Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಂಧನದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ: ಅಭಿಮಾನಿಗಳಿಗೆ ದರ್ಶನ್ ಹೇಳಿದ್ದೇನು..?

Facebook
Twitter
Telegram
WhatsApp

 

 

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಸುಲಭವಾಗಿ ಟ್ರ್ಯಾಕ್ ಆಗಿದೆ. ಕಳೆದ 12 ದಿನದಿಂದ ಪೊಲೀಸ್ ಕಸ್ಟಡಿಯಲ್ಲಿದ್ದರು. ಹೈಪ್ರೊಫೈಲ್ ಕೇಸ್ ಆಗಿದ್ದರಿಂದ ಸರ್ಕಾರ ಕೂಡ ಯಾವುದೇ ವಿಚಾರಗಳಿಗೂ ಗಮನ ಕೊಡದೆ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿತ್ತು. ಹೀಗಾಗಿ ಪೊಲೀಸರು ಕೂಡ ದರ್ಶನ್ ಅಂಡ್ ಗ್ಯಾಂಗ್ ಅನ್ನು ಎರಡು ಬಾರಿ ಕಸ್ಟಡಿಗೆ ತೆಗೆದುಕೊಂಡು ಎಲ್ಲಾ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದೆ. ಇಂದು ಕಸ್ಟಡಿ ಮುಗಿದ ಹಿನ್ನೆಲೆ ದರ್ಶನ್ ಸೇರಿದಂತೆ ನಾಲ್ವರನ್ನು ಕೋರ್ಟ್ ಮುಂದೆ ಹಾಜರುಪಡಿಸಿತ್ತು. ಕೋರ್ಟ್ ಹದಿಮೂರು ದಿನಗಳ ಕಾಲ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ. ಅವರ ಮೂರು ಜನ ಸ್ನೇಹಿತರು ಕೂಡ ಜೈಲು ಪಾಲಾಗಿದ್ದಾರೆ.

ಇನ್ನು ದರ್ಶನ್ ಅರೆಸ್ಟ್ ಆದಾಗಿನಿಂದ ಒಂದು ದಿನವೂ ಮಾತನಾಡಿರಲಿಲ್ಲ. ಆದರೆ ಇಂದು ಅಭಿಮಾನಿಗಳಿಗೆ ಧೈರ್ಯ ತುಂಬಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಗೆ ಹೋಗುವ ಮುನ್ನ ಕೈಬೀಸಿದ್ದು, ಪ್ಲೈನ್ ಕಿಸ್ ನೀಡಿದ್ದಾರೆ. ಬಳಿಕ ನನಗೇನು ಆಗುವುದಿಲ್ಲ ಎಂದಿದ್ದಾರೆ.

ಪೊಲೀಸ್ ಗಾಡಿಯಲ್ಲಿ ಕೂತು, ಅಭಿಮಾನಿಗಳತ್ತ ಕೈ ಬೀಸಿದ್ದಾರೆ. ಈ ವೇಳೆ ಮಾತನಾಡಿದ್ದು, ನನಗೆ ಏನು ಆಗುವುದಿಲ್ಲ ಹೆದರಬೇಡಿ ಎಂದು ಹೇಳಿದ್ದಾರೆ. ಈ ವಿಡಿಯೋ ಸದ್ಯ ಸೋಷಿಯಲ್ ಮಿಡೀಯಾದಲ್ಲಿ ವೈರಲ್ ಆಗಿದೆ. ಅಭಿಮಾನಿಗಳಿಗೂ ಕೊಂಚ ರಿಲ್ಯಾಕ್ಸ್ ಆಗಿದೆ.

ದರ್ಶನ್ ಪೊಲೀಸರ ಕಸ್ಟಡಿಗೆ ಹೋದಾಗಿನಿಂದ ಅಭಿಮಾನಿಗಳು ಆತಂಕದಲ್ಲಿದ್ದರು. ಪೊಲೀಸ್ ಠಾಣೆಯಲ್ಲಿ ಬೇರೆ ಏನು ಕಾಣದ ರೀತಿ ಶಾಮಿಯಾನ ಹಾಕಿದ್ದರು. ಕಸ್ಟಡಿಗೆ ತೆಗೆದುಕೊಳ್ಳುತ್ತಿದ್ದ ಕಾರಣ ಏನಾಗುತ್ತಿದೆ ಎಂಬುದನ್ನು ತಿಳಿಯಲಾಗದೆ ಅಭಿಮಾನಿಗಳು ಸಂಕಟ ಪಡುತ್ತಿದ್ದರು. ಇಂದು ಖುದ್ದು ದರ್ಶನ್, ನನಗೇನು ಆಗಲ್ಲ ಎಂದು ಹೇಳಿರುವುದು ಅಭಿಮಾನಿಗಳಿಗೆ ಸಮಾಧಾನ ತಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಜರಂಗದಳ ಸೇವಾ ಸಪ್ತಾಹ : ತರಳಬಾಳು ನಗರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುದ್ದಿಒನ್, ಚಿತ್ರದುರ್ಗ, ಜೂನ್. 30 : ಬಜರಂಗದಳ ಸೇವಾ ಸಪ್ತಾಹದ ಅಂಗವಾಗಿ ವಿಶ್ವಹಿಂದು ಪರಿಷತ್, ಬಜರಂಗದಳದ ವತಿಯಿಂದ ನಗರದ ಹೊರವಲಯದ ತಮಟಗಲ್ಲು ರಸ್ತೆಯಲ್ಲಿರುವ ತರಳಬಾಳು ನಗರದ ಕಡ್ಲೆಬಟ್ಟಿ ಬಳಿ ಭಾನುವಾರ ಉಚಿತ ಆರೋಗ್ಯ ತಪಾಸಣಾ

ಗಾಡಿಗಳಿಗೆ ದರ್ಶನ್ ಖೈದಿ ನಂಬರ್ : ಕೇಸ್ ಹಾಕುವ ಎಚ್ಚರಿಕೆ ನೀಡಿದ ಟ್ರಾಫಿಕ್ ಪೊಲೀಸರು..!

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಜೈಲಿನಲ್ಲಿದ್ದಾರೆ. ಅವರಿಗೆ ಖೈದಿ ನಂಬರ್ 6106 ನೀಡಲಾಗಿದೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಸಪೋರ್ಟ್ ಮಾಡುವುದು ನಿಮಗೆಲ್ಲಾ ಗೊತ್ತೇ ಇದೆ. ಇದೀಗ ಈ ನಂಬರ್

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ : ಲಿಂಗಾಯತರಿಗೆ ನೀಡಲು ಒತ್ತಾಯ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ಹುದ್ದೆಗಳ ಹೆಚ್ಚಳದ್ದೇ ಸುದ್ದಿಯಾಗಿದೆ. ಸಿಎಂ ಸ್ಥಾನ ಬದಲಾವಣೆಯ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನಡುವೆ ಅಂತ ವೈಮನಸ್ಸಾಗಲಿ, ಒಬ್ಬರಿಗೊಬ್ಬರು ವಿರೋಧ ಹೇಳಿಕೆ

error: Content is protected !!