Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟೀಂ ಇಂಡಿಯಾದ ಮಾಜಿ ಆಟಗಾರ, ಹಾಸನ ಮೂಲದ ಡೇವಿಡ್ ಜಾನ್ಸನ್ ಆತ್ಮಹತ್ಯೆ..!

Facebook
Twitter
Telegram
WhatsApp

 

ಭಾರತದ ಮಾಜಿ ಆಟಗಾರ ಡೇವಿಡ್ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರಿಗೆ 53 ವರ್ಷ ವಯಸ್ಸಾಗಿತ್ತು. ತಾವಿದ್ದ ಮನೆಯ ನಾಲ್ಕನೇ ಫ್ಲೋರ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಇನ್ನು ನಿಖರ ಕಾರಣ ತಿಳಿದಿಲ್ಲ. ಸದ್ಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

 

ಡೇವಿಡ್ ಜಾನ್ಸನ್ ಮೂಲತಃ ಹಾಸನದ ಅರಸೀಕೆರೆಯವರು. ನಮ್ಮ ಕನ್ನಡದವರು ಎಂಬುದೇ ಹೆಮ್ಮೆಯ ವಿಷಯವಾಗಿತ್ತು. ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆದರೆ ಈಗ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಎಂಬುದೇ ಎಲ್ಲರ ಪ್ರಶ್ನೆಯಾಗಿದೆ‌. ವೇಗದ ಮಧ್ಯದ ಬೌಲರ್ ಆಗಿ ಗುರುತಿಸಿಕೊಂಡವರು. ಕೆಳ ಕ್ರಮಾಂಕದ ಬ್ಯಾಟ್ಸ್ ಮಬ್ ಕೂಡ ಆಗಿದ್ದವರು. 1996ರಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದ ಕೀರ್ತಿ ಇವರದ್ದು. ಜೊತೆಗೆ ಮೂರು ವಿಕೆಟ್ ಗಳನ್ನು ಪಡೆದಿದ್ದಾರೆ.

ಇವರ ಆತ್ಮಹತ್ಯೆ ಕ್ರಿಕೆಟ್ ಪ್ರಿಯರಿಗೆ ಆಘಾತ ತಂದಿದೆ. ಫಿರೋಜ್ ಶಾ ಕೋಟ್ಲಾದಲ್ಲಿ ನಡೆದ ಏಕೈಕ ಟೆಸ್ಟ್ ನಲ್ಲೂ ಆಸ್ಟ್ರೇಲಿಯಾ ವಿರುದ್ಧ ಚೊಚ್ಚಲ ಟೆಸ್ಟ್ ಆಡಿದ್ದ ಹೆಗ್ಗಳಿಕೆ ಇವರದ್ದು. ಇವರ ನಿಧನಕ್ಕೆ ಕ್ರಿಕೆಟ್ ಲೋಕ ಕಂಬನಿ ಮಿಡಿದಿದೆ. ಇವರ ಆತ್ಮಕ್ಕೆ ಎಲ್ಲರೂ ಶಾಂತಿ ಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಲವು ನಟಿಯರ ವಿರುದ್ಧ ರೇಣುಕಾಸ್ವಾಮಿ ತಂದೆ ಆಕ್ರೋಶ : ಯಾಕೆ ಗೊತ್ತಾ..?

ಸುದ್ದಿಒನ್, ಚಿತ್ರದುರ್ಗ, ಜುಲೈ. 03 : ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸುತ್ತಿದ್ದ ಎಂದು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಎಚ್ಚರಿಕೆ ಕೊಡಲು ಹೋಗಿ ಆ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಕೊಲೆ ಆರೋಪದಲ್ಲಿ ದರ್ಶನ್

ಕರ್ನಾಟಕದಲ್ಲಿ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶಿಸಿದ ಸರ್ಕಾರ..!

ಬೆಂಗಳೂರು: ರಾಜ್ಯ ಆಡಳಿತ ಸುಧಾರಣೆಗಾಗಿ, ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರ ವರ್ಗಾವಣೆಯ ಸರ್ಜರಿ ಮಾಡಿದೆ. ರಾಜ್ಯದಲ್ಲಿ 25 ಐಪಿಎಸ್ ಆಫೀಸರ್ ಗಳ ವರ್ಗಾವಣೆಯನ್ನು ಮಾಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ

ಡೆಂಗ್ಯೂನಿಂದ ಈಗಾಗಲೇ 6 ಸಾವು : ಇನ್ನೂ ಏರಲಿದೆ ಅಂದ್ರು ಆರೋಗ್ಯ ಸಚಿವರು..!

ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಡೆಂಗ್ಯೂ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಅದರಲ್ಲೂ ಬೆಂಗಳೂರು ನಗರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿವೆ. ಅದರಲ್ಲೂ ಈಗಾಗಲೇ ಆರು ಜನ ಸಾವನ್ನಪ್ಪಿದ್ದಾರೆ. ಇದೀಗ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

error: Content is protected !!