Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಉತ್ತರ ಕರ್ನಾಟಕ ಅಭಿವೃದ್ಧಿಗೆ ರಾಜ್ಯ ಇಬ್ಬಾಗವಾಗಬೇಕು : ಚಂದ್ರಶೇಖರ ಸ್ವಾಮೀಜಿ..!

---Advertisement---

 

ಬೆಂಗಳೂರು: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಸ್ಥಾನದ ಬಗ್ಗೆ ಮಾತನಾಡಿದ್ದ ಚಂದ್ರಶೇಖರ ಸ್ವಾಮೀಜಿ, ಇದೀಗ ಆ ವಿಚಾರಕ್ಕೆ ಸ್ಪಷ್ಟನೆ ನೀಡಿದ್ದಾರೆ. ಖಾಸಗಿ ಚಾನೆಲ್ ಒಂದಕ್ಕೆ ಮಾತನಾಡಿರುವ ವಿಶ್ಚ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ, ಕಾರ್ತಿಕ್ರಮದಲ್ಲಿ ನಾನು ಮಾತನಾಡಿದ್ದು ವೈಜ್ಞಾನಿಕವಾಗಿ ಅಷ್ಟೇ. ಸಿಎಂ ವಿಚಾರವಲ್ಲದೇ ಬೇರೆ ಮೂರೂ ವಿಚಾರಗಳನ್ನು ಪ್ರಸ್ತಾಪ ಮಾಡಿದ್ದೆ. ಅದರಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆಯೂ ಮಾತನಾಡಿದ್ದೆ. ಕೆಂಪೇಗೌಡ ಜಯಂತಿಯ ದಿನ ನಾನು ಆಡಿದ ಮಾತುಗಳಿಗೆ ನಾನು ಈಗಲೂ ಬದ್ಧವಾಗಿದ್ದೇನೆ. ಶಿವಕುಮಾರ್ ಕಾಂಗ್ರೆಸ್ ಪಕ್ಷಕ್ಕಾಗಿ ಮೊದಲಿನಿಂದಲೂ ಕಷ್ಟಪಟ್ಟಿದ್ದಾರೆ. 135 ಸೀಟು ಬರಬೇಕು ಎಂದರೆ ಡಿಕೆ ಶಿವಕುಮಾರ್ ಅವರ ಪರಿಶ್ರಮ ಸಾಕಷ್ಟಿದೆ. ಇವರ ಪರಿಶ್ರಮ ಬಹಳ ಇದೆ. ಹಾಗೇ ಬಹಳ ದಿನಗಳಿಂದಾನೂ ಸಿಎಂ ಆಗಬೇಕೆಂಬ ಆಸೆ ಅವರಲ್ಲೂ ಇದೆ. ಅವರು ಸಿಎಂ ಆದರೆ ಒಳ್ಳೆಯದು. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಹೀಗಾಗಿ ವೇದಿಕೆ ಮೇಲೆಯೂ ಅದನ್ನೇ ಹೇಳಿದೆ ಎಂದಿದ್ದಾರೆ.

ಅಂದು ನಾನು ಮಾತನಾಡಿದ್ದಿದ್ದು ಬೆಂಗಳೂರು ವಿಭಜನೆಯ ಬಗ್ಗೆ. ಬೆಂಗಳೂರನ್ನು 3 ಅಥವಾ 5 ಭಾಗ ಮಾಡುವುದು ಬೇಡ ಎಂಬ ವಿಚಾರದ ಬಗ್ಗೆಯೂ ಮಾತನಾಡಿದ್ದೆ. ಕೆಂಪೇಗೌಡರೆಂದರೆ ಬೆಂಗಳೂರು ಬೆಂಗಳೂರು ಎಂದರೆ ಕೆಂಪೇಗೌಡರು. ಆದ್ದರಿಂದ ಬೆಂಗಳೂರು ವಿಭಜನೆ ಮಾಡಿದರೆ ಕೆಂಪೇಗೌಡರ ಹೆಸರು ಹೋಗುತ್ತದೆ. ಕೆಂಪೇಗೌಡ ಉಳಿಯಬೇಕಾದರೆ ಬೆಂಗಳೂರು ಒಂದಾಗಿರಬೇಕು ಎಂದಿದ್ದೆ.

ಎರಡನೇಯ ಅಂಶವೆಂದರೆ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಎರಡು ಭಾಗ ಆಗಬೇಕು ಎಂಬುದು. ಎರಡು ಭಾಗ ಆದಾಗ ಮಾತ್ರ ಉತ್ತರ ಕರ್ನಾಟಕದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...