Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಖಾನಾಹೊಸಹಳ್ಳಿ ಬಳಿ ಭೀಕರ ರಸ್ತೆ ಅಪಘಾತ : ಓರ್ವ ಸಾವು 10 ಜನರಿಗೆ ಗಂಭೀರ ಗಾಯ

Facebook
Twitter
Telegram
WhatsApp

ಸುದ್ದಿಒನ್, ವಿಜಯನಗರ, (ಜೂ.27) : ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲರ್ಸ್‌‌ ವಾಹನ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 10 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿ ಬಳಿಯ ಹುಲಿಕೆರೆ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಇಂದು (ಗುರುವಾರ) ಬೆಳಗಿನ ಜಾವ ನಡೆದಿದೆ.

ಮೃತರನ್ನು ದೊಡ್ಡಬಳ್ಳಾಪುರ ತಾಲೂಕಿನ ರಾಮಕೃಷ್ಣಪ್ಪ (62 ವರ್ಷ) ಎಂದು ಗುರುತಿಸಲಾಗಿದ್ದು, 10 ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲುಬುರ್ಗಿಯಲ್ಲಿ ನಿಶ್ಚಿತಾರ್ಥ ಮುಗಿಸಿಕೊಂಡು, ಆರೂಢಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಟಿಟಿಯೊಳಗೆ ಇಬ್ಬರು ಮಕ್ಕಳು ಸೇರಿದಂತೆ 16 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಡಿಕ್ಕಿ ರಭಸಕ್ಕೆ ಟಿಟಿ ನಜ್ಜು- ಗುಜ್ಜಾಗಿದ್ದು, ಇಬ್ಬರು ಸಿಲುಕಿಕೊಂಡಿದ್ದರು, ಅವರನ್ನು ಹೊರ ತೆಗೆಯಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ.

ಗಂಗಾವತಿಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಕೆಟ್ಟು ನಿಂತಿದ್ದು ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಟಿಟಿ ಡಿಕ್ಕಿ ಹೊಡೆದಿದೆ. ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು : ಸಿಎಂ ಸಿದ್ದರಾಮಯ್ಯ ಕಿವಿ ಮಾತು

  ಬೆಂಗಳೂರು: ಸಿಗರೇಟ್ ಸೇದುವುದು ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ಗೊತ್ತು. ಆ ಪ್ಯಾಕ್ ಮೇಲೆ ಕೂಡ ಬರೆದಿರುತ್ತೆ. ಆದರೆ ಸಾಕಷ್ಟು ಜನ ಇಂದು ಸಿಗರೇಟಿಗೆ ದಾಸರಾಗಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು

ಗೋಲ್ ಮಾಲ್ ಬಗ್ಗೆ ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ : ವಿನಯ್ ಕುಲಕರ್ಣಿ

  ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ವಾಲ್ಮೀಕಿ ನಿಗಮ, ಮೈಸೂರು ಮೂಡಾದ ಹಗರಣಗಳು ಸಾಕಷ್ಟು ಸದ್ದು ಮಾಡುತ್ತಿರುವಾಗಲೇ ರಾಜ್ಯದಲ್ಲಿ ಮತ್ತಷ್ಟು ಹಗರಣಗಳ ಬಗ್ಗೆ ಶಾಸಕ ವಿನಯ್ ಕುಲಕರ್ಣಿ ಮಾತನಾಡಿದ್ದಾರೆ. ಪಕ್ಷದ ಮುಖಂಡರಿಗೂ ಈ ಬಗ್ಗೆ ಪತ್ರ

ಮೂಡಾ ಗೋಲ್ಮಾಲ್ ವಿಚಾರ : ಸಿಎಂ ₹4,000 ಕೋಟಿ ಗುಳುಂ : ಆರ್ ಅಶೋಕ್ ವಾಗ್ದಾಳಿ..!

  ಬೆಂಗಳೂರು: ಮೂಡಾ ಗೋಲ್ಮಾಲ್ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್, ಗೋಲ್ಮಾಲ್ ಸಿಎಂ ₹4,000 ಕೋಟಿ ಗುಳುಂ ಎಂದು ಆಕ್ರೋಶ ಹೊರ ಹಾಕಿದ್ದಾರೆ.   ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ

error: Content is protected !!