ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 28 : ಸಂಘಟನೆಗೆ ಸಮಾಜ ಮತ್ತು ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಶಕ್ತಿಯಿರಬೇಕೆಂದು ಲೇಖಕ ಹೆಚ್.ಆನಂದ್ಕುಮಾರ್ ತಿಳಿಸಿದರು.


ದುರ್ಗದ ಸಿರಿ ಹೊಟೇಲ್ ಪಕ್ಕದ ರಸ್ತೆಯಲ್ಲಿರುವ ಕಟ್ಟಡದಲ್ಲಿ ಶುಕ್ರವಾರ ಪ್ರಜಾ ಕಲ್ಯಾಣ ಸಮಿತಿ ಕೇಂದ್ರ ಕಚೇರಿ ಉದ್ಗಾಟನೆ ಮತ್ತು ಲೋಗೋ ಅನಾವರಣಗೊಳಿಸಿ ಮಾತನಾಡಿದರು.
ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಕೀಲ ವೃತ್ತಿ ಆರಂಭಿಸಿದ ಪವಿತ್ರವಾದ ದಿನದಂದು ಪ್ರಜಾ ಕಲ್ಯಾಣ ಸಮಿತಿ ಕೇಂದ್ರ ಕಚೇರಿ ಉದ್ಗಾಟಿಸುತ್ತಿರುವುದು ಅತ್ಯಂತ ಸಂತೋಷದ ಸಂಗತಿ. ದೇಶದಲ್ಲಿ ಅಸ್ಪøಶ್ಯರು, ಶೋಷಿತರು, ದಲಿತರು, ಹಿಂದುಳಿದವರು ಸೇರಿದಂತೆ ಎಲ್ಲಾ ಜಾತಿ ಧರ್ಮದವರಿಗೂ ಅಂಬೇಡ್ಕರ್ ಸಮಾನತೆ ನೀಡುವುದಕ್ಕಾಗಿಯೇ ಸಂವಿಧಾನವನ್ನು ರಚಿಸಿ ಕೊಡುಗೆಯಾಗಿ ಅರ್ಪಿಸಿದ್ದಾರೆ. ಅಂತಹ ಮಹಾನ್ ನಾಯಕನ ದಾರಿಯಲ್ಲಿ ಎಲ್ಲರೂ ಸಾಗಬೇಕಿದೆ ಎಂದು ಹೇಳಿದರು.
ಮೀಸಲಾತಿಯಿಲ್ಲದ ಕಾಲ, ಮನುವಾದ ಉತ್ತುಂಗದಲ್ಲಿದ್ದ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದೊಡ್ಡ ದೊಡ್ಡ ಹುದ್ದೆಗಳನ್ನು ಧಿಕ್ಕರಿಸಿ ದೇಶಕ್ಕೆ ಸಂವಿಧಾನ ನೀಡುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ವಿಶ್ವನಾಯಕ ಎನಿಸಿಕೊಂಡರು. ಪರಿಸರವನ್ನು ರಕ್ಷಿಸಿದರೆ ಪ್ರತಿಯೊಂದು ಜೀವಿಯೂ ನೆಮ್ಮದಿಯಾಗಿ ಬದುಕಲು ಸಾಧ್ಯ. ಇಲ್ಲದಿದ್ದರೆ ವಿನಾಶದತ್ತ ಹೋಗಬೇಕಾಗುತ್ತದೆ. ಸಮ ಸಮಾಜ ನಿರ್ಮಾಣಕ್ಕೆ ಟೊಂಕ ಕಟ್ಟಿ ನಿಂತು ಎಲ್ಲಿಯೇ ಅನ್ಯಾಯ, ಅಕ್ರಮ, ದಬ್ಬಾಳಿಕೆ, ದೌರ್ಜನ್ಯ ನಡೆದರೂ ಹೋರಾಟಕ್ಕೆ ಮುಂಚೂಣಿಯಲ್ಲಿರಬೇಕೆಂದು ಹೆಚ್.ಆನಂದ್ಕುಮಾರ್ ಪ್ರಜಾ ಕಲ್ಯಾಣ ಸಮಿತಿ ಪದಾಧಿಕಾರಿಗಳಿಗೆ ಕರೆ ನೀಡಿದರು.
ಪ್ರಜಾ ಕಲ್ಯಾಣ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಹರೀಶ್ ಟಿ.ಎನ್. ಅಧ್ಯಕ್ಷತೆ ವಹಿಸಿದ್ದರು.
ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಜಾನಪದ ಜಾಗೃತಿ ಪರಿಷತ್ ರಾಜ್ಯಾಧ್ಯಕ್ಷ ಹೆಚ್.ಪ್ಯಾರೇಜಾನ್, ಪ್ರಜಾ ಕಲ್ಯಾಣ ಸಮಿತಿ ರಾಜ್ಯ ಕಾನೂನು ಸಲಹೆಗಾರರಾದ ಪಲ್ಲವಿ ಸಿ. ಸಂಘಟನಾ ಕಾರ್ಯದರ್ಶಿ ಸುಶಾಂತ್ಕುಮಾರ್ ಆರ್. ಪ್ರಧಾನ ಕಾರ್ಯದರ್ಶಿ ವಿಜಯ್ಕುಮಾರ್ ಕೆ.ವಿ. ಉಪಾಧ್ಯಕ್ಷ ಟಿ.ಓಬಳೇಶ್, ಖಜಾಂಚಿ ಆರ್.ಅರುಣ್ಕುಮಾರ್, ಶ್ರೀನಿವಾಸ್ನಾಯ್ಕ ವಿ. ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















