Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಎಸ್.ಆರ್.ಎಸ್ ಹೆರಿಟೇಜ್ ಶಾಲೆಯಲ್ಲಿ “ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಯೋಗಾಭ್ಯಾಸ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜೂನ್.21 : ಯೋಗ ಬಲ್ಲವನಿಗೆ ರೋಗವಿಲ್ಲ”. ‘ಅಹಂ’ ನಿಂದ ‘ಸ್ವಯಂ’ ಕಡೆಗೆ ಹೋಗುವ ಯೋಗ, ವಿಶ್ವದಾದ್ಯಂತ ಪ್ರತಿ ವರ್ಷ ಆಚರಿಸಲಾಗುತ್ತದೆ, ಯೋಗ ಭಾರತದಲ್ಲಿ ಹುಟ್ಟಿದ ಜಾಗತಿಕ ವಿದ್ಯೆ, ಇದು ವಿಶ್ವದಾದ್ಯಂತ ಹರಡಿ ಪ್ರಖ್ಯಾತಿ ಪಡೆದಿದೆ ಎಂದು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ಎಸ್‍ಜೆ  ಹೇಳಿದರು.

ನಗರದ ಎಸ್.ಆರ್.ಎಸ್ ಹೆರಿಟೇಜ್ ಶಾಲೆಯಲ್ಲಿ  “ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆಧ್ಯಾತ್ಮಿಕ ಮತ್ತು ಆರೋಗ್ಯ ಎರಡು ಮುಖದಿಂದಲೂ ತನ್ನನ್ನೂ ನಂಬಿದವರನ್ನೂ ಪೊರೆಯಬಲ್ಲ ಪಾರಂಪರಿಕ ಕಲೆಯಾಗಿ ತನ್ನದೆಯಾದ ವಿಶೇಷ ಗುಣಗಳಿಂದ ಜನರ ಆರೋಗ್ಯ ಕಾಪಾಡುವಲ್ಲಿ ಉತ್ತಮ ಪಾತ್ರವಹಿಸುತ್ತದೆ. ಮನುಷ್ಯನಿಗೆ ಬಾಹ್ಯ ಮತ್ತು ಆಂತರಿಕ ಸೌಂದರ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಅವರು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ. ಎ. ಲಿಂಗಾರೆಡ್ಡಿಯವರು ವಹಿಸಿದ್ದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಯೋಗ ಕ್ರಿಡಾ ಮತ್ತು ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರಾದ ಚಿನ್ಮಯಾನಂದ ಅವರು ಭಾಗವಹಿಸಿ,
ಎಸ್‍ಆರ್‍ಎಸ್‍ ಬೃಹತ್‍ ಅನಂತ ಕೃಷ್ಣ  ಸಭಾಂಗಣದಲ್ಲಿ 1000 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಂದೇ ವೇದಿಕೆಯಲ್ಲಿ  ಸಂಸ್ಕೃತ ಶ್ಲೋಕದೊಂದಿಗೆ ಓಂಕಾರ ಉಚ್ಛಾರಣೆ ಹಾಗೂ ಯೋಗಾಸನಗಳು ಮತ್ತು ಪ್ರಾಣಾಯಾಮ, ಧ್ಯಾನ ಮತ್ತು ಯೋಗದ ನಾನಾ ಭಂಗಿಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗಭ್ಯಾಸ ಮಾಡಿಸಿದರು.

ಅಂತಾರಾಷ್ಟ್ರೀಯ ಯೋಗದಿನವನ್ನು ಒಂದು ಸ್ಮರಣೀಯ ದಿನವನ್ನಾಗಿ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಡಾ. ರವಿ ಟಿ. ಆಡಳಿತಾಧಿಕಾರಿಗಳು, ಶಾಲೆಯ ಪ್ರಾಂಶುಪಾಲರುಗಳಾದ ಶ್ರಿಯುತ ಪ್ರಭಾಕರ್ ಎಮ್ ಎಸ್(ಸಿಬಿಎಸ್‍ಇ) ಹಾಗೂ ಶ್ರೀಮತಿ ಅರ್ಪಿತ ಎಮ್ ಎಸ್ (ಐಸಿಎಸ್‍ಇ) ಮತ್ತು, ಕೋ-ಆರ್ಡಿನೇಟರ್‍ಗಳು ಶಾಲೆಯ ಬೋಧಕ ಮತ್ತು ಬೋಧಕೇತರ ವರ್ಗ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

INDIA Vs ZIMBABWE : 13 ರನ್‌ಗಳ ಅಂತರದಿಂದ ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಸೋಲು

  ಸುದ್ದಿಒನ್ : ಟಿ20 ವಿಶ್ವಕಪ್ ಗೆದ್ದ ಭಾರತ ಆ ಬಳಿಕ ಮೊದಲ ಸರಣಿಯನ್ನು ಸೋಲಿನೊಂದಿಗೆ ಆರಂಭಿಸಿದೆ.  ಜಿಂಬಾಬ್ವೆ ವಿರುದ್ಧ 13 ರನ್‌ಗಳಿಂದ ಸೋತಿತು. ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್

ಹೆಚ್ಡಿಕೆ ಜನತಾ ದರ್ಶನಕ್ಕೆ 3 ಸಾವಿರ ಜನ ಬಂದಿದ್ರು..ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಯೋಜನೆಗಳನ್ನ ಕೊಡಿಸಲಿ ನೋಡೋಣಾ : ಚೆಲುವರಾಯಸ್ವಾಮಿ

ಬೆಂಗಳೂರು: ಮೊನ್ನೆಯಷ್ಟೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಜನತಾ ದರ್ಶನ ನಡೆಸಿದ್ದರು‌. ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾಗಿದ್ದಕ್ಕೆ ಸರ್ಕಾರದ ಮೇಲೆ ಕಿಡಿಕಾರಿದ್ದರು. ಇದೀಗ ಜನತಾ ದರ್ಶನದ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಅವರು ಆಕ್ರೋಶ

ಚಿತ್ರದುರ್ಗ | ಪಿ.ಸಿ.ಪಿ.ಎನ್.ಡಿ.ಟಿ ಸಲಹಾ ಸಮಿತಿಯ ಅಧ್ಯಕ್ಷರಾಗಿ ಡಾ. ಸೌಮ್ಯ ನೇಮಕ

ಚಿತ್ರದುರ್ಗ. ಜುಲೈ.06:  ಪಿ.ಸಿ.ಪಿ.ಎನ್.ಡಿ.ಟಿ (ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರ ವಿಧಾನಗಳು (ಲಿಂಗ ಆಯ್ಕೆ ನಿಷೇಧ) ಕಾಯ್ದೆ ಅನುಸಾರ ಸಲಹಾ ಸಮಿತಿಯನ್ನು ಪುನರ್ ರಚಿಸಲಾಗಿದ್ದು, ಸಲಹಾ ಸಮಿತಿ ಅಧ್ಯಕ್ಷರಾಗಿ ಚಿತ್ರದುರ್ಗದ ಖಾಸಗಿ ನರ್ಸಿಂಗ್

error: Content is protected !!