Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂತ್ರಸ್ತನ ವಿರುದ್ಧವೇ ದೂರು ದಾಖಲಿಸಿ ಸೂರಜ್ ರೇವಣ್ಣ..!

---Advertisement---

ಬೆಂಗಳೂರು: ಮಾಜಿ ಸಚಿವ ಹೆಚ್.ರೇವಣ್ಣ ಕುಟುಂಬದಲ್ಲಿ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ. ಸೂರಜ್ ರೇವಣ್ಣ ಅವರ ವಿರುದ್ಧ ಅಸಹಜ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದ್ದು, ತಮ್ಮದೇ ಜೆಡಿಎಸ್ ಕಾರ್ಯಕರ್ತನ ಮೇಲೆ ದೌರ್ಜನ್ಯವೆಸಗಿರುವ ಆರೋಪ ಕೇಳಿ ಬಂದಿದೆ. 

 

 

ಹಾಸನದ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತ ಈ ಸಂಬಂಧ ಬೆಂಗಳೂರಿನ ಡಿಸಿ ಕಚೇರಿಗೆ ಬಂದು ದೂರು ನೀಡಿದ್ದಾರೆ. ಜೂನ್ 16ರ ಸಂಜೆ ನನ್ನ ಮೇಲೆ ಬಲವಂತವಾಗಿ ಅಸಹಜ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಷ್ಟೇ ಅಲ್ಲ ತೋಟದ ಮನೆಗೆ ಕರೆಸಿಕೊಂಡು, ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದನ್ನು ಯಾರ ಬಳಿಯಾದರೂ ಹೇಳಿದರೆ ಕೊಲ್ಲುವುದಾಗಿಯೂ ತಿಳಿಸಿದ್ದಾರಂತೆ. ಹೀಗಾಗಿ ಬೆಂಗಳೂರಿನ ಡಿಸಿ ಕಚೇರಿಗೆ ಬಂದು ದೂರು ನೀಡಿದ್ದೇನೆ ಎಂದಿದ್ದಾರೆ. ಜೊತೆಗೆ ಎರಡು ಕೋಟಿ ಹಣ ಕೊಡುವ ಆಮಿಷ ಒಡ್ಡಿದ್ದಾರಂತೆ.

 

 

ಇನ್ನು ಈ ಕೇಸ್ ದಾಖಲಾಗುತ್ತಿದ್ದಂತರ ಸೂರಜ್ ರೇವಣ್ಣ ಕೂಡ ಪ್ರತಿ ದೂರು ನಿಡೀದ್ದಾರೆ. ಸಂತ್ರಸ್ತನ ವಿರುದ್ಧವೇ ಪ್ರತಿ ದೂರು ನೀಡಿದ್ದು, ಐದು ಕೋಟಿಗೆ ಡಿಮ್ಯಾಂಡ್ ಇಟ್ಟಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಸಂತ್ರಸ್ತ ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿರುವುದಲ್ಲದೆ, ಕುಟುಂಬದ ಮರ್ಯಾದೆ ಹಾಳು ಮಾಡುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದಾನೆಂದು ಆರೋಪಿಸಿದ್ದಾರೆ.

 

 

ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸುತ್ತಿಲ್ಲ ಅಂತ ಸೂರಕ್ ಆಪ್ತ ಶಿವಕುನಾರ್ ಮೂಲಕ ಬೆದರಿಕೆ ಹಾಕಿದ್ದಾರೆಂದು ಆರೋಪಿಸಲಾಗಿದೆ. ನಾನು ಬೆಂಗಳೂರಿಗೆ ಹೋಗಿ ಮಾಧ್ಯಮದ ಮುಂದೆ ಹೋಗುತ್ತೇನೆ, ಸೂರಜ್ ರೇವಣ್ಣರ ಮರ್ಯಾದೆ ಹಾಳು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆಂದು ಪ್ರತಿ ದೂರಿನಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...