Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟೀಂ ಇಂಡಿಯಾದಲ್ಲಿ ಮತ್ತೊಂದು ಯುಗಾಂತ್ಯ : ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ T20 ಕ್ರಿಕೆಟ್‌ಗೆ ವಿದಾಯ…!

---Advertisement---

ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ: ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ T20 ವಿಶ್ವಕಪ್ ಗೆದ್ದ ನಂತರ T20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದರು. ಇಬ್ಬರೂ ಒಂದೇ ವೇದಿಕೆಯಲ್ಲಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಹೇಳಿದ್ದಾರೆ. ಇದರೊಂದಿಗೆ ಇಬ್ಬರು ಭಾರತೀಯ ದಿಗ್ಗಜರ ಟಿ20 ವೃತ್ತಿಜೀವನ ಮುಗಿದಂತೆ ಕಾಣುತ್ತಿದೆ.

ಟಿ20 ವಿಶ್ವಕಪ್ ಫೈನಲ್‌ನಲ್ಲಿ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಇದು ನನ್ನ ಕೊನೆಯ ಟಿ20 ವಿಶ್ವಕಪ್ ಟೂರ್ನಿಯಾಗಿದೆ. ಈ ಗೆಲುವಿನೊಂದಿಗೆ ಟಿ20 ಅಂತರಾಷ್ಟ್ರೀಯ ವೃತ್ತಿಜೀವನವನ್ನು ಅಂತ್ಯಗೊಳಿಸಲು ಬಯಸುತ್ತೇನೆ ಎಂದು ಹೇಳಿದರು.

ವಿಶ್ವಕಪ್ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ್ದ ರೋಹಿತ್ ಶರ್ಮಾ, ‘ಭಾರತದ ಪರವಾಗಿ ನಾನು ಟಿ20 ಪಂದ್ಯದ ಮೂಲಕ ವೃತ್ತಿಜೀವನ ಆರಂಭಿಸಿದ್ದೇನೆ. ಟಿ20 ಅಂತರಾಷ್ಟ್ರೀಯ ವೃತ್ತಿ ಜೀವನಕ್ಕೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯ ಇನ್ನೊಂದಿಲ್ಲ. ಹೀಗಾಗಿ ಈ ರೀತಿಯ ಕ್ರಿಕೆಟ್‌ಗೆ ವಿದಾಯ ಹೇಳುತ್ತಿದ್ದೇನೆ ಎಂದು ರೋಹಿತ್ ಶರ್ಮಾ ಹೇಳಿದರು.

ವಿರಾಟ್ ಕೊಹ್ಲಿ ಟೀಂ ಇಂಡಿಯಾ ಪರ 125 ಟಿ20 ಪಂದ್ಯಗಳನ್ನಾಡಿದ್ದು, ಒಟ್ಟು 117 ಇನ್ನಿಂಗ್ಸ್ ಆಡಿದ್ದಾರೆ.  3056 ಎಸೆತಗಳನ್ನು ಎದುರಿಸಿ 4188 ರನ್ ಗಳಿಸಿ, 38 ಅರ್ಧಶತಕ ಮತ್ತು 1 ಶತಕ ಗಳಿಸಿದ್ದಾರೆ.

ರೋಹಿತ್ ಶರ್ಮಾ ಟೀಂ ಇಂಡಿಯಾ ಪರ ಒಟ್ಟು 159 ಟಿ20 ಪಂದ್ಯಗಳನ್ನಾಡಿದ್ದಾರೆ. ಅವರು 151 ಇನ್ನಿಂಗ್ಸ್‌ಗಳಲ್ಲಿ ಬ್ಯಾಟ್ ಮಾಡಿದ್ದಾರೆ. 3003 ಎಸೆತಗಳಲ್ಲಿ 4231 ರನ್ ಗಳಿಸಿ, 5 ಶತಕ ಮತ್ತು 32 ಅರ್ಧಶತಕಗಳನ್ನು ಗಳಿಸಿದ್ದಾರೆ.

ಇದೀಗ ವಿಶ್ವಕಪ್ ಗೆಲುವಿನೊಂದಿಗೆ ಇಬ್ಬರು ದಿಗ್ಗಜರು ತಮ್ಮ ಟಿ20 ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಒಟ್ಟಿಗೆ ಅಂತ್ಯಗೊಳಿಸಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂದಿನ ದಿನಗಳಲ್ಲಿ ಭಾರತ ಟಿ20 ತಂಡದಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment