Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ನೋಡಲು ಕಡೆಗೂ ಪರಪ್ಪನ ಅಗ್ರಹಾರಕ್ಕೆ ಬಂದ ತಾಯಿ ಹಾಗೂ ಸಹೋದರ..!

Facebook
Twitter
Telegram
WhatsApp

 

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ರೇಣುಕಾಸ್ವಾಮಿಗೆ ಎಚ್ಚರಿಕೆ ನೀಡುವುದಕ್ಕೆ ಹೋಗಿ ದರ್ಶನ್ ಅಂಡ್ ಗ್ಯಾಂಗ್ ಕೊಲೆಯನ್ನೇ ಮಾಡಿ, ಜೈಲು ಪಾಲಾಗಿದ್ದಾರೆ. ಅದರಲ್ಲಿ ದರ್ಶನ್ ಎರಡನೇ ಆರೋಪಿಯಾಗಿದ್ದಾರೆ. ಜೈಲು ಸೇರಿದಾಗಿನಿಂದ ತಾಯಿ ಮೀನಾ ಅವರಾಗಲೀ, ಸಹೋದರ ದಿನಕರ್ ತೂಗುದೀಪ ಅವರಾಗಲೀ ಭೇಟಿ ಕೊಟ್ಟಿರಲಿಲ್ಲ. ಇದೀಗ ಪರಪ್ಪನ ಅಗ್ರಹಾರ ಜೈಲಿಗೆ ತಾಯಿ ಮತ್ತು ತಮ್ಮ ಭೇಟಿ ನೀಡಿದ್ದಾರೆ.

ದರ್ಶನ್ ದೊಡ್ಡ ಸೆಲೆಬ್ರೆಟಿ. ಅವರು ಇದು ಎರಡನೇ ಸಲ ಜೈಲಿಗೆ ಹೋಗುತ್ತಿರುವುದು. ಹೀಗಾಗಿ ಎಲ್ಲರ ಫೋಕಸ್ ದರ್ಶನ್ ಮೇಲಿದೆ. ಇದರ ನಡುವೆ ರೇಣುಕಾಸ್ವಾಮಿಯ ಅಶ್ಲೀಲ ಮೆಸೇಜ್ ಗಳ ಕಾಟ ಒಂದೊಂದೆ ಒಂದೊಂದೆ ಬಯಲಿಗೆ ಬರುತ್ತಿದೆ. ಅದರಲ್ಲೂ ಇಂಡಸ್ಟ್ರಿಯಲ್ಲಿರುವ ನಾಯಕಿಯರಿಗೇನೆ ಆ ರೀತಿ ಕೆಟ್ಟದಾಗಿ ಮೆಸೇಜ್ ಮಾಡಿರುವುದು ಬೆಳಕಿಗೆ ಬರುತ್ತಿದೆ.

ಇದರ ನಡುವೆ ದರ್ಶನ್ ಅವರ ಸ್ಥಿತಿ ಕಂಡು ಕನ್ನಡ ಚಿತ್ರರಂಗದ ಕೆಲವರು ಮರುಕ ವ್ಯಕ್ತಪಡಿಸುತ್ತಿದ್ದಾರೆ. ಶಿವಣ್ಸ, ಹಂಸಲೇಖ ಸೇರಿದಂತೆ ಹಲವರು ಈ ರೀತಿ ಆಗಬಾರದಿತ್ತು ಎಂದೇ ಹೇಳುತ್ತಿದ್ದಾರೆ. ಇನ್ನು ರಕ್ಷಿತಾ ಮತ್ತು‌ ಪ್ರೇಮ್ ಜೈಲಿಗೆ ಹೋಗಿ ನೋಡಿಕೊಂಡು ಬಂದಿದ್ದಾರೆ. ಹೀಗಾಗಲೇ ವಿಜಯಲಕ್ಷ್ಮೀ ಹಾಗೂ ಮಗ ವಿನಿಶ್ ಕೂಡ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ಕೊಟ್ಟು ಬಂದಿದ್ದಾರೆ. ದರ್ಶನ್ ಅವರನ್ನು ಜೈಲಿನಿಂದ ಹೊರತರಲು ವಿಜಯಲಕ್ಷ್ಮೀ ಹರಸಾಹಸ ಪಡುತ್ತಿದ್ದಾರೆ. ಇದೀಗ ತಾಯಿ ಮೀನಾ ಸಹೋದರ ದಿನಕರ್ ಜೈಲಿಗೆ ಭೇಟಿ ಕೊಟ್ಟು, ದರ್ಶನ್ ಅವರನ್ನು ಮಾತನಾಡಿಸಿಕೊಂಡು ಬಂದಿದ್ದಾರೆ. ಮಗನ ಸ್ಥಿತಿ ಕಂಡು ಮೀನಾ ಕಣ್ಣೀರು ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!