Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇರಳದಲ್ಲಿ ನಿಫಾ ವೈರಸ್ : ರಾಜ್ಯಕ್ಕೆ ಹರಡದಂತೆ ಮುಂಜಾಗ್ರತೆ : ಸಚಿವ ಸುಧಾಕರ್

Facebook
Twitter
Telegram
WhatsApp

ಬೆಂಗಳೂರು: ನವೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲ ವಯಸ್ಕರಿಗೂ ಎರಡೂ ಡೋಸ್ ಕೋವಿಡ್ ಲಸಿಕೆ ಪೂರ್ಣಗೊಳಿಸುವ ಗುರಿಯನ್ನು ನಿಗದಿಪಡಿಸಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕೋವಿಡ್ ಲಸಿಕಾ ಅಭಿಯಾನದಲ್ಲಿ ಕಡಿಮೆ ಸಾಧನೆ ಮಾಡಿದ 23 ಜಿಲ್ಲೆಗಳೊಂದಿಗೆ ವೀಡಿಯೋ ಸಂವಾದ ನಡೆಸಿದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಲಸಿಕೆ ಅಭಿಯಾನಕ್ಕೆ ವೇಗ ನೀಡುವ ಬಗ್ಗೆ ಹಾಗೂ ಈ ತಿಂಗಳೊಳಗೆ ಎಲ್ಲರಿಗೂ ಮೊದಲ ಡೋಸ್ ಪೂರ್ಣಗೊಳಿಸಲು ಸೂಚಿಸಲಾಗಿದೆ. ನವೆಂಬರ್ ಅಂತ್ಯದೊಳಗೆ ಎಲ್ಲ ವಯಸ್ಕರಿಗೆ ಲಸಿಕೆ ನೀಡುವ ಗುರಿ ತಲುಪಬೇಕೆಂದು ಸೂಚನೆ ನೀಡಲಾಗಿದೆ. ಜೊತೆಗೆ ಕೊರೊನಾ ಪರೀಕ್ಷೆ, ಆಕ್ಸಿಜನ್ ಘಟಕ ಆರಂಭ, ಸಿವಿಲ್ ಕಾರ್ಯ ಮೊದಲಾದವುಗಳ ಬಗ್ಗೆ ಚರ್ಚಿಸಲಾಗಿದೆ. ಮುಖ್ಯಮಂತ್ರಿಗಳು ಕೂಡ ಹಲವು ಸಲಹೆ, ಸೂಚನೆ ನೀಡಿದ್ದಾರೆ ಎಂದರು.

ಕಳೆದ ವರ್ಷ ಹೆಚ್ಚು ಸೋಂಕಿತರಿದ್ದಾಗಲೂ ಸರಳ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿತ್ತು. ಈ ವರ್ಷ 0.7% ಪಾಸಿಟಿವಿಟಿ ದರವಿದ್ದು, ಹೆಚ್ಚು ಸುರಕ್ಷತಾ ನಿಯಮ ಪಾಲಿಸಲು ಸೂಚಿಸಲಾಗಿದೆ. ಯಾವುದೇ ಜಿಲ್ಲೆಯಲ್ಲಿ 2% ಗಿಂತ ಹೆಚ್ಚಾದರೆ ಅಲ್ಲಿ ಬೇರೆ ಕ್ರಮ ವಹಿಸಲಾಗುತ್ತದೆ ಎಂದರು.

ಕೇರಳದಲ್ಲಿ ಒಬ್ಬ ಬಾಲಕನಿಗೆ ನಿಫಾ ವೈರಸ್ ಸೋಂಕು ಕಂಡುಬಂದಿದೆ. ಈ ಸೋಂಕು ರಾಜ್ಯದಲ್ಲಿ ಎಲ್ಲೂ ಹರಡದಂತೆ ಕ್ರಮ ವಹಿಸಲಾಗಿದೆ. ಗಡಿಭಾಗಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಮೂರನೇ ಅಲೆ ತಡೆಗಟ್ಟುವುದು ಮುಖ್ಯವಾದ ಗುರಿ. ಇದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ ಮೊದಲು ಅಲೆಯನ್ನು ತಡೆಯಬೇಕಿದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!