Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಧಾನಪರಿಷತ್ ಸದಸ್ಯರ ಪ್ರಮಾಣ ವಚನ : ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದ ಬಿಜೆಪಿ, ಜೆಡಿಎಸ್ ಸದಸ್ಯರು

---Advertisement---

 

ಬೆಂಗಳೂರು: ಇಂದು ಕರ್ನಾಟಕ ವಿಧಾನ ಪರಿಷತ್ ಗೆ ನೂತನವಾಗಿ ಆಯ್ಕೆಯಾದ ಸದಸ್ಯರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಈ ಕಾರ್ಯಕ್ರಮ ನಡೆದಿದೆ. ಬಸವರಾಜ್ ಹೊರಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

ಬಿಜೆಪಿಯ ವಿಧಾನಪರಿಷತ್ ಸದಸ್ಯ ಸಿಟಿ ರವಿ ಕೇಸರಿ ಶಾಲು ಧರಿಸಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ಬಿಜೆಪಿ ನಾಯಕರು ಶಿಳ್ಳೆ ಹೊಡೆದು, ಚಪ್ಪಾಳೆ ನೀಡಿ ಅಭಿನಂದನೆಯನ್ನು ತಿಳಿಸಿದರು. ಪ್ರಮಾಣ ವಚನ ಸ್ವೀಕಾರದ ಬಳಿಕ ಸಿಟಿ ರವಿ ನೇರವಾಗಿ ಬಂದು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದಿದ್ದಾರೆ. ನಮಸ್ಕಾರ ಮಾಡಿ, ಆಶೀರ್ವಾದ ಪಡೆದಿದ್ದಾರೆ. ಸಿದ್ದರಾಮಯ್ಯ ಅವರು ಕೂಡ ಸಿಟಿ ರವಿ ಅವರ ಕಿವಿ ಹಿಡಿದು, ಆಶೀರ್ವಾದ ಮಾಡಿದ್ದಾರೆ.

ಬಳಿಕ ಭಾರತ ಮಾತೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ ಎನ್. ರವಿಕುಮಾರ್ ಅವರು ಕೂಡ ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ ಜೆಡಿಎಸ್ ಸದಸ್ಯ ಬೋಜೇಗೌಡ ಸಿದ್ದರಾಮಯ್ಯ ಅವರ ಕಾಲು ಮುಟ್ಟಿ ನಮಸ್ಕಾರ ಮಾಡಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಅವರು ಕೂಡ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿ ತಂದೆಯವರ ಆಶೀರ್ವಾದ ಪಡೆದಿದ್ದಾರೆ. ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ 17 ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment