Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂತ್ರಸ್ತನ ವಿರುದ್ಧವೇ ದೂರು ದಾಖಲಿಸಿ ಸೂರಜ್ ರೇವಣ್ಣ..!

Facebook
Twitter
Telegram
WhatsApp

ಬೆಂಗಳೂರು: ಮಾಜಿ ಸಚಿವ ಹೆಚ್.ರೇವಣ್ಣ ಕುಟುಂಬದಲ್ಲಿ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ. ಸೂರಜ್ ರೇವಣ್ಣ ಅವರ ವಿರುದ್ಧ ಅಸಹಜ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದ್ದು, ತಮ್ಮದೇ ಜೆಡಿಎಸ್ ಕಾರ್ಯಕರ್ತನ ಮೇಲೆ ದೌರ್ಜನ್ಯವೆಸಗಿರುವ ಆರೋಪ ಕೇಳಿ ಬಂದಿದೆ. 

 

 

ಹಾಸನದ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತ ಈ ಸಂಬಂಧ ಬೆಂಗಳೂರಿನ ಡಿಸಿ ಕಚೇರಿಗೆ ಬಂದು ದೂರು ನೀಡಿದ್ದಾರೆ. ಜೂನ್ 16ರ ಸಂಜೆ ನನ್ನ ಮೇಲೆ ಬಲವಂತವಾಗಿ ಅಸಹಜ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಷ್ಟೇ ಅಲ್ಲ ತೋಟದ ಮನೆಗೆ ಕರೆಸಿಕೊಂಡು, ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದನ್ನು ಯಾರ ಬಳಿಯಾದರೂ ಹೇಳಿದರೆ ಕೊಲ್ಲುವುದಾಗಿಯೂ ತಿಳಿಸಿದ್ದಾರಂತೆ. ಹೀಗಾಗಿ ಬೆಂಗಳೂರಿನ ಡಿಸಿ ಕಚೇರಿಗೆ ಬಂದು ದೂರು ನೀಡಿದ್ದೇನೆ ಎಂದಿದ್ದಾರೆ. ಜೊತೆಗೆ ಎರಡು ಕೋಟಿ ಹಣ ಕೊಡುವ ಆಮಿಷ ಒಡ್ಡಿದ್ದಾರಂತೆ.

 

 

ಇನ್ನು ಈ ಕೇಸ್ ದಾಖಲಾಗುತ್ತಿದ್ದಂತರ ಸೂರಜ್ ರೇವಣ್ಣ ಕೂಡ ಪ್ರತಿ ದೂರು ನಿಡೀದ್ದಾರೆ. ಸಂತ್ರಸ್ತನ ವಿರುದ್ಧವೇ ಪ್ರತಿ ದೂರು ನೀಡಿದ್ದು, ಐದು ಕೋಟಿಗೆ ಡಿಮ್ಯಾಂಡ್ ಇಟ್ಟಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಸಂತ್ರಸ್ತ ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿರುವುದಲ್ಲದೆ, ಕುಟುಂಬದ ಮರ್ಯಾದೆ ಹಾಳು ಮಾಡುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದಾನೆಂದು ಆರೋಪಿಸಿದ್ದಾರೆ.

 

 

ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸುತ್ತಿಲ್ಲ ಅಂತ ಸೂರಕ್ ಆಪ್ತ ಶಿವಕುನಾರ್ ಮೂಲಕ ಬೆದರಿಕೆ ಹಾಕಿದ್ದಾರೆಂದು ಆರೋಪಿಸಲಾಗಿದೆ. ನಾನು ಬೆಂಗಳೂರಿಗೆ ಹೋಗಿ ಮಾಧ್ಯಮದ ಮುಂದೆ ಹೋಗುತ್ತೇನೆ, ಸೂರಜ್ ರೇವಣ್ಣರ ಮರ್ಯಾದೆ ಹಾಳು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆಂದು ಪ್ರತಿ ದೂರಿನಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಜರಂಗದಳ ಸೇವಾ ಸಪ್ತಾಹ : ತರಳಬಾಳು ನಗರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುದ್ದಿಒನ್, ಚಿತ್ರದುರ್ಗ, ಜೂನ್. 30 : ಬಜರಂಗದಳ ಸೇವಾ ಸಪ್ತಾಹದ ಅಂಗವಾಗಿ ವಿಶ್ವಹಿಂದು ಪರಿಷತ್, ಬಜರಂಗದಳದ ವತಿಯಿಂದ ನಗರದ ಹೊರವಲಯದ ತಮಟಗಲ್ಲು ರಸ್ತೆಯಲ್ಲಿರುವ ತರಳಬಾಳು ನಗರದ ಕಡ್ಲೆಬಟ್ಟಿ ಬಳಿ ಭಾನುವಾರ ಉಚಿತ ಆರೋಗ್ಯ ತಪಾಸಣಾ

ಗಾಡಿಗಳಿಗೆ ದರ್ಶನ್ ಖೈದಿ ನಂಬರ್ : ಕೇಸ್ ಹಾಕುವ ಎಚ್ಚರಿಕೆ ನೀಡಿದ ಟ್ರಾಫಿಕ್ ಪೊಲೀಸರು..!

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಜೈಲಿನಲ್ಲಿದ್ದಾರೆ. ಅವರಿಗೆ ಖೈದಿ ನಂಬರ್ 6106 ನೀಡಲಾಗಿದೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಸಪೋರ್ಟ್ ಮಾಡುವುದು ನಿಮಗೆಲ್ಲಾ ಗೊತ್ತೇ ಇದೆ. ಇದೀಗ ಈ ನಂಬರ್

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ : ಲಿಂಗಾಯತರಿಗೆ ನೀಡಲು ಒತ್ತಾಯ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ಹುದ್ದೆಗಳ ಹೆಚ್ಚಳದ್ದೇ ಸುದ್ದಿಯಾಗಿದೆ. ಸಿಎಂ ಸ್ಥಾನ ಬದಲಾವಣೆಯ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನಡುವೆ ಅಂತ ವೈಮನಸ್ಸಾಗಲಿ, ಒಬ್ಬರಿಗೊಬ್ಬರು ವಿರೋಧ ಹೇಳಿಕೆ

error: Content is protected !!