಉಪಚುನಾವಣೆಯ ಅಖಾಡಕ್ಕೆ ಇಳಿದಿದ್ದಾರೆ. ಚನ್ನಪಟ್ಟಣದಲ್ಲಿ ಗೆಲ್ಲಲೇಬೇಕೆಂದುಕೊಂಡಿರುವ ಡಿಕೆಶಿ, ಈ ಮೂಲಕ ಸಿಪಿ ಯೋಗೀಶ್ವರ್ ಹಾಗೂ ಕುಮಾರಸ್ವಾಮಿಗೂ ತಿರುಗೇಟು ನೀಡಲು ಸಿದ್ಧರಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!