Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ : ಪವಿತ್ರಾ ಗೌಡಗೆ ನ್ಯಾಯಾಂಗ ಬಂಧನ

Facebook
Twitter
Telegram
WhatsApp

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದರ್ಶನ್ ಅವರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ದರ್ಶನ್ ಸೇರಿದಂತೆ ಆರು ಜನರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ರೇಣುಕಾಸ್ವಾಮಿ ಅವರ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಇಂದು ಅವರ ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಮತ್ತೆ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಕಳೆದ ಬಾರಿಯೇ ಕಸ್ಟಡಿ ಅಂತ್ಯವಾದ ವೇಳೆ ಪವಿತ್ರಾ ಹಾಗೂ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡುವುದಕ್ಕೆ ಮನವಿ ಮಾಡಿದ್ದರು. ಆದರೆ ಪೊಲೀಸರು ಸ್ಥಳ ಮಹಜರು, ತನಿಖೆ ಇದೆ ಅಂತ ಹೇಳಿ ಕಸ್ಟಡಿಗೆ ತೆಗೆದುಕೊಂಡಿದ್ದರು‌. ಆಗ ಐದು ದಿನಗಳ ಮೇರೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಇಂದು ಎರಡನೇ ಅವಧಿ ಮುಗಿದ ಹಿನ್ನೆಲೆ ಸಂಜೆ ವೇಳೆಗೆ ಪೊಲೀಸರು ಕೋರ್ಟ್ ಮುಂದೆ ದರ್ಶನ್ ಅಂಡ್ ಗ್ಯಾಂಗ್ ಅನ್ನು ಹಾಜರುಪಡಿಸಿತ್ತು. ನ್ಯಾಯಾಧೀಶರು ಎರಡು ಕಡೆಯ ವಾದ-ಪ್ರತಿವಾದವನ್ನು ಆಲಿಸಿದ್ದರು‌. ಇತ್ತ ರಿಮ್ಯಾಂಡ್ ಅರ್ಜಿಯಲ್ಲಿ ದರ್ಶನ್ ಹಾಗೂ ಆರು ಮಂದಿಯನ್ನು ತಮ್ಮ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಲಾಗಿತ್ತು.

ಈ ಸಂಬಂಧ ಕೊಲೆ ಆರೋಪ ಇರುವ ದರ್ಶನ್, ವಿನಯ್, ಪ್ರದೂಶ್, ನಾಗರಾಜ, ಲಕ್ಷ್ಮಣ, ಧನರಾಜ್ ಎಂಬುವವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪವಿತ್ರಾ ಗೌಡ ಸೇರಿದಂತೆ ಆರು ಜನ ಜೈಲು ಪಾಲಾಗಿದ್ದಾರೆ. ಆರೋಪಿಗಳ ಸ್ಯಾಂಪಲ್ ಅನ್ನು ಎಫ್ಎಸ್ಎಲ್ ಗೆ ಕಳುಹಿಸಲಾಗಿದ್ದು, ಅದರ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಹೀಗಾಗಿ ಮುಂದಿನ ತನಿಖೆಗಾಗಿ ಮತ್ತೆ ಕಸ್ಟಡಿಗೆ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜುಲೈ 20 ರಂದು ಗಿನ್ನಿಸ್ ದಾಖಲೆ ರೀತಿ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವ ಆಚರಣೆ : ಎಸ್.ರವಿಕುಮಾರ್

ಸುದ್ದಿಒನ್, ಚಿತ್ರದುರ್ಗ, ಜುಲೈ. 07 :ಪಕ್ಷಾತೀತವಾಗಿ ಸಮಾಜವನ್ನು ಸಂಘಟಿಸಬೇಕು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಹೇಳಿದರು. ನಗರದ ಹೊರವಲಯದಲ್ಲಿರುವ ಭೋವಿ ಗುರುಪೀಠದಲ್ಲಿ ಭಾನುವಾರ ನಡೆದ ದೀಕ್ಷಾ ರಜತ್ ಮಹೋತ್ಸವದ ಪೂರ್ವಭಾವಿ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತ ಮಹೋತ್ಸವ | ಚಿತ್ರದುರ್ಗ ಭಾವೈಕ್ಯತೆಯ ಊರು, ಶಾಂತಿಯ ತೋಟ : ಎಂ.ಕೆ.ತಾಜ್‍ಪೀರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಜು. 7 :  ಚಿತ್ರದುರ್ಗ ಎಂದರೆ ಭಾವ್ಯಕತ್ಯೆಯ ಶಕ್ತಿಯನ್ನು ಹೊಂದಿದ ಊರಾಗಿದೆ ಇಲ್ಲಿ ಮಠಗಳು, ಮಸೀದಿಗಳು,

ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಎಸ್ಟಿ ವಿಭಾಗದ ಅಧ್ಯಕ್ಷ ಬಿ.ಮಂಜುನಾಥ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಮಂಜುನಾಥ್ ಲೋಕೋಪಯೋಗಿ ಸಚಿವ ಸತೀಶ್‍ಜಾರಕಿಹೊಳಿರವರ

error: Content is protected !!