Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಪ್ರಶಾಂತಿ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 21 : ಯೋಗಾಭ್ಯಾಸಕ್ಕೆ ವಯಸ್ಸು ಮುಖ್ಯವಲ್ಲ. ಕಲಿಯುವ ಆಸಕ್ತಿಯಿರಬೇಕೆಂದು ಐ.ಯು.ಡಿ.ಪಿ. ಬಡಾವಣೆಯ ನಿಸರ್ಗ ಯೋಗ ಕೇಂದ್ರದ ಯೋಗ ಗುರು ಶಿವಲಿಂಗಪ್ಪ ತಿಳಿಸಿದರು.

ಐ.ಯು.ಡಿ.ಪಿ. ಬಡಾವಣೆಯಲ್ಲಿರುವ ಪ್ರಶಾಂತಿ ವಿದ್ಯಾಲಯದಲ್ಲಿ ಹತ್ತನೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಯೋಗ ಪ್ರದರ್ಶನದಲ್ಲಿ ಭಾಗವಹಿಸಿ ಮಾತನಾಡಿದರು.

ಯೋಗ ಇಂದು ಹೆಮ್ಮರವಾಗಿ ಬೆಳೆದಿದ್ದು, ವೈದ್ಯಕೀಯ ಲೋಕಕ್ಕೆ ಸವಾಲಾಗಿ ನಿಂತಿದೆ. ಔಷಧೋಪಚಾರಗಳಿಂದ ಗುಣವಾಗದ ರೋಗಗಳನ್ನು ವಾಸಿ ಮಾಡುವ ಶಕ್ತಿ ಯೋಗಕ್ಕಿದೆ. ಹೀಗಾಗಿ ದೇಶ ವಿದೇಶಗಳಲ್ಲೂ ಯೋಗಕ್ಕೆ ಮಹತ್ವವಿದೆ ಎಂದರು.

ಹವ್ಯಾಸಿ ಯೋಗ ಪಟುಗಳಾದ ಜಯಣ್ಣ, ಪುಷ್ಪ, ಸಂಯುಕ್ತ, ದಿವ್ಯ ಇವರುಗಳ ಆಕರ್ಷಕ ಯೋಗ ಪ್ರದರ್ಶನವನ್ನು ಕಂಡು ನೆರದಿದ್ದವರು ಪುಳಕಿತರಾದರು.

ಪ್ರಶಾಂತಿ ಶಾಲೆಯ ಮುಖ್ಯಸ್ಥರಾದ ರಮೇಶ್ ಇಟಗಿ, ಶಿಕ್ಷಕಿಯರುಗಳಾದ ಸಂಪದ, ಸಂಧ್ಯಾ ಈ ಸಂದರ್ಭದಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂಡಾ ಹಗರಣವನ್ನು ಗಮನಕ್ಕೆ ತಂದಿದ್ದ ಡಿಸಿ ಸೇರಿದಂತೆ 21 ಐಎಎಸ್ ಅಧಿಕಾರಿಗಳ ವರ್ಗಾವಣೆ..!

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ ಹಗರಣ ಸದ್ಯ ರಾಜ್ಯದಲ್ಲಿಯೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸರ್ಕಾರ ಹಾಗೂ ವಿಪಕ್ಷ ನಾಯಕರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಈ ಮೂಡಾ ಹಗರದ ಬಗ್ಗೆ ಒಂದು ವರ್ಷದ ಹಿಂದೆಯೇ ಸರ್ಕಾರದ

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು, ಶುಕ್ರವಾರ- ರಾಶಿ ಭವಿಷ್ಯ ಜುಲೈ-5,2024 ಸೂರ್ಯೋದಯ: 05:50, ಸೂರ್ಯಾಸ್ತ : 06:50 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

error: Content is protected !!