Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ : ಸಿ.ಎಂ. ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು ಜುಲೈ. 1: ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಂಗಳೂರು ಪ್ರೆಸ್ ಕ್ಲಬ್ , ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!