Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇನ್ಮುಂದೆ ಸರ್ಕಾರಿ ಶಾಲೆಯಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ..!

Facebook
Twitter
Telegram
WhatsApp

 

ಬೆಂಗಳೂರು: ಕಳೆದ ಹಲವು ವರ್ಷಗಳಿಂದ ಜನರಲ್ಲಿ ಒಂದು ಟ್ರೆಂಡಿಂಗ್ ಹುಟ್ಟಿಕೊಂಡು ಬಿಟ್ಟಿದೆ. ಅನಾಥ ಆಶ್ರಮ, ಸರ್ಕಾರಿ ಶಾಲೆಗಳು ಹೀಗೆ ಕೆಲವು ಕಡೆಗೆ ಹೋಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಬರುವುದು. ಅಲ್ಲಿ‌ ಕೇಕ್ ಕಟ್ ಮಾಡಿ ಮಕ್ಕಳಿಗೆ ಹಂಚುವುದು. ಆದರೆ ಇದು ಮಕ್ಕಳ ಮೇಲೆ ಎಷ್ಟು ಕೆಟ್ಟ ಪರಿಣಾಮ ಬೀರಬಹುದು ಎಂಬ ಅಂದಾಜು ಇರುವುದಿಲ್ಲ. ಈ ರೀತಿ ಮಾನಸಿಕ ಹಿಂಸೆ ಮಕ್ಕಳಿಗೆ ಆಗದಂತೆ ತಡೆಯಲು ಸರ್ಕಾರ ಒಂದು ಕಟ್ಟು ನಿಟ್ಟಿನ ಆದೇಶ ಹೊರಡಿಸಿದೆ.

 

ಇನ್ಮುಂದೆ ಯಾರು ಕೂಡ ಸರ್ಕಾರಿ ಶಾಲೆಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡುವಂತೆ ಇಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಸೆಲೆಬ್ರೆಟಿಗಳು ಗಣ್ಯ ವ್ಯಕ್ತಿಗಳು ಹಾಗೂ ಅವರ ಮಕ್ಕಳ ಹುಟ್ಟುಹಬ್ಬವನ್ನು ಆಚರಣೆ ಮಾಡದಂತೆ ನಿಷೇಧಿಸಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ ಈ ಸುತ್ತೋಲೆ ಹೊರಡಿಸಿರುವ ಉದ್ದೇಶವೇ ಬೇರೆ ಆಗಿದೆ. ಮಕ್ಕಳ ಮನಸ್ಸಿಗೆ ನೋವಾಗದಂತೆ ನೋಡಿಕೊಳ್ಳುವುದಕ್ಕೆ ಈ ರೀತಿಯ ಆದೇಶ ಹೊರಡಿಸಿದೆ. ಎಷ್ಟೋ ಮಕ್ಕಳ ಮನೆಯಲ್ಲಿ ಅನುಕೂಲವಿರುವುದಿಲ್ಲ. ಹುಟ್ಟುಹಬ್ಬವನ್ನು ಆಚರಣೆ ಮಾಡುವುದಿಲ್ಲ. ಆದರೆ ಹೀಗೆ ಗಣ್ಯ ವ್ಯಕ್ತಿಗಳು ತಮ್ಮ ಮಕ್ಕಳ ಹುಟ್ಟುಹಬ್ಬವನ್ನು ಆಚರಣೆ ಮಾಡಿದರೆ ಮಕ್ಕಳಿಗೆ ಮನಸ್ಸಿಗೆ ನೋವಾಗುತ್ತದೆ. ಮಕ್ಕಳ‌ ಮನಸ್ಸು ತುಂಬಾ ಸೂಕ್ಷ್ಮವಾಗಿರುತ್ತದೆ. ಹೀಗಾಗಿ ಅದನ್ನು ನೋಯಿಸಬಾರದು ಎಂದು ಇಲಾಖೆ ಈ ರೀತಿಯ ಸುತ್ತೋಲೆಯನ್ನು ಹೊರಡಿಸಿದೆ. ಸರ್ಕಾರಿ ಸ್ವಾಮ್ಯದ ಶಾಲೆಯಲ್ಲಿ ಯಾರೂ ಕೂಡ ಕೇಕ್ ತರಿಸಿ ಕಟ್ ಮಾಡಿಸಬಾರದು ಎಂದು ಸೂಚನೆ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!