Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಸವಣ್ಣನವರ ಹೆಸರು ಸೂರ್ಯ-ಚಂದ್ರ ಇರೋವರಿಗೆ ಅಜರಾಮರವಾಗಿರುತ್ತದೆ : ಶಾಸಕ‌ ಟಿ.ರಘುಮೂರ್ತಿ

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, (ನ.15): ಬಸವಣ್ಣನವರ ಕಾಯಕ‌ ಮತ್ತು ದಾಸೋಹದ  ತತ್ವಗಳನ್ನು ಈಗಿನ‌ ಯುವ ಪೀಳಿಗೆಯು ರೂಡಿಸಿಕೊಳ್ಳಬೇಕು ಎಂದು ವಿಜಯಪುರ ವನಶ್ರೀ ಸಂಸ್ಥಾನ ಮಠದ ಬಸವಕುಮಾರ್ ಸ್ವಾಮಿಗಳು ಹೇಳಿದರು.

ನಗರದ ವೀರಶೈವ ಕಲ್ಯಾಣ ಮಂಟಪ ಹಿಂಬದಿಯಲ್ಲಿ ನಿರ್ಮಾಣವಾಗಿರುವ ಶ್ರೀಬಸವೇಶ್ವರ ಕಲ್ಯಾಣ ಮಂಟಪವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಜಗತ್ತಿನಲ್ಲಿ ಹುಟ್ಟಿರುವ ಪ್ರತಿಯೊಬ್ಬ  ಮನುಷ್ಯನಿಗೂ ಒಂದು ಚರಿತ್ರೆಯಿದೆ. ಆ ಉತ್ತಮ ಚರಿತ್ರೆ ಚಳ್ಳಕೆರೆ ವೀರ ಶೈವ ಸಮಾಜಕ್ಕೆ ಇದೆ ಎಂದು ಹೇಳಿದರು.
ಎಲ್ಲಾ ಸಮಾಜದವರಿಗೂ ಸಾರ್ವಜನಿಕರಿಗೆ ಸೇವೆ ನೀಡುವಂತ ವೀರಶೈವ ಕಲ್ಯಾಣ ಮಂಟಪವನ್ನು  ಸಮಾಜದವರು ನಿರ್ಮಾಣ ಮಾಡಿ ಈಗ ಬಸವೇಶ್ಚರ ಕಲ್ಯಾಣ ಮಂಟಪವನ್ನು ನಿರ್ಮಾಣ ಮಾಡಿದ್ದಾರೆ ಎಂದು ಹೇಳಿದರು.

ವೀರ ಶೈವ ಸಮಾಜದ ಪೂರ್ವಜರು ದೂರದೃಷ್ಟಿಯನ್ನು ಇಟ್ಟುಕೊಂಡು ಚಳ್ಳಕೆರೆಯಲ್ಲಿ ವೀರಶೈವ ಕಲ್ಯಾಣ ಮಂಟಪವನ್ನು ಸ್ಥಾಪನೆ ಮಾಡಿದರು. ಅಂತಹ ಮಹಾನೀಯರನ್ನು ನೆನಯಬೇಕು ಎಂದರು.

ಶಾಸಕ‌ ಟಿ.ರಘುಮೂರ್ತಿ ಮಾತನಾಡಿ 12 ನೇ ಶತಮಾನದಲ್ಲಿ ಮನುಕುಲಕ್ಕೆ ಸೇವೆ ಸಲ್ಲಿಸಿದ ಬಸವಣ್ಣನವರ ಹೆಸರು ಸೂರ್ಯ-ಚಂದ್ರ ಇರೋವರಿಗೆ ಅಜರಾಮರವಾಗಿರುತ್ತದೆ ಎಂದು ಹೇಳಿದ ಅವರು ಇಂದು ಶ್ರೀಬಸವೇಶ್ವರ ಕಲ್ಯಾಣ ಮಂಟಪ ಲೋಕಾರ್ಪಣೆಯಾಗಿರುವುದು  ಎಲ್ಲ ಸಮುದಾಯದವರಿಗೂ ಸಹಕಾರಿಯಾಗಲಿದೆ ಎಂದು ಹೇಳಿದರು.

ಈ ವೇಳೆ ನಗರಸಭೆ ಅಧ್ಯಕ್ಷೆ ಜಯಲಕ್ಷ್ಮೀ, ಉಪಾಧ್ಯಕ್ಷೆ ಜೈತುನ್ಬಿ,  ಅಧ್ಯಕ್ಷ ರಮೇಶ್, ಸದಸ್ಯ ಕೆ.ಸಿ.ನಾಗರಾಜ, ಕೆ.ಎಂ. ಜಗದೀಶ್, ಗಂಗಣ್ಣ, ಪ್ರಮೋದ್, ಸೈಟ್ ಬಾಬಣ್ಣ, ರವಿಕುಮಾರ್, ಮಾತೃಶ್ರೀ ಮಂಜುನಾಥ ಸೇರಿದಂತೆ ಸಮುದಾಯದವರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!