Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ : ಲಿಂಗಾಯತರಿಗೆ ನೀಡಲು ಒತ್ತಾಯ

ಡಿಕೆ ಶಿವಕುಮಾರ್
---Advertisement---

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ಹುದ್ದೆಗಳ ಹೆಚ್ಚಳದ್ದೇ ಸುದ್ದಿಯಾಗಿದೆ. ಸಿಎಂ ಸ್ಥಾನ ಬದಲಾವಣೆಯ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ನಡುವೆ ಅಂತ ವೈಮನಸ್ಸಾಗಲಿ, ಒಬ್ಬರಿಗೊಬ್ಬರು ವಿರೋಧ ಹೇಳಿಕೆ ಕೊಡುವುದಾಗಲಿ ಕಾಣಿಸುತ್ತಿಲ್ಲ. ಆದರೆ ಡಿಸಿಎಂ ಹುದ್ದೆಗಳ ಹೆಚ್ಚಳದ ಒತ್ತಡವನ್ನು ಮಣಿಸಲು ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರ ನೂತನ ನೇಮಕದ ಚಿಂತನೆ ನಡೆಸಿದೆ ಎನ್ನಲಾಗಿದೆ.

ಅಧಿವೇಶನದ ಬಳಿಕ ಕೆಪಿಸಿಸಿ ನೂತನ ಅಧ್ಯಕ್ಷರ ಬದಲಾವಣೆಯ ಸುಳಿವು ಸಿಕ್ಕಿದೆ. ಬದಲಾವಣೆಯ ಸುಳಿವು ಸಿಗುತ್ತಿದ್ದಂತೆ ಅಧ್ಯಕ್ಷಗಿರಿಗೆ ಡಿಮ್ಯಾಂಡ್ ಜಾಸ್ತಿಯಾಗಿದೆ. ಈ ಬಾರಿ ಲಿಂಗಾಯತರಿಗೆ ನೀಡಬೇಕೆಂದು ಒತ್ತಾಯಗಳು ಕೇಳಿ ಬರುತ್ತಿವೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷರಾಗಿ ದಲಿತರಿಗೆ, ಬ್ರಾಹ್ಮಣರಿಗೆ, ಒಕ್ಕಲಿಗರಿಗೆ ಅವಕಾಶ ನೀಡಿ ಆಗಿದೆ. ಈಗ ಲಿಂಗಾಯತರಿಗೆ ನೀಡಿ ಎಂಬ ಒತ್ತಾಯಗಳು ಕೇಳಿ ಬರುತ್ತಿವೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ‌, ಬಿ.ಕೆ. ಹರಿಪ್ರಸಾದ್ ಲಾಬಿ ನಡೆಸುತ್ತಿದ್ದಾರೆ. ಅಲ್ಲದೇ ಸತೀಶ್ ಜಾರಕಿಹೊಳಿ‌, ಕೆ.ಎನ್. ರಾಜಣ್ಣ ಹೆಸರುಗಳು ಮುನ್ನೆಲೆಗೆ ಬಂದಿವೆ. ಈಗಾಗಲೇ ನಾನು ಅಧ್ಯಕ್ಷನಾಗಲು ಸಿದ್ಧ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಮತ್ತೊಂದೆದೆ ಹಿಂದುಳಿದ ವರ್ಗಗಳ ಕೋಟಾದಡಿ ಬಿ.ಕೆ. ಹರಿಪ್ರಸಾದ್ ಹೆಸರು ಚರ್ಚೆಯಾಗುತ್ತಿದೆ. ಆದರೆ ಜಾತಿ ಮತ್ತು ಪ್ರಾದೇಶಿಕ ಆಧಾರಿತವಾಗಿ ಅಧ್ಯಕ್ಷರ ಆಯ್ಕೆ ಮಾಡಲು ಹೈ ಕಮಾಂಡ್‌ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಈ ಬಾರಿ ಲಿಂಗಾಯತ ಹಾಗೂ ಕಲ್ಯಾಣ ಕರ್ನಾಟಕದ ನಾಯಕರಿಗೆ ಮಣೆ ಹಾಕುವ ಸಾಧ್ಯತೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಶ್ವರ್ ಖಂಡ್ರೆ ಅವರ ಹೆಸರು ಮುನ್ನೆಲೆಯಲ್ಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...