Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪ್ರಶಾಂತಿ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 21 : ಯೋಗಾಭ್ಯಾಸಕ್ಕೆ ವಯಸ್ಸು ಮುಖ್ಯವಲ್ಲ. ಕಲಿಯುವ ಆಸಕ್ತಿಯಿರಬೇಕೆಂದು ಐ.ಯು.ಡಿ.ಪಿ. ಬಡಾವಣೆಯ ನಿಸರ್ಗ ಯೋಗ ಕೇಂದ್ರದ ಯೋಗ ಗುರು ಶಿವಲಿಂಗಪ್ಪ ತಿಳಿಸಿದರು.

ಐ.ಯು.ಡಿ.ಪಿ. ಬಡಾವಣೆಯಲ್ಲಿರುವ ಪ್ರಶಾಂತಿ ವಿದ್ಯಾಲಯದಲ್ಲಿ ಹತ್ತನೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಯೋಗ ಪ್ರದರ್ಶನದಲ್ಲಿ ಭಾಗವಹಿಸಿ ಮಾತನಾಡಿದರು.

ಯೋಗ ಇಂದು ಹೆಮ್ಮರವಾಗಿ ಬೆಳೆದಿದ್ದು, ವೈದ್ಯಕೀಯ ಲೋಕಕ್ಕೆ ಸವಾಲಾಗಿ ನಿಂತಿದೆ. ಔಷಧೋಪಚಾರಗಳಿಂದ ಗುಣವಾಗದ ರೋಗಗಳನ್ನು ವಾಸಿ ಮಾಡುವ ಶಕ್ತಿ ಯೋಗಕ್ಕಿದೆ. ಹೀಗಾಗಿ ದೇಶ ವಿದೇಶಗಳಲ್ಲೂ ಯೋಗಕ್ಕೆ ಮಹತ್ವವಿದೆ ಎಂದರು.

ಹವ್ಯಾಸಿ ಯೋಗ ಪಟುಗಳಾದ ಜಯಣ್ಣ, ಪುಷ್ಪ, ಸಂಯುಕ್ತ, ದಿವ್ಯ ಇವರುಗಳ ಆಕರ್ಷಕ ಯೋಗ ಪ್ರದರ್ಶನವನ್ನು ಕಂಡು ನೆರದಿದ್ದವರು ಪುಳಕಿತರಾದರು.

ಪ್ರಶಾಂತಿ ಶಾಲೆಯ ಮುಖ್ಯಸ್ಥರಾದ ರಮೇಶ್ ಇಟಗಿ, ಶಿಕ್ಷಕಿಯರುಗಳಾದ ಸಂಪದ, ಸಂಧ್ಯಾ ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...