Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

T20 ವಿಶ್ವಕಪ್-2021: ಐಸಿಸಿ ವಿರುದ್ಧ ಶೋಯೆಬ್ ಅಖ್ತರ್ ಅಸಮಾಧಾನ

Facebook
Twitter
Telegram
WhatsApp

ಸುದ್ದಿಒನ್ ಸ್ಪೋರ್ಟ್ಸ್ ಡೆಸ್ಕ್ : T20 ವಿಶ್ವಕಪ್-2021 (ನವೆಂಬರ್ 14) ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ ಐತಿಹಾಸಿಕ ಗೆಲುವು ಸಾಧಿಸಿದೆ. ಈ ಮೂಲಕ ಮೊದಲ ಬಾರಿಗೆ ಪ್ರಶಸ್ತಿಗೆ ಮುತ್ತಿಕ್ಕಿದೆ. ಸ್ಟಾರ್ ಓಪನರ್ ಡೇವಿಡ್ ವಾರ್ನರ್ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಫೈನಲ್‌ನಲ್ಲಷ್ಟೇ ಅಲ್ಲದೆ ಟೂರ್ನಿಯುದ್ದಕ್ಕೂ ವಾರ್ನರ್‌ ಉತ್ತಮ ಆಟ ಪ್ರದರ್ಶಿಸಿದರು.

ಐಸಿಸಿ ಡೇವಿಡ್ ವಾರ್ನರ್ ಅವರನ್ನು ಸರಣಿ ಶ್ರೇಷ್ಠ  ಆಟಗಾರ ಎಂದು ಘೋಷಿಸಿದೆ . ಆದರೆ, ಡೇವಿಡ್ ವಾರ್ನರ್ ಅವರನ್ನು ಟೂರ್ನಮೆಂಟ್ ಆಫ್ ದಿ ಪ್ಲೇಯರ್ ಆಗಿ ಆಯ್ಕೆ ಮಾಡಿರುವ ಬಗ್ಗೆ ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಅಖ್ತರ್, “ಇದು ಸರಿಯಾದ ನಿರ್ಧಾರವಲ್ಲ. ಬಾಬರ್ ಅಜಮ್ ಗೆ  ಪ್ಲೇಯರ್ ಆಫ್ ದಿ ಟೂರ್ನಮೆಂಟ್ ನೀಡುತ್ತಾರೆಂದು ಎದುರು ನೋಡುತ್ತಿದ್ದೆ.  ಖಂಡಿತವಾಗಿಯೂ ಅನ್ಯಾಯವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಏಕೆಂದರೆ, ಈ ಟೂರ್ನಿಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಕೂಡ ಉತ್ತಮ ಆಟವಾಡಿದ್ದಾರೆ.
ಈ ಬಾರಿಯ ವಿಶ್ವಕಪ್‌ನಲ್ಲಿ ಆರು ಪಂದ್ಯಗಳಲ್ಲಿ 303 ರನ್ ಗಳಿಸಿರುವ ಬಾಬರ್ ಅಜಮ್ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಮತ್ತೊಂದೆಡೆ, ವಾರ್ನರ್ ಏಳು ಇನ್ನಿಂಗ್ಸ್‌ಗಳಲ್ಲಿ ಕೇವಲ 289 ರನ್ ಗಳಿಸಿದರು. ಅತಿ ಹೆಚ್ಚು ರನ್ ಗಳಿಸಿದ ಬಾಬರ್ ಗೆ ಪ್ರಶಸ್ತಿ ನೀಡದ ಐಸಿಸಿ ವಿರುದ್ಧ ಅಖ್ತರ್ ವಾಗ್ದಾಳಿ ನಡೆಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!