Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈಶ್ವರಪ್ಪ ಅವರನ್ನು ಮತ್ತೆ ಆಹ್ವಾನಿಸಿದ ಬಿಜೆಪಿ : ವಾಪಸ್ ಹೋಗ್ತಾರಾ ಈಶ್ವರಪ್ಪ..?

Facebook
Twitter
Telegram
WhatsApp

 

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿತ್ತು. ಬಿಜೆಪಿಯಲ್ಲಿಯೇ ಇದ್ದ ಈಶ್ವರಪ್ಪ ಬಂಡಾಯವೆದ್ದು, ಬಿಜೆಪಿ ಅಭ್ಯರ್ಥಿಯ ವಿರುದ್ಧವೇ ಕಣಕ್ಕೆ ಇಳಿದಿದ್ದರು. ಆದರೆ ವಿಜಯೇಂದ್ರ ವಿರುದ್ಧ ಹೀನಾಯವಾಗಿ ಸೋಲು ಕಂಡಿದ್ದರು. ಗೀತಾ ಶಿವರಾಜ್ ಕುಮಾರ್ ಅವರಿಗಿಂತ ಕಡಿಮೆ ಮತಗಳನ್ನು ಪಡೆದಿದ್ದರು‌. ಇದೀಗ ಈಶ್ವರಪ್ಪ ಅವರನ್ನು ಬಿಜೆಪಿ ಮತ್ತೆ ಪಕ್ಷಕ್ಕೆ ಆಹ್ವಾನಿಸಿದೆ ಎಂಬ ಮಾತು ಕೇಳಿ ಬರುತ್ತಿದೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ ಅವರು, ಹೌದು ಕರೆದಿದ್ದಾರೆ. ಆದರೆ ನನ್ನ ಅಭಿಪ್ರಾಯ ಏನು ಎಂಬುದನ್ನು ನಾನಿನ್ನು ಸ್ಪಷ್ಟವಾಗಿ ಹೇಳಿಲ್ಲ ಎಂದಿದ್ದಾರೆ. ಕೇವಲ ಚುನಾವಣೆಗಳಿಗೆ ಮಾತ್ರ ಕರೆಯುವ ಕೆಲಸಗಳಾಗುತ್ತವೆ. ನಾನು ಕಾರ್ಯಕರ್ತರೊಂದಿಗೆ ಚರ್ಚಿಸಬೇಕಾಗುತ್ತದೆ. ಪಕ್ಷದಿಂದ ಹೊರ ಬಿದ್ದಿದ್ದು ತನ್ನ ಅಸ್ತಿತ್ವಕ್ಕೇನು ತೊಂದರೆಯಾಗಿಲ್ಲ.
ಪಕ್ಷ+ ಕಾರ್ಯಕರ್ತ = ಹೀರೋ
ಪಕ್ಷ – ಕಾರ್ಯಕರ್ತ = ಜೀರೋ ಇದು ಮೊದಲಿನಿಂದಾನು ಬಂದಿರುವುದೇ.ಪಕ್ಷಕ್ಕೆ ಪ್ರಾಧಾನ್ಯತೆ ಕೊಟ್ಟುಕೊಂಡೆ ಬಂದಿದ್ದೀವಿ. ಈಗಲೂ ಕೊಟ್ಟಿದ್ದೀವಿ ಎಂದು ಹೇಳಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಕೂಡ ಟಿಕೆಟ್ ಸಿಗಲಿಲ್ಲ ಅಂತ ಕಾಂಗ್ರೆಸ್ ನತ್ತ ಬಂದಿದ್ದರು. ಇಲ್ಲಿಯೂ ಸೋಲು ಕಂಡಿದ್ದರು. ಆದರೂ ಕಾಂಗ್ರೆಸ್ ಅವರಿಗೆ ಒಳ್ಳೆಯ ಸ್ಥಾನಮಾನ ನೀಡಿ, ಗೌರವಿಸಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಮತ್ತೊಮ್ಮೆ ತಮ್ಮ ಪಕ್ಷಕ್ಕೆ ಕರೆದುಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು. ಈಗ ಈಶ್ವರಪ್ಪ ಅವರನ್ನು ಪಕ್ಷಕ್ಕೆ ವಾಪಾಸ್ ಕರೆತರುವ ಪ್ರಯತ್ನ ನಡೆಯುತ್ತಿರಬಹುದು. ಹೌದು ಎಂದು ಈಶ್ಚರಪ್ಪ ಅವರೇ ಉತ್ತರವನ್ನು ನೀಡಿದ್ದಾರೆ. ಮಗನ ರಾಜಕೀಯ ಭವಿಷ್ಯಕ್ಕಾಗಿ ಟಿಕೆಟ್ ಬೇಕೆಂದು ಈಶ್ವರಪ್ಪ ಹೋರಾಡಿದರು. ಆದರು ಅದು ಸಾಧ್ಯವಾಗದೆ ಇದ್ದಾಗ ಬಂಡಾಯವೆದ್ದಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!