Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಜರಂಗದಳ ಸೇವಾ ಸಪ್ತಾಹ : ವಾಸುದೇವರೆಡ್ಡಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್.29 : ಬಜರಂಗದಳ ಸೇವಾ ಸಪ್ತಾಹದ ಅಂಗವಾಗಿ ವಿಶ್ವಹಿಂದು ಪರಿಷತ್, ಬಜರಂಗದಳದ ವತಿಯಿಂದ ಜೋಗಿಮಟ್ಟಿ ರಸ್ತೆಯಲ್ಲಿರುವ ವಾಸುದೇವರೆಡ್ಡಿ ಶಾಲಾ ಆವರಣದಲ್ಲಿ ಶನಿವಾರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಡಾ.ಯಶಸ್ ಹೆಚ್. ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಿ ಮಾತನಾಡುತ್ತ ಆಧುನಿಕ ಜೀವನ ಶೈಲಿ ಹಾಗೂ ಬದಲಾದ ಆಹಾರ ಪದ್ದತಿಯಿಂದ ಪ್ರತಿಯೊಬ್ಬರು ಒಂದಲ್ಲ ಒಂದು ರೀತಿಯ ಕಾಯಿಲೆಗಳಿಂದ ಬಳಲುವುದು ಸಹಜ. ರಕ್ತದೊತ್ತಡ, ಸಕ್ಕರೆ ಕಾಯಿಲೆಯುಳ್ಳವರು ಆಗಿಂದಾಗ್ಗೆ ತಪಾಸಣೆ ಮಾಡಿಸಿಕೊಂಡು ಸಕಾಲಕ್ಕೆ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.

ಧೂಮಪಾನ, ಮದ್ಯಪಾನ ಇವುಗಳಿಂದ ಪ್ರತಿಯೊಬ್ಬರು ದೂರವಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಅಧಿಕ ಕೊಬ್ಬಿನಂಶವುಳ್ಳ ಆಹಾರವನ್ನು ಸೇವಿಸುವುದು ಹೃದಯಾಘಾತವನ್ನು ಆಹ್ವಾನಿಸಿದಂತೆ ಎಂದು ತಿಳಿಸಿದರು.
ಡಾ.ಹರ್ಷಿತಾರವರು ಆರೋಗ್ಯ ತಪಾಸಣೆ ನಡೆಸಿದರು.

ವಿಶ್ವಹಿಂದು ಪರಿಷತ್ ನಗರಾಧ್ಯಕ್ಷ ಅಶೋಕ್, ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಪ್ರಭಂಜನ್, ಜಿಲ್ಲಾ ಸಂಯೋಜಕ ಸಂದೀಪ್, ನಗರ ಕಾರ್ಯದರ್ಶಿ ರಂಗಸ್ವಾಮಿ, ನಗರ ಸಂಯೋಜಕ ಕಿಶೋರ್, ನಗರ ಸೇವಾ ಪ್ರಮುಖ್ ರಘು, ಜಿಲ್ಲಾ ಕಾರ್ಯಕಾರಿ ಸದಸ್ಯ ವಿಠಲ್, ವಿಜಯ್, ರಘು, ಬಸವರಾಜ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...