Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಅಭಿಮಾನಿಗಳಲ್ಲಿ ವಿಜಯಲಕ್ಷ್ಮೀ ಮನವಿ : ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಹದಿನೇಳು ಮಂದಿ ಜೈಲು ಪಾಲಾಗಿದ್ದಾರೆ. ಪವಿತ್ರಾ ಗೌಡ ಎ1 ಆರೋಪಿಯಾಗಿದ್ದರೆ ದರ್ಶನ್ ಎ2 ಆರೋಪಿಯಾಗಿದ್ದಾರೆ. ಗಂಡನನ್ನು ಬಿಡಿಸಲು ವಿಜಯಲಕ್ಷ್ಮೀ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗಾಗಿ ಪೋಸ್ಟ್ ಒಂದನ್ನು ಹಾಕಿದ್ದಾರೆ.

ವಿಜಯಲಕ್ಷ್ಮೀ ದರ್ಶನ್ ಮಾಡಿರುವ ಪೋಸ್ಟ್ ಹೀಗಿದೆ:

‘ಪ್ರೀತಿಯ ಸೆಲೆಬ್ರೆಟಿಗಳೇ ದರ್ಶನ್ ಅವರಿಗೆ ನೀವೂ ಎಂದರೆ ಅಪಾರವಾದ ಪ್ರೀತಿ. ನೀವೂ ಅವರನ್ನು ಪ್ರೀತಿಸಿದಷ್ಟೇ ಅವರು ನಿಮ್ಮನ್ನು ತಮ್ಮ ಹೃದಯದಲ್ಲಿಯೇ ಇಟ್ಟುಕೊಂಡಿದ್ದಾರೆ. ಅದು ನಿಮಗೂ ಗೊತ್ತು. ಇದೊಂದು ಪರೀಕ್ಷೆಯ ಸಮಯವಾಗಿದೆ. ನನಗೆ, ನಿಮಗೆ, ನಮ್ಮೆಲ್ಲರಿಗೂ. ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೇನೆ. ತಾಳ್ಮೆಯಿಂದ ಇರೋಣಾ. ನಿಮ್ಮ ಆತಂಕವನ್ನು ನಾನು ದರ್ಶನ್ ಅವರಿಗೆ ತಿಳಿಸಿದ್ದೇನೆ. ಅವರು ನಿಮ್ಮಗಳ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಾರೆ.

ನಮಗೆ ನಮ್ಮ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ಕೂಡ ಇದೆ. ಇಂತಹ ಕಷ್ಟದ ಸಮಯದಲ್ಲಿ, ದರ್ಶನ್ ಅವರ ಅನುಪಸ್ಥಿತಿಯನ್ನು ದುರುಪಯೋಗ ಪಡಿಸಿಕೊಂಡು, ಕೇಡು ಮಾಡುವವರನ್ನು ತಾಯಿ ಚಾಮುಂಡೇಶ್ವರಿಯೇ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮರಳಿ ಬರಯತ್ತದೆ. ಸತ್ಯ ಮೇವ ಜಯತೇ’ ಎಂದು ಪೋಸ್ಟ್ ಹಾಕಿದ್ದಾರೆ. ಬೆಟ್ಟದ ಮೇಲೆ ಡಿ ಬಾಸ್ ಎಂದು ಬರೆದಿರುವ ಬಾವುಟ ಹಾರಾಡುತ್ತಿದೆ. ಕೆಳಗಿನಿಂದ ಅಭಿಮಾನಿಗಳು ಬೆಟ್ಟದತ್ತ ಹತ್ತುತ್ತಿದ್ದಾರೆ. ದರ್ಶನ್ ಕೈ ಮಾತ್ರ ಚಿತ್ರದಲ್ಲಿ ಕಾಣಿಸುತ್ತಾ ಇದ್ದು, ಕೈ ಹಿಡಿದು ಕರೆದುಕೊಂಡು ಹೋಗುವ ರೀತಿ ಚಿತ್ರವಿದೆ. ಈ ಫೋಟೋ ಹಾಕಿ, ಅಭಿಮಾನಿಗಳಿಗೆ ವಿಜಯಲಕ್ಷ್ಮೀ ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿ : ಡಾ. ಬಸವಕುಮಾರ ಸ್ವಾಮೀಜಿ

ಸುದ್ದಿಒನ್, ಚಿತ್ರದುರ್ಗ, ಜು.01 : ವೈದ್ಯಕೀಯ ಪದವಿಯನ್ನು ಪೂರೈಸಲು ಜೀವನದ ಅರ್ಧ ಹಾದಿಯನ್ನು ಸವೆಸಬೇಕಾಗುತ್ತದೆ. ಹಾಗಾಗಿ ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಡಾ. ಬಸವಕುಮಾರ ಸ್ವಾಮಿಗಳು ಹೇಳಿದರು. ನಗರದ ಬಸವೇಶ್ವರ

ಪರಿಸರ ನಾಶವಾದರೆ ಮನುಕುಲಕ್ಕೆ ಆಪತ್ತು : ಮಂಜುನಾಥ್ ಭಾಗವತ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಜು. 01 : ಪರಿಸರದ ಬಗ್ಗೆ ಎಲ್ಲರೂ ಕಾಳಜಿಯನ್ನು ವಹಿಸಬೇಕಿದೆ. ಪರಿಸರ ನಾಶವಾದರೆ ಮನುಕುಲಕ್ಕೆ ಆಪತ್ತು

ಪ್ರಜ್ವಲ್ ಕೇಸಲ್ಲಿ ಸದ್ದು ಮಾಡಿದ್ದ ವಕೀಲ ದೇವರಾಜೇಗೌಡಗೆ ಜಾಮೀನು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ಫೋಟೋ, ವಿಡಿಯೋಗಳು ಲೀಕ್ ವಿಷಯದಲ್ಲಿ ಸುದ್ದಿಯಲ್ಲಿದ್ದ ದೇವರಾಜೇಗೌಡ ಅವರಿಗೆ ಇದೀಗ ರಿಲೀಫ್ ಸಿಕ್ಕಿದೆ. ಕೋರ್ಟ್ ನಿಂದ ಜಾಮೀನು ಮಂಜೂರು ಆಗಿದೆ. ವಕೀಲ ದೇವರಾಜೇಗೌಡ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠದಿಂದ

error: Content is protected !!