Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್, ಪ್ರಜ್ವಲ್ ಜೊತೆಗೆ ಈ ಬಾರಿ ಯಡಿಯೂರಪ್ಪ ವಿರುದ್ಧವೂ ಕಿಡಿಕಾರಿದ ನಟಿ ರಮ್ಯಾ..! ಏನಂದ್ರು..?

Facebook
Twitter
Telegram
WhatsApp

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ದರ್ಶನ್ ಅವರನ್ನು ಬಂಧಿಸಿದಾಗಲೇ ನಟಿ, ರಾಜಕಾರಣಿ ರಮ್ಯಾ ಟ್ವೀಟ್ ಮೂಲಕ ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸೆ ಕೊಟ್ಟಿದ್ದರು. ಇದೀಗ ಮತ್ತೆ ಟ್ವೀಟ್ ಮೂಲಕ ಈ ವಿಚಾರವಾಗಿ ಮಾತನಾಡಿದ್ದು, ಈ ಬಾರಿ ದರ್ಶನ್ ಹೆಸರಿನ ಜೊತೆಗೆ ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಹಾಗೂ ಯಡಿಯೂರಪ್ಪ ಅವರ ಹೆಸೆನ್ನು ತೆಗೆದುಕೊಂಡು ಆಕ್ರೋಶ ಹೊರ ಹಾಕಿದ್ದಾರೆ.

ರಮ್ಯಾ ಟ್ವೀಟ್ ನಲ್ಲಿ ಇರುವುದು ಏನು..?

‘ಕಾನೂನನ್ನು ಶ್ರೀಮಂತರು ಮತ್ತು ಪ್ರಭಾವಶಾಲಿಗಳು ಮುರಿದಾಗ ಮತ್ತು ಹಿಂಸಾತ್ಮಕ ಕ್ರಿಯೆಯಲ್ಲಿ ತೊಡಗಿಕೊಂಡಾಗ ಕರ್ನಾಟಕದ ಬಡವರು, ಮಹಿಳೆಯರು, ಮಕ್ಕಳು ತೊಂದರೆ ಅನುಭವಿಸುತ್ತಾರೆ. ಈ ಅಪರಾಧಗಳನ್ನು ಹೊರಗೆ ತಂದ ಪೊಲೀಸರು ಹಾಗೂ ಮಾಧ್ಯಮದವರಿಗೆ ಹ್ಯಾಟ್ಸ್ ಆಫ್. ತ್ವರಿತವಾಗಿ ವಿಚಾರಣೆ ನಡೆಸಿದಾಗ ಮತ್ತು ಪ್ರಕರಣದ ಬಗ್ಗೆ ಸೂಕ್ತ ತೀರ್ಮಾನವನ್ನು ತೆಗೆದುಕೊಂಡಾಗ ನ್ಯಾಯವನ್ನು ಒದಗಿಸಿದಂತೆ ಆಗುತ್ತದೆ. ನ್ಯಾಯವೂ ಮೇಲುಗೈ ಸಾಧಿಸದೆ ಇದ್ದರೆ ನಾವೂ ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡಲು ಸಾಧ್ಯ’ ಎಂದು ಬರೆದು ಯಡಿಯೂರಪ್ಪ, ಸೂರಜ್ ರೇವಣ್ಣ, ದರ್ಶನ್, ಪ್ರಜ್ವಲ್ ರೇವಣ್ಣ ಅವರಿಗೆ ಟ್ಯಾಗ್ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಮಾಡಿ ದರ್ಶನ್ ಅಂಡ್ ಗ್ಯಾಂಗ್ ಬಂಧಿಯಾಗಿದೆ. ಇಂದು ದರ್ಶನ್ ಕಸ್ಟಡಿ ಅವಧಿ‌ ಮುಗಿದಿದ್ದು, ಕೋರ್ಟ್ ತೀರ್ಪಿಗೆ ಎಲ್ಲರು ಕಾಯುತ್ತಿದ್ದಾರೆ. ಇನ್ನು ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಆರೋಪದ ಮೇಲೆ ಅರೆಸ್ಟ್ ಆಗಿದ್ದಾರೆ. ಯಡಿಯೂರಪ್ಪ ಅವರ ಮೇಲೆ ಫೋಕ್ಸೋ ಕಾಯ್ದೆ ಅಡಿ ಪ್ರಕತಣ ದಾಖಲಾಗಿದೆ. ಸೂರಜ್ ರೇವಣ್ಣ ಅವರದ್ದು ಅಸಹಜ ಲೈಂಗಿಕ ಕ್ರಿಯೆ ದೂರು ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.   ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ

ಈ ಬಾರಿಯ ಬಿಗ್ ಬಾಸ್ ಗೆ ಹೋಗ್ತಿದ್ದಾರೆ ಈ ಸ್ಟಾರ್ ಗಳು : ಕನ್ಫರ್ಮ್ ಸುದ್ದಿ ಇದು..!

ಬೆಂಗಳೂರು : ಬಿಗ್ ಬಾಸ್ ಕನ್ನಡ‌ ಸೀಸನ್ 11ಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಮನೆಯೊಳಗೆ ಹೋಗೋದು ಯಾರು ಎಂಬ ಕುತೂಹಲ ಇಡೀ ಕರ್ನಾಟಕದ ಜನತೆಗೆ ಇದೆ. ಇಂದು ಸಂಜೆ ಅದಕ್ಕೆ ಕೊಂಚ ತೆರೆ

ಅಜೀಂ ಪ್ರೇಮ್‍ಜಿ ಫೌಂಡೇಶನ್ ಕಾರ್ಯ ಪ್ರಪಂಚಕ್ಕೆ ಮಾದರಿ: ಕೆ.ರಾಜಶೇಖರ ಹಿಟ್ನಾಳ

  ಸುದ್ದಿಒನ್, ಕೊಪ್ಪಳ, ಸೆಪ್ಟೆಂಬರ್. 28 : ಅಜೀಂ ಪ್ರೇಮ್‍ಜಿ ಫೌಂಡೇಶನ ಮಾಡುತ್ತಿರುವ ಸೇವಾ ಕಾರ್ಯವು ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಲೋಕಸಭಾ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ ಹೇಳಿದರು. ಅವರು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಅಜೀಂ ಪ್ರೇಮ್‍ಜಿ

error: Content is protected !!