Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾದ ಸಿಎಂ : ಚಳ್ಳಕೆರೆ ಸೇರಿದಂತೆ ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ…!

---Advertisement---

 

ನವದೆಹಲಿ, ಜೂನ್‌ 28- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಪ್ರಸ್ತಾವನೆಗಳಿಗೆ ಶೀಘ್ರವೇ ಅನುಮೋದನೆ ನೀಡುವಂತೆ ಮನವಿಪತ್ರ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಬೆಳಗಾವಿ – ಹುನಗುಂದ- ರಾಯಚೂರು (NH748A), ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಸೂರತ್‌ ಚೆನ್ನೈ ಎಕ್ಸ್‌ಪ್ರೆಸ್‌ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್‌ಫೀಲ್ಡ್‌ ಕಾರಿಡಾರ್‌ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇನ್ನಷ್ಟು ಪ್ರಮುಖ ವಿಚಾರಗಳ ಕುರಿತು ಕೇಂದ್ರ ಸಚಿವರ ಗಮನ ಸೆಳೆದರು. ರಾಜ್ಯದಲ್ಲಿ 5225ಕಿ.ಮೀ. ಉದ್ದದ 39 ತಾತ್ವಿಕ ಅನುಮೋದನೆ ದೊರಕಿದ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಕೋರಿದರು.

 

•ದಿನಕ್ಕೆ 10000 ಪಿಸಿಯು ವಾಹನ ದಟ್ಟಣೆ ಹೊಂದಿರುವ ರಾಜ್ಯ ಹೆದ್ದಾರಿಗಳನ್ನು ಉನ್ನತೀಕರಣಕ್ಕೆ, ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ಟನೆಲ್‌ ನಿರ್ಮಾಣದ ಮೂಲಕ ಮಂಗಳೂರು ಬಂದರು ಸಂಪರ್ಕ ಇನ್ನಷ್ಟು ಸುಗಮಗೊಳಿಸಲು, ಮೈಸೂರು ನಗರದ ಮಣಿಪಾಲ್‌ ಆಸ್ಪತ್ರೆ ಜಂಕ್ಷನ್‌ (ಕೊಲಂಬಿಯ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಅನುಮೋದನೆ ಕೇಳಿದ್ದಾರೆ.

ಮೈಸೂರು ರಿಂಗ್‌ ರಸ್ತೆಯಲ್ಲಿ NH-275K ನಲ್ಲಿ 9 ಗ್ರೇಡ್‌ ಸೆಪರೇಟರುಗಳ ನಿರ್ಮಾಣ, ಬೆಳಗಾವಿ ನಗರದಲ್ಲಿ ಹಳೆ NH4 ನಲ್ಲಿ ಮೇಲುಸೇತುವೆ ನಿರ್ಮಾಣ, ಬೆಳಗಾವಿ ಜಿಲ್ಲೆಯ ಗೋಕಾಕ್‌ ಜಲಪಾತದಲ್ಲಿ ಕೇಬಲ್‌ ಕಾರ್‌ ಸೌಲಭ್ಯ ಕಲ್ಪಿಸುವ ಯೋಜನೆ, ಕಿತ್ತೂರು ಪಟ್ಟಣದಿಂದ ಬೈಲಹೊಂಗಲವನ್ನು ಸಂಪರ್ಕಿಸುವ ರಸ್ತೆಯ ಸುಧಾರಣೆ. ಕಲಬುರಗಿ ಮತ್ತು ರಾಯಚೂರಿನಲ್ಲಿ ಬೈಪಾಸ್‌ ನಿರ್ಮಾಣ, NH-373 ರ ಬೇಲೂರು ಚಿಕ್ಕಮಗಳೂರು ವಿಭಾಗದಲ್ಲಿ ಚತುಷ್ಪಧ ನಿರ್ಮಾಣ, ಚಳ್ಳಕೆರೆ ಪಟ್ಟಣ ವ್ಯಾಪ್ತಿಯಲ್ಲಿ NH-150A ಯ ಒಂದು ಬಾರಿ ಸುಧಾರಣೆ, ರಾಷ್ಟ್ರೀಯ ಹೆದ್ದಾರಿ NH-766 ರ 106 ಕಿ.ಮೀ. ರಸ್ತೆಯನ್ನು ಚತುಷ್ಪಥ, ಆರು ಪಥದ ಹೆದ್ದಾರಿಯಾಗಿ ಅಭಿವೃದ್ಧಿ ಪಡಿಸುವುದು ಸೇರಿದಂತೆ ಹಲವು ಮನವಿಗಳನ್ನು ಇಟ್ಟಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment