Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಮುನ್ನೆಲೆಗೆ ಬಂತು ಬೆಳಗಾವಿ – ಧಾರವಾಡ ನೇರ ರೈಲು : ಬಿಜೆಪಿಯ ಇಬ್ಬರು ಸಂಸದರು ಯಶಸ್ಸು ಮಾಡ್ತಾರಾ..?

Facebook
Twitter
Telegram
WhatsApp

ಧಾರವಾಡ: ಕೆಲವೊಂದು ಯೋಜನೆಗಳೇ ಹಾಗೆ. ಘೋಷಣೆಯಾದ ಮೇಲೆ ಜಾರಿಯಾಗೋದೆ ಕಷ್ಟ. ನಾಮಕಾವಸ್ಥೆಗೆ ಘೋಷಣೆಯಾಗಿ ಹಾಗೇ ಉಳಿದು ಬಿಡುತ್ತವೆ. ಅದೇ ಹಾದಿಯಲ್ಲಿರುವುದು ಧಾರವಾಡ-ಬೆಳಗಾವಿ ನೇರ ರೈ ಯೋಜನೆ. ಇದೀಗ ಮತ್ತೆ ಅಸ ಯೋಜನೆ ಮುನ್ನೆಲೆಗೆ ಬಂದಿದೆ. ಅದಕ್ಕೆ‌ ಕಾರಣ ಲೋಕಸಭಾ ಚುನಾವಣೆಯಲ್ಲಿ ಎರಡು ಕಡೆ ಬಿಜೆಪಿ ಬಂದಿರುವುದು.

ಧಾರವಾಡದಲ್ಲಿ ಈ ಬಾರಿಯೂ ಪ್ರಹ್ಲಾದ್ ಜೋಶಿಯೇ ಗೆಲುವು ಕಂಡಿದ್ದಾರೆ. ಸಂಸತ್ ಗೆ ಆಯ್ಕೆಯಾಗಿದ್ದಾರೆ. ಇನ್ನು ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಗೆದ್ದಿದ್ದಾರೆ. ಇಬ್ಬರು ಸಂಸದರಾಗಿರುವ ಕಾರಣ ಈ ಯೋಜನೆಗೆ ಇನ್ನಾದರೂ ಚಾಲನೆ ಸಿಗುತ್ತಾ ಎಂಬುದನ್ನು ಜನ ಎದುರು ನೋಡುತ್ತಿದ್ದಾರೆ.

ಧಾರವಾಡ ಬೆಳಗಾವಿ ರೈಲು ಯೋಜನೆಯ ಕೂಗು ಹಲವಾರು ವರ್ಷಗಳಿಂದ ಕೇಳಿ ಬರುತ್ತಲೇ ಇದೆ. ಇದಕ್ಕಾಗಿ ಈಗಾಗಲೇ ಯೋಜನೆ ರೂಪಿಸಿ, ಅದು ಜಾರಿಯಾಗುವ ಹಂತಕ್ಕೂ ಬಂದಿತ್ತು. ಆದರೆ ಅನೇಕ ಕಾರಣಗಳಿಂದ ಅದು ಮುಂದುವರೆಯುತ್ತಲೇ ಇಲ್ಲ. ಧಾರವಾಡದಿಂದ ಬೆಳಗಾವಿಗೆ ಈಗಿರುವ ರೈಲಿನ ಮೂಲಕ ಹೋದರೆ ಬರೋಬ್ಬರಿ ಮೂರು ಗಂಟೆ ಬೇಕು. ಏಕೆಂದರೆ ಧಾರವಾಡದಿಂದ ಹೊರಡೋ ರೈಲು ಅಳ್ನಾವರ್, ಲೋಂಡಾ, ಖಾನಾಪುರ ಮೂಲಕ ಬೆಳಗಾವಿ ಮುಟ್ಟಬೇಕಿದೆ. ಆದರೆ ಈ ಮಾರ್ಗದ ಬದಲಿಗೆ ನೇರವಾಗಿ ಧಾರವಾಡ-ಬೆಳಗಾವಿಗೆ ರೈಲು ಮಾರ್ಗ ನಿರ್ಮಾಣ ಮಾಡಲು ಅನೇಕ ವರ್ಷಗಳಿಂದ ಒತ್ತಾಯ ಕೇಳಿ ಬಂದಿತ್ತು. ಬೆಳಗಾವಿ ಸಂಸದ ಸುರೇಶ ಅಂಗಡಿ ರೈಲ್ವೆ ಖಾತೆಯ ರಾಜ್ಯ ಸಚಿವರಾದ ಬಳಿಕ ಈ ಯೋಜನೆಗೆ ಗ್ರೀನ್ ಸಿಗ್ನಲ್ ಸಿಕ್ಕಿತ್ತು. ಒಂದು ವೇಳೆ ಈ ಯೋಜನೆ ಪೂರ್ಣಗೊಂಡರೆ, ಧಾರವಾಡದಿಂದ ಬೆಳಗಾವಿಗೆ ಅರ್ಧ ಗಂಟೆಯಲ್ಲಿಯೇ ತಲುಪಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

ದರ್ಶನ್ ಜಾಮೀನಿಗಾಗಿ ವಕೀಲರು ಮಂಡಿಸಿದ ವಾದವೇನು..? ಇಲ್ಲಿದೆ ಪಾಯಿಂಟ್ ಪಾಯಿಂಟ್ ಹೈಲೇಟ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿ ಬಹಳ ದಿನಗಳೇ ಕಳೆದಿವೆ. ಆದರೆ ಚಾರ್ಜ್ ಶೀಟ್ ಸಂಪೂರ್ಣವಾಗಿ ಸ್ಟಡಿ ಮಾಡುವ ಕಾರಣಕ್ಕೆ ಆಗಾಗ ದರ್ಶನ್

ದರ್ಶನ್ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ..!

ಬೆಂಗಳೂರು: ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿನ್ನೆಯಷ್ಟೇ ಬಳ್ಳಾರಿ ಜೈಲಿಗೆ ಭೇಟಿ ನೀಡಿ, ಧೈರ್ಯ ತುಂಬಿ ಹೋಗಿದ್ದರು. ಇಂದು ಜಾಮೀನು ಸಿಗುವ ಭರವಸೆಯನ್ನು ವ್ಯಕ್ತಪಡಿಸಿದ್ದರು. ಆದರೆ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್

error: Content is protected !!