Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಂಘಟನೆಗೆ ಸಮಾಜ ಮತ್ತು ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಶಕ್ತಿಯಿರಬೇಕು :  ಲೇಖಕ ಹೆಚ್.ಆನಂದ್‍ಕುಮಾರ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 28 : ಸಂಘಟನೆಗೆ ಸಮಾಜ ಮತ್ತು ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಶಕ್ತಿಯಿರಬೇಕೆಂದು ಲೇಖಕ ಹೆಚ್.ಆನಂದ್‍ಕುಮಾರ್ ತಿಳಿಸಿದರು.

ದುರ್ಗದ ಸಿರಿ ಹೊಟೇಲ್ ಪಕ್ಕದ ರಸ್ತೆಯಲ್ಲಿರುವ ಕಟ್ಟಡದಲ್ಲಿ ಶುಕ್ರವಾರ ಪ್ರಜಾ ಕಲ್ಯಾಣ ಸಮಿತಿ ಕೇಂದ್ರ ಕಚೇರಿ ಉದ್ಗಾಟನೆ ಮತ್ತು ಲೋಗೋ ಅನಾವರಣಗೊಳಿಸಿ ಮಾತನಾಡಿದರು.

ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಕೀಲ ವೃತ್ತಿ ಆರಂಭಿಸಿದ ಪವಿತ್ರವಾದ ದಿನದಂದು ಪ್ರಜಾ ಕಲ್ಯಾಣ ಸಮಿತಿ ಕೇಂದ್ರ ಕಚೇರಿ ಉದ್ಗಾಟಿಸುತ್ತಿರುವುದು ಅತ್ಯಂತ ಸಂತೋಷದ ಸಂಗತಿ. ದೇಶದಲ್ಲಿ ಅಸ್ಪøಶ್ಯರು, ಶೋಷಿತರು, ದಲಿತರು, ಹಿಂದುಳಿದವರು ಸೇರಿದಂತೆ ಎಲ್ಲಾ ಜಾತಿ ಧರ್ಮದವರಿಗೂ ಅಂಬೇಡ್ಕರ್ ಸಮಾನತೆ ನೀಡುವುದಕ್ಕಾಗಿಯೇ ಸಂವಿಧಾನವನ್ನು ರಚಿಸಿ ಕೊಡುಗೆಯಾಗಿ ಅರ್ಪಿಸಿದ್ದಾರೆ. ಅಂತಹ ಮಹಾನ್ ನಾಯಕನ ದಾರಿಯಲ್ಲಿ ಎಲ್ಲರೂ ಸಾಗಬೇಕಿದೆ ಎಂದು ಹೇಳಿದರು.

ಮೀಸಲಾತಿಯಿಲ್ಲದ ಕಾಲ, ಮನುವಾದ ಉತ್ತುಂಗದಲ್ಲಿದ್ದ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದೊಡ್ಡ ದೊಡ್ಡ ಹುದ್ದೆಗಳನ್ನು ಧಿಕ್ಕರಿಸಿ ದೇಶಕ್ಕೆ ಸಂವಿಧಾನ ನೀಡುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ವಿಶ್ವನಾಯಕ ಎನಿಸಿಕೊಂಡರು. ಪರಿಸರವನ್ನು ರಕ್ಷಿಸಿದರೆ ಪ್ರತಿಯೊಂದು ಜೀವಿಯೂ ನೆಮ್ಮದಿಯಾಗಿ ಬದುಕಲು ಸಾಧ್ಯ. ಇಲ್ಲದಿದ್ದರೆ ವಿನಾಶದತ್ತ ಹೋಗಬೇಕಾಗುತ್ತದೆ. ಸಮ ಸಮಾಜ ನಿರ್ಮಾಣಕ್ಕೆ ಟೊಂಕ ಕಟ್ಟಿ ನಿಂತು ಎಲ್ಲಿಯೇ ಅನ್ಯಾಯ, ಅಕ್ರಮ, ದಬ್ಬಾಳಿಕೆ, ದೌರ್ಜನ್ಯ ನಡೆದರೂ ಹೋರಾಟಕ್ಕೆ ಮುಂಚೂಣಿಯಲ್ಲಿರಬೇಕೆಂದು ಹೆಚ್.ಆನಂದ್‍ಕುಮಾರ್ ಪ್ರಜಾ ಕಲ್ಯಾಣ ಸಮಿತಿ ಪದಾಧಿಕಾರಿಗಳಿಗೆ ಕರೆ ನೀಡಿದರು.

ಪ್ರಜಾ ಕಲ್ಯಾಣ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಹರೀಶ್ ಟಿ.ಎನ್. ಅಧ್ಯಕ್ಷತೆ ವಹಿಸಿದ್ದರು.
ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಜಾನಪದ ಜಾಗೃತಿ ಪರಿಷತ್ ರಾಜ್ಯಾಧ್ಯಕ್ಷ ಹೆಚ್.ಪ್ಯಾರೇಜಾನ್, ಪ್ರಜಾ ಕಲ್ಯಾಣ ಸಮಿತಿ ರಾಜ್ಯ ಕಾನೂನು ಸಲಹೆಗಾರರಾದ ಪಲ್ಲವಿ ಸಿ. ಸಂಘಟನಾ ಕಾರ್ಯದರ್ಶಿ ಸುಶಾಂತ್‍ಕುಮಾರ್ ಆರ್. ಪ್ರಧಾನ ಕಾರ್ಯದರ್ಶಿ ವಿಜಯ್‍ಕುಮಾರ್ ಕೆ.ವಿ. ಉಪಾಧ್ಯಕ್ಷ ಟಿ.ಓಬಳೇಶ್, ಖಜಾಂಚಿ ಆರ್.ಅರುಣ್‍ಕುಮಾರ್, ಶ್ರೀನಿವಾಸ್‍ನಾಯ್ಕ ವಿ. ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...