Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆಯಲ್ಲಿ ಶಿಕ್ಷಕನ ಮನೆಗೆ ನುಗ್ಗಿ ಚಾಕು ತೋರಿಸಿ ದರೋಡೆ ಮಾಡಿದ ಕಳ್ಳರು..!

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ರಾತ್ರೋರಾತ್ರಿ ಮನೆಗೆ ನುಗ್ಗಿದ ಮೂವರು ಕಳ್ಳರು, ಮನೆಯಲ್ಲಿದ್ದ ದಂಪತಿಗೆ ಚಾಕು ತೋರಿಸಿ, ಬೆದರಿಕೆ ಹಾಕಿ, ಮಾರಣಾಂತಿಕ ಹಲ್ಲೆ ಮಾಡಿ, ಮನೆಯಲ್ಲಿದ್ದ ಒಡವೆ, ಹಣ ದೋಚಿರುವ ಘಟನೆ ಚಳ್ಳಕೆರೆ ನಗರದ ಹೊರವಲಯದಲ್ಲಿ ನಡೆದಿದೆ.

ಈರಣ್ಣ ಹಾಗೂ ರಾಧಾ ದಂಪತಿಯ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಈರಣ್ಣ ವೃತ್ತಿಯಲ್ಲಿ ಶಿಕ್ಷಕರಾಗಿದ್ದರು. ನಿರ್ಮಲ ಲಾಡ್ಜ್ ಸಮೀಪ ಪೂಜಾ ಡಾಬ್ ಎದರು ಇರುವ ಬೃಂದಾವನ ಮನೆ ಇವರದ್ದು. ಹಿಂಭಾಗಲಿನಿಂದ ನುಗ್ಗಿದ್ದ ಕಳ್ಳರು ಬೇಕಾದ್ದನ್ನೆಲ್ಲಾ ಬಾಚಿಕೊಂಡು ಪರಾರಿಯಾಗಿದ್ದಾರೆ. ಶನಿವಾರ ರಾತ್ರಿ 10.40 ರ ಸಮಯದಲ್ಲಿ ಈ ಘಟನೆ ನಡೆದಿದೆ.

ಮನೆಯ ಹಿಂಭಾಗದ ಹಿಂಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಬೆಡ್ ರೂಮನಲ್ಲಿ ಮಲಗಿದ್ದ ಇಬ್ಬರ ದಂಪತಿಗಳನ್ನ ಚಾಕು ತೋರಿಸಿ ದೊಣ್ಣೆಯಿಂದ ಹಲ್ಲೆ ಮಾಡಿ ಮೈ ಮೇಲೆ ಹಾಕಿಕೊಂಡಿದ್ದ ಒವಡವೆಗಳನ್ನು ಹಾಗೂ ಬೀರುವಿನಲ್ಲಿದ್ದ ಹಣವನ್ನು ದೋಚಿ ಪೊಲೀಸರಿಗೆ ತಿಳಿಸಿದರೆ ಪ್ರಾಣ ತೆಗೆಯುತ್ತಿವೆ ಎಂದು ಪ್ರಾಣ ಬೆದರಿಕೆ ಹಾಕಿ ಅಲ್ಲಿಂದ ಪರಾರಿಯಾಗಿದ್ದಾರೆ.

ಇನ್ನು ಅಕ್ಕ ಪಕ್ಕದ ಮನೆಯವರಿಗೆ ಕರೆ ಮಾಡಿದ ಶಿಕ್ಷಕರು ಅಕ್ಕ ಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆರ್ ಎಫ್ ದೇಸಾಯಿ ಹಾಗೂ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

 

ಇಂದು ಚಿತ್ರದುರ್ಗ ಜಿಲ್ಲಾ ಎಸ್ ಪಿ ಧರ್ಮೇಂದ್ರ ಕುಮಾರ್ ಮೀನಾ ಕಳ್ಳತನವಾದ ಮನೆಗೆ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಂಪತಿಗಳನ್ನು ಭೇಟಿ ಮಾಡಿ ಪ್ರಕರಣದ ಮಾಹಿತಿಯನ್ನು ಪಡೆದಿದ್ದಾರೆ. 4 ಪೊಲೀಸ್ ತಂಡಗಳನ್ನು ರಚನೆ ಮಾಡಿ ಕಳ್ಳರನ್ನು ಬಂಧಿಸುತ್ತೇವೆ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಚಲಪತಿ ನಿಧನ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 :ನಗರದ ತುರುವನೂರು ರಸ್ತೆ ನಿವಾಸಿ, ಶಿಕ್ಷಣ ಇಲಾಖೆ ನಿವೃತ್ತ ನೌಕರ ಚಲಪತಿ (66) ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ವಿಜಯಕರ್ನಾಟಕ ಚಿತ್ರದುರ್ಗ ಜಿಲ್ಲಾ ಪ್ರಸರಾಂಗ

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.   ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ

ಈ ಬಾರಿಯ ಬಿಗ್ ಬಾಸ್ ಗೆ ಹೋಗ್ತಿದ್ದಾರೆ ಈ ಸ್ಟಾರ್ ಗಳು : ಕನ್ಫರ್ಮ್ ಸುದ್ದಿ ಇದು..!

ಬೆಂಗಳೂರು : ಬಿಗ್ ಬಾಸ್ ಕನ್ನಡ‌ ಸೀಸನ್ 11ಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಮನೆಯೊಳಗೆ ಹೋಗೋದು ಯಾರು ಎಂಬ ಕುತೂಹಲ ಇಡೀ ಕರ್ನಾಟಕದ ಜನತೆಗೆ ಇದೆ. ಇಂದು ಸಂಜೆ ಅದಕ್ಕೆ ಕೊಂಚ ತೆರೆ

error: Content is protected !!