Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾವೇರಿ ರಸ್ತೆ ಅಪಘಾತ | 14 ಜನರಲ್ಲಿ ಜನರಲ್ಲಿ ಬದುಕಿದ್ದು ಒಂದೇ ಹುಡುಗಿ..!

Facebook
Twitter
Telegram
WhatsApp

ಹಾವೇರಿ: ನಿಂತಿದ್ದ ಲಾರಿಗೆ ಭೀಕರವಾಗಿ ಟಿಟಿ ವಾಹನ ಗುದ್ದಿದ ಪರಿಣಾಮ ವಾಹನದಲ್ಲಿದ್ದ ಹನ್ನೊಂದು ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನೆಲ್ಲಾ ಆಸ್ಪತ್ರೆಗೆ ದಾಖಲಿಸಿತ್ತಾದರೂ ಮತ್ತೆ ಇಬ್ಬರು ಮೃತ ಪಟ್ಟಿದ್ದಾರೆ. ಹದಿನಾಲ್ಕು ಜನರಲ್ಲಿ ಬದುಕುಳಿದದ್ದು ಒಂದೇ ಹುಡುಗಿ. ಟಿಟಿ ಮಾಲೀಕರ ಕುಟುಂಬದಲ್ಲೂ ನಾಲ್ಕು ಜನ ಸಾವನ್ನಪ್ಪಿದ್ದಾರೆ.

ಇನ್ನೂ ನಾಗೇಶ್ ತಾಯಿ ವಿಶಾಲಾಕ್ಷಿ ಮನೆಯ ಎಲ್ಲರೂ ಮೃತ ಪಟ್ಟಿದ್ದಾರೆ. ವಿಶಾಲಾಕ್ಷೀ ಆಶಾ ಕಾರ್ಯಕರ್ತೆಯಾಗಿದ್ದರು. ಈ ಅಪಘಾತದಲ್ಲಿ ವಿಕಲಚೇತನ ಯುವತಿ ಕೂಡ ಪ್ರತಾಣ ಬೆಳೆಸಿದ್ದರು. ವಿಶಾಲಾಕ್ಷಿ ಪುತ್ರಿ ಹುಟ್ಟಿದಾಗಿನಿಂದ ಅಂಗವಿಕಲತೆಯನ್ನು ಅನುಭವಿಸಿಸುತ್ತಿದ್ದರು. ಹುಟ್ಟಿನಿಂದಲೂ ಪೊಲಿಯೋ ರೋಗಕ್ಕೆ ತುತ್ತಾಗಿದ್ದರು. ಇದೀಗ ದೇವರ ದರ್ಶನಕ್ಕೆಂದು ತೆರಳಿದ್ದ ಸಂದರ್ಭದಲ್ಲಿ, ನಡೆದ ಅಪಘಾತದಲ್ಲಿ ಈ ವಿಕಲ ಚೇತನ ಯುವತಿ ಒಬ್ಬಳೇ ಬದುಕುಳಿದಿದ್ದಾರೆ.

ಪ್ರತಿ ವರ್ಷ ಕೂಡ ದೇವರ ದರ್ಶನಕ್ಕೆ ಹೋಗುತ್ತಿದ್ದರು. ಆದರೆ ಈ ವರ್ಷ ಇಷ್ಟು ಜನರ ಆಯಸ್ಸು ಮುಗಿದಿತ್ತು ಎನಿಸುತ್ತದೆ. ಎಲ್ಲರೂ ಒಂದೇ ದಿನ ಸಾವನ್ನಪ್ಪಿದ್ದಾರೆ. ಬದುಕುಳಿದ ಅಂಗವಿಕಲ ಯುವತಿ ಕಂಡು ಗ್ರಾಮಸ್ಥರು ಕಣ್ಣೀರು ಹಾಕಿದ್ದಾರೆ. ಮೊದಲೇ ಬದುಕು ಹೇಗೆ ಎಂಬ ಚಿಂತೆಯಾಗಿತ್ತು. ಹೇಗೊಕ ತಾಯಿ ಕೆಲಸ ಮಾಡಿಕೊಂಡು ಸಾಕುತ್ತಿದ್ದರು. ಆದರೆ ಈಗ ನೋಡಿಕೊಳ್ಳುವ ಪೋಷಕರೆ ಇಲ್ಲದೆ ಇರುವಾಗ ಆ ಯುವತಿಯ ಕಥೆ ಏನು ಎಂಬುದೇ ಎಲ್ಲರನ್ನು ಕಾಡುತ್ತಿರುವ ಪ್ರಶ್ನೆಯಾಗಿದೆ. ಇನ್ನು ಮೃತದೇಹಗಳು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿಗೆ ತಲುಪಿಲ್ಲ. ಆಸ್ಪತ್ರೆಯಲ್ಲಿಯೇ ಇದ್ದು, ಸುಭದ್ರಬಾಯಿ, ಮಾನಸ, ಮಂಜುಳಾ, ಆದರ್ಶ, ಆರ್ಯ, ವಿಶಾಲಾಕ್ಷಿ, ರೂಪಾಬಾಯಿ, ನಂದನ, ಅಂಜಲಿ, ನಾಗೇಶ್ ರಾವ್, ಅರುಣ ಕುಮಾರ, ಮಂಜುಳಾ ಬಾಯಿ, ಭಾಗ್ಯಾ ಬಾಯಿ ಮೃತರಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಉತ್ತರಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ : ಕಾಲ್ತುಳಿತಕ್ಕೆ 80 ಕ್ಕೂ ಹೆಚ್ಚು ಮಂದಿ ಸಾವು…!

ಸುದ್ದಿಒನ್, ಜುಲೈ. 02 : ನವದೆಹಲಿ: ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೋಲೆ ಬಾಬಾರವರ ಸತ್ಸಂಗ

ಎಸ್‍ಎಸ್‍ಎಲ್‍ಸಿ, ಪಿಯು ಫಲಿತಾಂಶ ವೃದ್ಧಿಗೆ ಅಗತ್ಯ ಕಾರ್ಯಕ್ರಮ ರೂಪಿಸಿ : ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ

ಚಿತ್ರದುರ್ಗ. ಜುಲೈ.02:  2024-25ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷಾ ಫಲಿತಾಂಶ ವೃದ್ಧಿಗೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಲಿತರಿಗೆ ಕ್ಷಮೆ ಕೇಳಿ, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ, ಇಲ್ಲವಾದರೆ ಉಗ್ರ ಹೋರಾಟ : ಗೋವಿಂದ ಕಾರಜೋಳ ವಿರುದ್ದ ಸಾಮಾಜಿಕ ಸಂಘರ್ಷ ಸಮಿತಿ ಪ್ರತಿಭಟನೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜುಲೈ.02 : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲೆ ಜಾತಿ ನಿಂದನೆಯಾದಾಗ ಕೇಸು ನೀಡದೆ ಹೊಂದಿಕೊಂಡು ಹೋಗಿ

error: Content is protected !!