Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಂದು ಹೆಂಡತಿ ವಿಚಾರ.. ಇಂದು ಪ್ರೇಯಸಿ ವಿಚಾರ.. 2ನೇ ಬಾರಿಗೆ ಜೈಲು ಸೇರಿದ ನಟ ದರ್ಶನ್

Facebook
Twitter
Telegram
WhatsApp

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಇಂದು ಜೈಲು ಪಾಲಾಗಿದ್ದಾರೆ. ಹದಿಮೂರು ದಿನಗಳ ಕಾಲ ಅಂದರೆ ಜುಲೈ 4ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಮಹತ್ವದ ಆದೇಶ ಹೊರಡಿಸಿದೆ.

ದರ್ಶನ್ ಸೇರಿದಂತೆ ಅವರ ಗ್ಯಾಂಗ್ ನಲ್ಲಿದ್ದ ನಾಲ್ವರಿಗೆ ಇಂದು ಕಸ್ಟಡಿ ಅಂತ್ಯವಾಗಿತ್ತು. ಈ ಹಿನ್ನೆಲೆ‌ ಪೊಲೀಸರು ನ್ಯಾಯಾಧೀಶರ ಮುಂದೆ ನಾಲ್ವರನ್ನು ಹಾಜರುಪಡಿಸಿದ್ದರು. 24ನೇ ಎಸಿಎಂಎಂ ಕೋರ್ಟ್ ನಲ್ಲಿ ಹಾಜರುಪಡಿಸಿದ್ದರು. ದರ್ಶನ್, ವಿನಯ್, ಪ್ರದೂಶ್ ಮತ್ತು ಧನರಾಜ್ ರನ್ನು ತನಿಖಾಧಿಕಾರಿ ಚಂದನ್ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಸರ್ಕಾರದ ಪರ ಎಸ್ಪಿಪಿ ಪ್ರಸನ್ನ ಕುಮಾರ್ ಹಾಗೂ ಅವರ ತಂಡ ಹಾಜರಿತ್ತು. ಜೊತೆಗೆ ದರ್ಶನ್ ಹಾಗೂ ಇತರೆ ನಾಲ್ಕು ಆರೋಪಿಗಳ ಪರ ವಕೀಲರು ಕೂಡ ಹಾಜರಿದ್ದರು. ಬಳಿಕ ಕೋರ್ಟ್ ಜುಲೈ 4ರವರೆಗೂ ನಾಲ್ಕು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇನ್ನು ದರ್ಶನ್ ಜೈಲಿಗೆ ಹೋಗುತ್ತಿರುವುದು ಇದು ಎರಡನೇ ಸಲ. ಮೊದಲ ಬಾರಿಗೆ ದರ್ಶನ್ ತಮ್ಮ ಹೆಂಡತಿ ವಿಜಯಲಕ್ಷ್ಮೀಗೆ ಹೊಡೆದು ಜೈಲುಪಾಲಾಗಿದ್ದರು. ಇಂದು ಪವಿತ್ರಾ ಗೌಡ ವಿಚಾರಕ್ಕೆ ಜೈಲು ಪಾಲಾಗುತ್ತಿದ್ದಾರೆ. ಪರಪ್ಪನ ಅಗ್ರಹಾರದ ಕಡೆಗೆ ಹೊರಟಿದ್ದಾರೆ. ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾದ ಮೆಸೇಜ್ ಕಳುಹಿಸಿದ ಎಂಬ ಕಾರಣಕ್ಕೆ ದರ್ಶನ್ ಅಂಡ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಕ್ರೂರವಾಗಿ ಕೊಂದಿದ್ದಾರೆ. ಹೀಗಾಗಿ ಕಳೆದ ಹದಿನೈದು ದಿನದಿಂದ ಪೊಲೀಸರು ವಿಚಾರಣೆ ನಡೆಸಿ, ಸಾಕ್ಷಿಗಳನ್ನು ಸಂಗ್ರಹಿಸಿದ್ದಾರೆ. ಜುಲೈ 4 ರ ಬಳಿಕ ದರ್ಶನ್ ಭವಿಷ್ಯ ಏನಾಗಲಿದೆ ಎಂಬುದನ್ನು ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.   ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ

ಈ ಬಾರಿಯ ಬಿಗ್ ಬಾಸ್ ಗೆ ಹೋಗ್ತಿದ್ದಾರೆ ಈ ಸ್ಟಾರ್ ಗಳು : ಕನ್ಫರ್ಮ್ ಸುದ್ದಿ ಇದು..!

ಬೆಂಗಳೂರು : ಬಿಗ್ ಬಾಸ್ ಕನ್ನಡ‌ ಸೀಸನ್ 11ಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಮನೆಯೊಳಗೆ ಹೋಗೋದು ಯಾರು ಎಂಬ ಕುತೂಹಲ ಇಡೀ ಕರ್ನಾಟಕದ ಜನತೆಗೆ ಇದೆ. ಇಂದು ಸಂಜೆ ಅದಕ್ಕೆ ಕೊಂಚ ತೆರೆ

ಅಜೀಂ ಪ್ರೇಮ್‍ಜಿ ಫೌಂಡೇಶನ್ ಕಾರ್ಯ ಪ್ರಪಂಚಕ್ಕೆ ಮಾದರಿ: ಕೆ.ರಾಜಶೇಖರ ಹಿಟ್ನಾಳ

  ಸುದ್ದಿಒನ್, ಕೊಪ್ಪಳ, ಸೆಪ್ಟೆಂಬರ್. 28 : ಅಜೀಂ ಪ್ರೇಮ್‍ಜಿ ಫೌಂಡೇಶನ ಮಾಡುತ್ತಿರುವ ಸೇವಾ ಕಾರ್ಯವು ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಲೋಕಸಭಾ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ ಹೇಳಿದರು. ಅವರು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಅಜೀಂ ಪ್ರೇಮ್‍ಜಿ

error: Content is protected !!