Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆ ಶಿವಕುಮಾರ್ ಧರಿಸಿರುವ ಶಾಲು 59 ಸಾವಿರ : ಬಿಜೆಪಿಯಿಂದ ವ್ಯಂಗ್ಯ..!

Facebook
Twitter
Telegram
WhatsApp

 

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಪೆಟ್ರೋಲ್-ಡಿಸೇಲ್ ದರ ಏರಿಕೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ತೈಲ ಬೆಲೆಯನ್ನು ಕಡಿಮೆ ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ಈಗಾಗಲೇ ಬೃಹತ್ ಪ್ರತಿಭಟನೆಯನ್ನು ಮಾಡಿದೆ. ಇದೀಗ ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ಮತ್ತೆ ಚಾಟಿ ಬೀಸಿದೆ. ಡಿಸಿಎಂ ಡಿಕೆ ಶಿವಕುಮಾರ್ ಧರಿಸಿರುವ ಶಾಲಿನ ಮೇಲೆ ಕಣ್ಣು ಹಾಕಿದೆ. ಶಾಲಿನ ಫೋಟೋ ಜೊತೆಗೆ ಅದರ ಬೆಲೆ ಎಷ್ಟು ಎಂಬುದನ್ನು ಹಾಕಿದ್ದಾರೆ.

ಬಿಜೆಪಿ ನಾಯಕರು ಸಾಕ್ಷಿ ಸಮೇತ ಹಾಕಿರುವ ಪ್ರಕಾರ ಡಿಸಿಎಂ ಡಿಕೆ ಶಿವಕುಮಾರ್ ಹಾಕಿರುವ ಶಾಲಿನ ಬೆಲೆ 59,500 ರೂಪಾಯಿ ಆಗಿದೆ. ಈ ಸಂಬಂಧ ಬಿಜೆಪಿ ಟ್ವೀಟ್ ಮಾಡಿರುವುದು ಹೀಗೆ, ‘ಕುರುಡು ಕಾಂಚಾಣ ಕುಣಿಯುತ್ತದೆ ಎಂಬುದಕ್ಕೆ ಡಿಸಿಎಂ @DKShivakumar ಅವರು ನಡೆಸುತ್ತಿರುವ ಅಂಧಾ ದರ್ಬಾರ್ ಸಾಕ್ಷಿ. ನಮ್ಮ ಕಾಸ್ಟ್ಲಿ ಕುಮಾರ್ ಅವರು ಧರಿಸಿರುವ ಶಾಲಿನ ಬೆಲೆ ಬರೋಬ್ಬರಿ ₹59,500!!! ಬೆಲೆಯೇರಿಕೆಯಿಂದ ಜನ ಒಂದ್ಹೊತ್ತಿನ ಊಟಕ್ಕೂ ತತ್ವಾರ ಅನುಭವಿಸುತ್ತಿದ್ದಾರೆ, ಆದರೆ ಜನಪ್ರತಿನಿಧಿಗಳು ಮಾತ್ರ ಜನರ ತೆರಿಗೆ ದುಡ್ಡಿನಲ್ಲಿ ಶೋಕಿ ಮಾಡುತ್ತಿರುವುದು ನಿಜಕ್ಕೂ ದುರಂತ ಎಂದು ಟ್ವೀಟ್ ಮಾಡಿದ್ದಾರೆ.

ರಾಜಕಾರಣದಲ್ಲಿ ವಿರೋಧ ಪಕ್ಷಗಳು ಸಣ್ಣ ಸಣ್ಣ ತಪ್ಪುಗಳನ್ನು ಹುಡುಕಿ, ಅದರ ಬಗ್ಗೆ ಮಾತನಾಡುವುದು ಅವರ ಕೆಲಸವಾಗಿದೆ. ಆದರೆ ರಾಜ್ಯದಲ್ಲಿ ಜನ ಎಷ್ಡೋ ಸಮಸ್ಯೆಗಳಿಂದ ನರಳುತ್ತಾರೆ. ಯಾವುದೇ ರಾಜಕೀಯ ಪಕ್ಷ ಆಡಳಿತಕ್ಕೆ ಬಂದರೂ ಅಭಿವೃದ್ದಿ, ಜನರ ಸಮಸ್ಯೆ ಬಗೆ ಹರಿಯುವುದು ಬಹಳ ಕಷ್ಟ. ಬೆಲೆ ಏರಿಕೆಯಾಗಲಿ, ಪ್ರವಾಹ ಬಂದು ಬೆಳೆ ನಷ್ಡವಾಗಲಿ ನಾವೇ ಅನುಭವಿಸಬೇಕು. ರಾಜಕಾರಣಿಗಳು ಅವರ ಅದ್ದೂರಿ ಜೀವನ ನಡೆಸುವುದೇನು ಕಡಿಮೆ ಆಗಲ್ಲ ಅನ್ನೋದು ಮಧ್ಯಮ ವರ್ಗದ ಜನರ ಬೇಸರದ ನುಡಿಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಎಂ ಬದಲಾವಣೆ ವಿಚಾರ : ಸ್ವಾಮೀಜಿಗಳು ಹೇಳಿದಾಕ್ಷಣ ಬದಲಾಗದು ಎಂದ ವಚನಾನಂದ ಶ್ರೀ

  ಚಿತ್ರದುರ್ಗ: ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟು ಕೊಡಿ ಮಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ವಚನಾನಂದ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಉತ್ತಮ ಸಹಕಾರವಿದೆ.

ದೇಶ ಪ್ರಗತಿ ಹೊಂದಿರುವುದು ಕಾಯಕ ಜೀವಿಗಳಿಂದಲೇ ಹೊರೆತು ರಾಜಕಾರಣಿಗಳಿಂದಲ್ಲ : ಬಸವಪ್ರಭು ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಜೂನ್.30 : ನಮ್ಮ ದೇಶ ಪ್ರಗತಿಯನ್ನು ಹೊಂದಿರುವುದು ಕಾಯಕ ಜೀವಿಗಳಿಂದಲೇ ಹೊರೆತು ರಾಜಕಾರಣಿಗಳಿಂದ ಅಲ್ಲ ಎಂದು

ಚಿತ್ರದುರ್ಗದಲ್ಲಿ ಜಿಲ್ಲಾ ಮಟ್ಟದ ಗಾಣಿಗ ಸಮುದಾಯದ ವಧು-ವರರ ಸಮಾವೇಶ | ಕಾಯಕವನ್ನು ನಂಬಿದವರು ಗಾಣಿಗ ಸಮಾಜದವರು : ಡಾ. ಜಯಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಜೂನ್.30 : ವ್ಯಕ್ತಿಯನ್ನು ಆತನ ವ್ಯಕಿತ್ವದಿಂದ ಗುರುತಿಸಬೇಕೇ ವಿನಹಃ ಜಾತಿ, ಹಣದಿಂದ ಅಲ್ಲ, ಪ್ರತಿಭೆಗಳು ನಮ್ಮ

error: Content is protected !!