Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೀಟ್ ಪರೀಕ್ಷೆಯಲ್ಲಿ ಅನ್ಯಾಯವಾಗಿಲ್ಲ ಎಂದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ..!

---Advertisement---

ಹುಬ್ಬಳ್ಳಿ: ಇತ್ತಿಚೆಗಷ್ಟೇ ನೀಟ್ ಪರೀಕ್ಷೆ ಮುಗಿದಿದೆ. ಈ ಪರೀಕ್ಷೆಯಲ್ಲೂ ಅನ್ಯಾಯವಾಗಿದೆ ಎಂದು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ವಿಚಾರ ಚರ್ಚೆಗೆ ಬಂದ ಮೇಲೆ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಈ ಮಧ್ಯೆ ಬಿಜೆಪಿ ನಾಯಕ ಮಹೇಶ್ ಟೆಂಗಿನಕಾಯಿ ನೀಟ್ ಪರೀಕ್ಷೆಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಜನರ ದಿಕ್ಜು ತಪ್ಪಿಸುವ ಕೆಲಸವಾಗುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕರು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಅನ್ಯಾಯ ಯಾಕೆ ಆಗುತ್ತದೆ. ಎಷ್ಟೋ ಜನ ರ್ಯಾಂಕ್ ಬರುತ್ತಾರೆ. ಸರ್ಕಾರಕ್ಕೆ ಯಾವುದೇ ಅಜೆಂಡಾ ಇಲ್ಲ. ಪ್ರಧಾನಿ ಮೋದಿ ಒಳ್ಳೆಯ ಆಡಳಿತ ನೀಡುತ್ತಿದೆ. ಕಾಂಗ್ರೆಸ್ ನವರಿಗೆ ಮಾತನಾಡುವುದಕ್ಕೆ ಬೇರೆ ವಿಷಯವೇ ಇಲ್ಲ. ಸುದ್ದಿ ಸಿಗದೆ ಇದ್ದಾಗ ಹೀಗೆ ಸುಳ್ಳು ಆರೋಪಗಳನ್ನು ಹೊರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕರ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ.

ಇದೇ ವೇಳೆ ಪೆಟ್ರೋಲ್-ಡಿಸೇಲ್ ದರ ಏರಿಕೆಯ ಬಗ್ಗೆಯೂ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರು ಪೆಟ್ರೋಲ್-ಡಿಸೇಲ್ ದರ ಏರಿಕೆಯ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ. ಜನರ ಒಂದು ಜೇಬಿನಿಂದ ತೆಗೆದುಕೊಂಡು ಇನ್ನು ಎರಡು ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಒಂದು ವರ್ಷದಲ್ಲಿ ರಾಜ್ಯ ಸರ್ಕಾರ ಸಾಕಷ್ಟು ಬೆಲೆ ಏರಿಕೆ ಮಾಡಿದೆ. ರಾಜ್ಯದಲ್ಲಿ ಹಣಕಾಸಿನ ವ್ಯವಸ್ಥೆ ಸಂಪೂರ್ಣವಾಹಿ ಹದಗೆಟ್ಟಿದೆ. ಅದಕ್ಕಾಗಿಯೇ ಈ ರೀತಿಯಾದಂತ ಹೇಳಿಕೆ ಕೊಡುತ್ತಿದ್ದಾರೆ. ತಕ್ಷಣ ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆಯನ್ನು ಕಡಿಮೆ ಮಾಡಬೇಕು ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment