ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿತ್ತು. ಬಿಜೆಪಿಯಲ್ಲಿಯೇ ಇದ್ದ ಈಶ್ವರಪ್ಪ ಬಂಡಾಯವೆದ್ದು, ಬಿಜೆಪಿ ಅಭ್ಯರ್ಥಿಯ ವಿರುದ್ಧವೇ ಕಣಕ್ಕೆ ಇಳಿದಿದ್ದರು. ಆದರೆ ವಿಜಯೇಂದ್ರ ವಿರುದ್ಧ ಹೀನಾಯವಾಗಿ ಸೋಲು ಕಂಡಿದ್ದರು. ಗೀತಾ ಶಿವರಾಜ್ ಕುಮಾರ್ ಅವರಿಗಿಂತ ಕಡಿಮೆ ಮತಗಳನ್ನು ಪಡೆದಿದ್ದರು. ಇದೀಗ ಈಶ್ವರಪ್ಪ ಅವರನ್ನು ಬಿಜೆಪಿ ಮತ್ತೆ ಪಕ್ಷಕ್ಕೆ ಆಹ್ವಾನಿಸಿದೆ ಎಂಬ ಮಾತು ಕೇಳಿ ಬರುತ್ತಿದೆ.
ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ ಅವರು, ಹೌದು ಕರೆದಿದ್ದಾರೆ. ಆದರೆ ನನ್ನ ಅಭಿಪ್ರಾಯ ಏನು ಎಂಬುದನ್ನು ನಾನಿನ್ನು ಸ್ಪಷ್ಟವಾಗಿ ಹೇಳಿಲ್ಲ ಎಂದಿದ್ದಾರೆ. ಕೇವಲ ಚುನಾವಣೆಗಳಿಗೆ ಮಾತ್ರ ಕರೆಯುವ ಕೆಲಸಗಳಾಗುತ್ತವೆ. ನಾನು ಕಾರ್ಯಕರ್ತರೊಂದಿಗೆ ಚರ್ಚಿಸಬೇಕಾಗುತ್ತದೆ. ಪಕ್ಷದಿಂದ ಹೊರ ಬಿದ್ದಿದ್ದು ತನ್ನ ಅಸ್ತಿತ್ವಕ್ಕೇನು ತೊಂದರೆಯಾಗಿಲ್ಲ.
ಪಕ್ಷ+ ಕಾರ್ಯಕರ್ತ = ಹೀರೋ
ಪಕ್ಷ – ಕಾರ್ಯಕರ್ತ = ಜೀರೋ ಇದು ಮೊದಲಿನಿಂದಾನು ಬಂದಿರುವುದೇ.ಪಕ್ಷಕ್ಕೆ ಪ್ರಾಧಾನ್ಯತೆ ಕೊಟ್ಟುಕೊಂಡೆ ಬಂದಿದ್ದೀವಿ. ಈಗಲೂ ಕೊಟ್ಟಿದ್ದೀವಿ ಎಂದು ಹೇಳಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಕೂಡ ಟಿಕೆಟ್ ಸಿಗಲಿಲ್ಲ ಅಂತ ಕಾಂಗ್ರೆಸ್ ನತ್ತ ಬಂದಿದ್ದರು. ಇಲ್ಲಿಯೂ ಸೋಲು ಕಂಡಿದ್ದರು. ಆದರೂ ಕಾಂಗ್ರೆಸ್ ಅವರಿಗೆ ಒಳ್ಳೆಯ ಸ್ಥಾನಮಾನ ನೀಡಿ, ಗೌರವಿಸಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಮತ್ತೊಮ್ಮೆ ತಮ್ಮ ಪಕ್ಷಕ್ಕೆ ಕರೆದುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು. ಈಗ ಈಶ್ವರಪ್ಪ ಅವರನ್ನು ಪಕ್ಷಕ್ಕೆ ವಾಪಾಸ್ ಕರೆತರುವ ಪ್ರಯತ್ನ ನಡೆಯುತ್ತಿರಬಹುದು. ಹೌದು ಎಂದು ಈಶ್ಚರಪ್ಪ ಅವರೇ ಉತ್ತರವನ್ನು ನೀಡಿದ್ದಾರೆ. ಮಗನ ರಾಜಕೀಯ ಭವಿಷ್ಯಕ್ಕಾಗಿ ಟಿಕೆಟ್ ಬೇಕೆಂದು ಈಶ್ವರಪ್ಪ ಹೋರಾಡಿದರು. ಆದರು ಅದು ಸಾಧ್ಯವಾಗದೆ ಇದ್ದಾಗ ಬಂಡಾಯವೆದ್ದಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್